ADVERTISEMENT
Friday, December 5, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಕೃಷ್ಣನ ನಾಡಿನಲ್ಲಿ ನಮೋ ಪಾಂಚಜನ್ಯ: ರಾಮಮಂದಿರ ಕನಸು ನನಸಾಗಲು ಉಡುಪಿಯೇ ಶಕ್ತಿ ಎಂದ ಪ್ರಧಾನಿ ಮೋದಿ

PM Modi says Udupi is the power to make the dream of Ram temple a reality

Shwetha by Shwetha
November 29, 2025
in ರಾಜ್ಯ, Newsbeat, State
{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{"transform":1},"is_sticker":false,"edited_since_last_sticker_save":true,"containsFTESticker":false,"used_sources":{"version":1,"sources":[{"id":"334294928044211","type":"ugc"}]}}

{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{"transform":1},"is_sticker":false,"edited_since_last_sticker_save":true,"containsFTESticker":false,"used_sources":{"version":1,"sources":[{"id":"334294928044211","type":"ugc"}]}}

Share on FacebookShare on TwitterShare on WhatsappShare on Telegram

ಉಡುಪಿ: ಕರಾವಳಿಯ ಪುಣ್ಯಕ್ಷೇತ್ರ, ಅನ್ನಬ್ರಹ್ಮ ಮತ್ತು ನಾದಬ್ರಹ್ಮ ನೆಲೆಸಿರುವ ರಜತಪೀಠಪುರ ಉಡುಪಿಯಲ್ಲಿ ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾದ ಲಕ್ಷಕಂಠ ಭಗವದ್ಗೀತಾ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೃಷ್ಣನ ನಾಡಿನ ಭವ್ಯ ಪರಂಪರೆಯನ್ನು ಕೊಂಡಾಡಿದ್ದಾರೆ. ಶ್ರೀಕೃಷ್ಣನ ದರ್ಶನ ಪಡೆದು, ಗೀತಾ ಪಾರಾಯಣದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ, ಅಯೋಧ್ಯೆಯ ರಾಮಮಂದಿರ ನಿರ್ಮಾಣದಲ್ಲಿ ಉಡುಪಿಯ ಧಾರ್ಮಿಕ ಮುಖಂಡರ ಪಾತ್ರವನ್ನು ಸ್ಮರಿಸಿ ಭಾವನಾತ್ಮಕವಾಗಿ ಮಾತನಾಡಿದರು. ಇದೇ ವೇಳೆ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು ಮೋದಿ ಅವರಿಗೆ ಭಾರತ ಭಾಗ್ಯವಿದಾತ ಎಂಬ ಬಿರುದು ನೀಡಿ ಗೌರವಿಸಿದರು.

ಉಡುಪಿಗೆ ಆಗಮಿಸಿದ ಪ್ರಧಾನಿ ಮೋದಿ ಅವರು ಮೊದಲು ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದರು. ದಾಸಶ್ರೇಷ್ಠ ಕನಕದಾಸರಿಗೆ ನಮನ ಸಲ್ಲಿಸುವ ಅವಕಾಶ ದೊರೆತದ್ದು ನನ್ನ ಸೌಭಾಗ್ಯ ಎಂದು ಮೋದಿ ಬಣ್ಣಿಸಿದರು. ಬಳಿಕ ಲಕ್ಷಕಂಠ ಗೀತಾ ಪಾರಾಯಣ ವೇದಿಕೆಗೆ ಆಗಮಿಸಿದ ಅವರು, ಲಕ್ಷಾಂತರ ಭಕ್ತರೊಂದಿಗೆ ಸೇರಿ ಸುಮಾರು 7 ನಿಮಿಷಗಳ ಕಾಲ ಭಗವದ್ಗೀತೆಯ ಶ್ಲೋಕಗಳನ್ನು ಪಠಿಸಿದರು. ಕಲಿಯುಗದಲ್ಲಿ ಭಗವಂತನ ನಾಮಸ್ಮರಣೆಯಿಂದ ಮಾತ್ರ ಮೋಕ್ಷ ಸಾಧ್ಯವಿದ್ದು, ಈ ಪಾರಾಯಣ ಹೊಸ ಶಕ್ತಿಯನ್ನು ತುಂಬಿದೆ ಎಂದು ಹೇಳಿದರು.

Related posts

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

December 5, 2025
ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

December 5, 2025

ರಾಮಮಂದಿರ ಹೋರಾಟದಲ್ಲಿ ಉಡುಪಿಯ ಸಿಂಹಪಾಲು

ತಮ್ಮ ಭಾಷಣವನ್ನು ಕನ್ನಡದಲ್ಲೇ ಜೈ ಶ್ರೀಕೃಷ್ಣ ಎಂದು ಆರಂಭಿಸಿದ ಮೋದಿ, ಅಯೋಧ್ಯೆ ಮತ್ತು ಉಡುಪಿಗಿರುವ ಧಾರ್ಮಿಕ ನಂಟನ್ನು ಬಿಚ್ಚಿಟ್ಟರು. ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಮತ್ತು ಧರ್ಮ ಧ್ವಜದ ಸ್ಥಾಪನೆಯ ಹಿಂದೆ ಉಡುಪಿಯ ಪೇಜಾವರ ಮಠದ ದಿವಂಗತ ವಿಶ್ವೇಶ ತೀರ್ಥ ಸ್ವಾಮೀಜಿಯವರ ಹೋರಾಟ ಮತ್ತು ಮಾರ್ಗದರ್ಶನವನ್ನು ಇಡೀ ವಿಶ್ವವೇ ಅರಿತಿದೆ ಎಂದು ಸ್ಮರಿಸಿದರು. ಅಯೋಧ್ಯೆಯಿಂದ ಉಡುಪಿಯವರೆಗೆ ಅಸಂಖ್ಯಾತ ರಾಮಭಕ್ತರಿದ್ದು, ರಾಮಮಂದಿರ ನಿರ್ಮಾಣವು ಉಡುಪಿಗೆ ಮತ್ತೊಂದು ಹೆಮ್ಮೆಯ ವಿಷಯವಾಗಿದೆ. ಅದೇನೆಂದರೆ, ಅಯೋಧ್ಯೆಯ ರಾಮಮಂದಿರ ಪರಿಷತ್ತಿನ ದ್ವಾರವೊಂದಕ್ಕೆ ದ್ವೈತ ಸಿದ್ಧಾಂತದ ಪ್ರತಿಪಾದಕರಾದ ಜಗದ್ಗುರು ಮಧ್ವಾಚಾರ್ಯರ ಹೆಸರನ್ನು ಇಡಲಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ದ್ವಾರಕಾಧೀಶನಿಂದ ಉಡುಪಿ ಕೃಷ್ಣನವರೆಗೆ

ತಮ್ಮ ತವರು ರಾಜ್ಯ ಗುಜರಾತ್ ಮತ್ತು ಉಡುಪಿಯ ನಡುವಿನ ಅವಿನಾಭಾವ ಸಂಬಂಧವನ್ನು ಪ್ರಸ್ತಾಪಿಸಿದ ಮೋದಿ, ನಾನು ದ್ವಾರಕೆಯಲ್ಲಿ ಶ್ರೀಕೃಷ್ಣನ ದರ್ಶನ ಪಡೆದಿದ್ದೆ, ಇಂದು ಉಡುಪಿಯಲ್ಲಿ ಕೃಷ್ಣನ ದರ್ಶನ ಪಡೆದಿದ್ದೇನೆ. ಇದು ನನಗೆ ವಿಶಿಷ್ಟ ಅನುಭೂತಿ ನೀಡಿದೆ. ಹಿಂದೆ ಸ್ವಚ್ಛತಾ ಅಭಿಯಾನದಲ್ಲಿ ಉಡುಪಿ ಮೊದಲ ಸ್ಥಾನ ಪಡೆದಿತ್ತು. ಇದು ಬಿಜೆಪಿಯ ದಿವಂಗತ ನಾಯಕ ವಿ.ಎಸ್. ಆಚಾರ್ಯರ ಕರ್ಮಭೂಮಿಯಾಗಿದ್ದು, ಪಕ್ಷಕ್ಕೆ ಅವರ ಕೊಡುಗೆ ಅಪಾರ ಎಂದು ಸ್ಮರಿಸಿದರು.

ಭಯೋತ್ಪಾದನೆ ವಿರುದ್ಧ ಗುಡುಗಿದ ಪ್ರಧಾನಿ

ಕಾರ್ಯಕ್ರಮದಲ್ಲಿ ದೇಶದ ಸುರಕ್ಷತೆಯ ಬಗ್ಗೆಯೂ ಮಾತನಾಡಿದ ಮೋದಿ, ಪಕ್ಕದ ರಾಷ್ಟ್ರ ಪಾಕಿಸ್ತಾನಕ್ಕೆ ಪರೋಕ್ಷವಾಗಿ ಎಚ್ಚರಿಕೆ ನೀಡಿದರು. ಪೆಹಲ್ಗಾಮ್ ಘಟನೆಯಲ್ಲಿ ಕರ್ನಾಟಕದ ಯೋಧರೂ ಹುತಾತ್ಮರಾಗಿದ್ದರು. ಹಿಂದಿನ ಸರ್ಕಾರಗಳು ಉಗ್ರ ಕೃತ್ಯಗಳಾದಾಗ ಮೌನವಾಗಿದ್ದವು. ಆದರೆ ನಮ್ಮ ಸರ್ಕಾರ ಕೈ ಕಟ್ಟಿ ಕೂರಲಿಲ್ಲ. ಆಪರೇಷನ್ ಸಿಂಧೂರ ಮೂಲಕ ತಕ್ಕ ಉತ್ತರ ನೀಡಿದ್ದೇವೆ. ಭಯೋತ್ಪಾದನೆಯನ್ನು ನಾವು ಸಹಿಸುವುದಿಲ್ಲ ಎಂದು ಖಡಕ್ ಸಂದೇಶ ರವಾನಿಸಿದರು.

ದೇಶವಾಸಿಗಳಿಗೆ ಮೋದಿ ನೀಡಿದ 9 ನವ ಸಂಕಲ್ಪಗಳು

ದೇಶದ ಅಭಿವೃದ್ಧಿ ಮತ್ತು ವರ್ತಮಾನ ಹಾಗೂ ಭವಿಷ್ಯದ ದೃಷ್ಟಿಯಿಂದ ಪ್ರತಿಯೊಬ್ಬ ಪ್ರಜೆಯೂ ಒಂಭತ್ತು ಸಂಕಲ್ಪಗಳನ್ನು ಕೈಗೊಳ್ಳುವಂತೆ ಪ್ರಧಾನಿ ಮೋದಿ ಕರೆ ನೀಡಿದರು.

1. ಜಲಸಂರಕ್ಷಣೆ: ನೀರಿನ ಪ್ರತಿಯೊಂದು ಹನಿಯನ್ನು ಉಳಿಸುವ ಪ್ರತಿಜ್ಞೆ.
2. ಪರಿಸರ ಕಾಳಜಿ: ಏಕ್ ಪೇಡ್ ಮಾ ಕೆ ನಾಮ್ (ತಾಯಿಯ ಹೆಸರಲ್ಲಿ ಒಂದು ಮರ) ಅಭಿಯಾನದ ಮೂಲಕ ಗಿಡ ನೆಡುವುದು.
3. ಬಡವರ ಏಳಿಗೆ: ಪ್ರತಿಯೊಬ್ಬರೂ ಕನಿಷ್ಠ ಒಬ್ಬ ಬಡವನ ಜೀವನ ಮಟ್ಟ ಸುಧಾರಿಸಲು ನೆರವಾಗುವುದು.
4. ಸ್ವದೇಶಿ ಮಂತ್ರ: ವೋಕಲ್ ಫಾರ್ ಲೋಕಲ್ ಅಡಿಯಲ್ಲಿ ಸ್ವದೇಶಿ ವಸ್ತುಗಳನ್ನೇ ಬಳಸುವುದು.
5. ನೈಸರ್ಗಿಕ ಕೃಷಿ: ರಾಸಾಯನಿಕ ಮುಕ್ತ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವುದು.
6. ಆರೋಗ್ಯ ಮತ್ತು ಆಹಾರ: ಸಿರಿಧಾನ್ಯಗಳ ಬಳಕೆ ಮತ್ತು ಎಣ್ಣೆ ಪದಾರ್ಥಗಳ ಸೇವನೆ ಕಡಿಮೆ ಮಾಡಿ ಆರೋಗ್ಯಪೂರ್ಣ ಜೀವನ ನಡೆಸುವುದು.
7. ಯೋಗಾಭ್ಯಾಸ: ಪ್ರತಿಯೊಬ್ಬರೂ ಯೋಗವನ್ನು ದೈನಂದಿನ ಜೀವನದ ಭಾಗವಾಗಿಸಿಕೊಳ್ಳುವುದು.
8. ಪರಂಪರೆ ಉಳಿಸಿ: ಪ್ರಾಚೀನ ಹಸ್ತಪ್ರತಿಗಳ ಸಂರಕ್ಷಣೆಗೆ ಸಹಯೋಗ ನೀಡುವುದು.
9. ತೀರ್ಥಯಾತ್ರೆ: ದೇಶದ ಕನಿಷ್ಠ 25 ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿ ದರ್ಶನ ಪಡೆಯುವ ಸಂಕಲ್ಪ ಮಾಡುವುದು.

ShareTweetSendShare
Join us on:

Related Posts

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

by admin
December 5, 2025
0

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ...! ಅಡಕೆ ಕೃಷಿ ನಮ್ಮ ಜೀವಾಳ..ಇಡೀ ಕರಾವಳಿ, ಮಲೆನಾಡು ಕೃಷಿಕರ ಬದುಕನ್ನು ಹಸನಾಗಿಸಿರೋದು ಇದೇ ಅಡಕೆ ಬೆಳೆ. ಹೌದು.. ಹಚ್ಚ ಹಸಿರಿನಿಂದ ಕಂಗೊಳಿಸುವ...

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

by Shwetha
December 5, 2025
0

ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಎಂದು ಸುಳ್ಳು ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಭ್ರಷ್ಟಾಚಾರದ ತೊಟ್ಟಿಯಲ್ಲಿ ಮುಳುಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ...

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

by Shwetha
December 5, 2025
0

ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ತೀವ್ರವಾಗಿ ಕುಸಿದಿರುವ ಹಿನ್ನೆಲೆ, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಕಿಡಿ ಕಾರಿದ್ದಾರೆ. ರೂಪಾಯಿ...

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

by Shwetha
December 5, 2025
0

ದೇಶದಲ್ಲಿ ಮಾರಾಟವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಸೈಬರ್​ ಭದ್ರತಾ ಆಪ್ ಅನ್ನು ಕಡ್ಡಾಯವಾಗಿ ಪೂರ್ವ ಅಳವಡಿಕೆ ಮಾಡುವಂತೆ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಇದೀಗ ಹಿಂಪಡೆಯಲಾಗಿದೆ. ಈ...

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

by Shwetha
December 5, 2025
0

ಬೆಂಗಳೂರು: ಕರ್ನಾಟಕದ ಲಕ್ಷಾಂತರ ಸರ್ಕಾರಿ ನೌಕರರ ಪಾಲಿಗೆ ಅತ್ಯಂತ ಮಹತ್ವದ ಮತ್ತು ಬಹುದಿನದ ನಿರೀಕ್ಷೆಯೊಂದು ಅಂತಿಮ ಹಂತಕ್ಕೆ ತಲುಪಿದೆ. ನೌಕರರ ಬದುಕಿನ ಸಂಧ್ಯಾಕಾಲದ ಆರ್ಥಿಕ ಭದ್ರತೆಯ ಪ್ರಶ್ನೆಯಾಗಿರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram