ಆಗಸ್ಟ್ 10 ರಂದು ಪ್ರವಾಹ ಪರಿಸ್ಥಿತಿ ಪರಿಶೀಲಿಸಲಿರುವ ಪ್ರಧಾನಿ ಮೋದಿ
ಹೊಸದಿಲ್ಲಿ, ಅಗಸ್ಟ್ 9: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 10 ರಂದು ಕರ್ನಾಟಕ ಮತ್ತು ಇತರ ಐದು ರಾಜ್ಯಗಳಲ್ಲಿನ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ.
ಈ ರಾಜ್ಯಗಳ ಪರಿಸ್ಥಿತಿಯ ಬಗ್ಗೆ ನವೀಕರಣವನ್ನು ಒದಗಿಸಲು ಪ್ರಧಾನ ಮಂತ್ರಿಗಳ ಕಚೇರಿ ಕರ್ನಾಟಕ, ಕೇರಳ, ಮಹಾರಾಷ್ಟ್ರ, ಉತ್ತರ ಪ್ರದೇಶ, ಬಿಹಾರ ಮತ್ತು ಅಸ್ಸಾಂ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದೆ.

ಆದರೆ, ಕೋವಿಡ್ -19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಆಸ್ಪತ್ರೆಗೆ ದಾಖಲಾಗಿರುವುದರಿಂದ, ಪ್ರಧಾನ ಮಂತ್ರಿಯ ವಿಡಿಯೋ ಸಮ್ಮೇಳನದಲ್ಲಿ ಅವರು ಭಾಗವಹಿಸುವ ಸಾಧ್ಯತೆ ಇಲ್ಲ ಎಂದು ಹೇಳಲಾಗಿದೆ. ಸಿಎಂ ಯಡಿಯೂರಪ್ಪ ಪರವಾಗಿ ಕಂದಾಯ ಸಚಿವ ಆರ್.ಅಶೋಕ ಮತ್ತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಮೋದಿಗೆ ಮಾಹಿತಿ ನೀಡಬಹುದು ಎಂದು ಹೇಳಲಾಗಿದೆ.








