ಪಿಎಂ ಕಿಸಾನ್ ಯೋಜನೆ , ರೈತರ ಖಾತೆಗಳಿಗೆ 19,500 ಕೋಟಿ ರೂ. ವರ್ಗಾವಣೆ: ಮೋದಿ
ನವದೆಹಲಿ : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 9ನೇ ಕಂತಿನ ಮೊತ್ತವನ್ನು ಬಿಡುಗಡೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ಕಿಸಾನ್ ಯೋಜನೆಯಡಿ ರೈತರ ಖಾತೆಗಳಿಗೆ 19,500 ರೂ. ಕೋಟಿ ವರ್ಗಾವಣೆ ಮಾಡಿರುವುದಾಗಿ ಮಾಹಿತಿ ನೀಡಿದ್ರು.
ಹಲವು ರೈತರ ಜತೆ ಸಂವಾದ ನಡೆಸಿ , ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ ಅವರು, ಕಿಸಾನ್ ಸಮ್ಮಾನ್ ಯೋಜನೆ 9ನೇ ಕಂತಿನಲ್ಲಿ ಸುಮಾರು 10 ಕೋಟಿ ರೈತರ ಖಾತೆಗಳಿಗೆ ಸುಮಾರು 19,500 ಕೋಟಿ ರೂ. ವರ್ಗಾವಣೆಯಾಗಿದೆ. ಇದರಿಂದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಪ್ರಯೋಜನವಾಗಲಿದೆ ಎಂದು ಮೋದಿ ಹೇಳಿದರು.
ಅಲ್ಲದೇ 1 ಲಕ್ಷ ಕೋಟಿ ರೂಪಾಯಿ ಕೃಷಿ ಮೂಲಸೌಕರ್ಯ ನಿಧಿಯಿಂದ ಸಹಸ್ರಾರು ರೈತರಿಗೆ ಪ್ರಯೋಜನವಾಗಲಿದೆ ಎಂದು ಹೇಳಿದರು.. ಇದೇ ವೇಳೆ ಈ ವರ್ಷ ದೇಶವು 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಿದೆ. ಇದು ಮಹತ್ವದ ಮೈಲಿಗಲ್ಲಾಗಿದ್ದು ನಮಗೆ ಹೆಮ್ಮೆಯ ವಿಷಯವಾಗಿದೆ. ಮಾತ್ರವಲ್ಲದೆ ಹೊಸ ನಿರ್ಣಯಗಳು ಮತ್ತು ಗುರಿಗಳಿಗೆ ತೆರೆದುಕೊಳ್ಳುವ ಸಂದರ್ಭವಾಗಿದೆ. ಮುಂದಿನ 25 ವರ್ಷಗಳಲ್ಲಿ ಭಾರತ ಯಾವ ಸ್ಥಾನದಲ್ಲಿರಬೇಕು ಎಂಬ ಬಗ್ಗೆ ಈ ಸಂದರ್ಭದಲ್ಲಿ ನಾವು ನಿರ್ಧಾರ ಕೈಗೊಳ್ಳಬೇಕು ಎಂದಿದ್ದಾರೆ.
ಅಲ್ಲದೇ ಸ್ವಾತಂತ್ರ್ಯ ದೊರೆತು 100 ವರ್ಷಗಳಾಗುವ ಸಂದರ್ಭದಲ್ಲಿ, 2047ರಲ್ಲಿ ಭಾರತವು ಯಾವ ಸ್ಥಾನದಲ್ಲಿರಬೇಕು ಎಂಬುದನ್ನು ನಿರ್ಧರಿಸಬೇಕು. ಇದನ್ನು ನಿರ್ಧರಿಸುವಲ್ಲಿ ನಮ್ಮ ಕೃಷಿ, ಗ್ರಾಮಗಳು ಮತ್ತು ರೈತರು ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಕೃಷಿಗೆ ಅಂತಹ ದಿಕ್ಕನ್ನು ನೀಡುವ ಸಮಯ ಇದಾಗಿದೆ. ಇದರಿಂದ ಹೊಸ ಸವಾಲುಗಳನ್ನು ಎದುರಿಸಲು ಮತ್ತು ಹೊಸ ಅವಕಾಶಗಳ ಲಾಭ ಪಡೆಯಲು ಸಾಧ್ಯವಾಗುತ್ತದೆ ಎಂದಿದ್ದಾರೆ.
ಕೋವಿಶೀಲ್ಡ್, ಕೋವ್ಯಾಕ್ಸಿನ್ ಮಿಶ್ರ ಲಸಿಕೆ ಪಡೆದರೆ ಏನಾಗುತ್ತೆ..? ಅಧ್ಯಯದಿಂದ ಹೊಸ ಅಂಶ ಬಹಿರಂಗ..!
ಒಲಿಮಿಂಕ್ಸ್ 2020 : ಭಾರತಕ್ಕೆ ಪದಕ ಗೆದ್ದ ಕ್ರೀಡಾಪಟುಗಳಿಗೆ ಪ್ರಧಾನಿಗಳಿಂದ ಸನ್ಮಾನ








