ADVERTISEMENT
Thursday, June 19, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪಿಎಂ ನರೇಂದ್ರ ಮೋದಿ ಅವರದ್ದು ಅವಿವೇಕಿತನದ ನಿರ್ಧಾರ : ಸಿದ್ದರಾಮಯ್ಯ

admin by admin
June 24, 2020
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು : ಕೊರೊನಾ ರೋಗಿಗಳಿಗೆ ಎಲ್ಲ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಬೇಕು. ಜೊತೆಗೆ ಸ್ಟಾಂಡರ್ಡ್ ಟ್ರೀಟ್‍ಮೆಂಟ್ ಪ್ರೊಟೊಕಾಲ್ ಜಾರಿಗೆ ತರಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಆಸ್ಪತ್ರೆಗಳಲ್ಲಿ ಸ್ಟಾಂಡರ್ಡ್ ಟ್ರೀಟ್‍ಮೆಂಟ್ ಪ್ರೊಟೊಕಾಲ್ ಜಾರಿಯಾಗುತ್ತಿರುವ ಬಗ್ಗೆ ನಿಗಾ ವಹಿಸಲು ಸಮಿತಿಯೊಂದನ್ನು ರಚನೆ ಮಾಡಬೇಕು. ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ದರ ನಿಗದಿ ಮಾಡಿ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಸರ್ಕಾರಕ್ಕೆ ಈ ಒತ್ತಾಯ ಮಾಡಿದ್ದಾರೆ.

Related posts

ಯಡಿಯೂರಪ್ಪ ನನಗೆ ಹಿರಿಯಣ್ಣನಿದ್ದಂತೆ: ಈಶ್ವರಪ್ಪ ಸ್ಪಷ್ಟನೆ, ರಾಜಕೀಯ  ಜರ್ನಿಗೆ ಹೊಸ ತಿರುವು?

ಯಡಿಯೂರಪ್ಪ ನನಗೆ ಹಿರಿಯಣ್ಣನಿದ್ದಂತೆ: ಈಶ್ವರಪ್ಪ ಸ್ಪಷ್ಟನೆ, ರಾಜಕೀಯ ಜರ್ನಿಗೆ ಹೊಸ ತಿರುವು?

June 19, 2025
ನಂದಿನಿ, ಅಮುಲ್… ಎರಡೂ ನಮ್ಮದೇ : ಸಿಟಿ ರವಿ ರಿಯಾಕ್ಷನ್

ನಂದಿನಿ, ಅಮುಲ್… ಎರಡೂ ನಮ್ಮದೇ : ಸಿಟಿ ರವಿ ರಿಯಾಕ್ಷನ್

June 19, 2025

ಕೇಂದ್ರ-ರಾಜ್ಯ ಸರ್ಕಾರಗಳ ಸರಣಿ ವೈಫಲ್ಯಗಳಿಂದಾಗಿ ಕೊರೋನಾ ತೀವ್ರವಾಗಿ ಹರಡುತ್ತಿದೆ. ಪ್ರಧಾನಮಂತ್ರಿಗಳು ಸಾಕಷ್ಟು ಪೂರ್ವ ಸಿದ್ಧತೆಗಳಿಲ್ಲದೆ ಮಾರ್ಚ್ 24, 2020 ರಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಿ ಮಧ್ಯರಾತ್ರಿ 12 ಗಂಟೆಗೆ ಲಾಕ್‍ಡೌನ್ ಜಾರಿಗೆ ಬರುವುದಾಗಿ ಘೋಷಣೆ ಮಾಡಿದರು. ಆ ನಂತರ ದೇಶದುದ್ದಗಲಕ್ಕೂ ನಡೆದದ್ದು ಗೊತ್ತೇ ಇದೆ. ಮಾರ್ಚ್ ತಿಂಗಳಲ್ಲಿ ಲಾಕ್‍ಡೌನ್ ಅಗತ್ಯವಿರಲಿಲ್ಲ. ಅವಿವೇಕಿತನದ ತೀರ್ಮಾನದಿಂದಾಗಿ ಕೋಟ್ಯಾಂತರ ಕಾರ್ಮಿಕರು, ಕುಶಲಕರ್ಮಿ ಸಮುದಾಯಗಳು, ರೈತಾಪಿ ಸಮುದಾಯಗಳು ಪಡಬಾರದ ಕಷ್ಟಪಟ್ಟರು. ನೋಟ್‍ಬ್ಯಾನ್ ಮತ್ತು ಜಿ.ಎಸ್.ಟಿಗಳ ಅಸಮರ್ಪಕ ಅನುಷ್ಠಾನಗಳಿಂದಾಗಿ ಲಕ್ವಾ ಹೊಡೆದಂತಾಗಿದ್ದ ದೇಶದ ಆರ್ಥಿಕತೆಗೆ ಲಾಕ್‍ಡೌನ್‍ನಿಂದಾಗಿ ಉತ್ಪಾದಕ ವಲಯಗಳು ಇದ್ಧ ಬದ್ಧ ಚೈತನ್ಯವನ್ನು ಕಳೆದುಕೊಂಡಿವೆ.

ಪ್ರಸ್ತುತ ಕೊರೋನಾ ಸೋಂಕು ಸಮುದಾಯದ ಸೋಂಕಾಗಿ ವ್ಯಾಪಿಸಿಕೊಂಡಿದೆ. ಸರಿಯಾದ ತಪಾಸಣೆಗಳು ನಡೆಯುತ್ತಿಲ್ಲ. ಬಹುಶ: ರಾಜ್ಯದಲ್ಲೇ ಅಸಂಖ್ಯಾತ ಪ್ರಕರಣಗಳಿರಬಹುದು. ಬೆಂಗಳೂರು ಸೇರಿದಂತೆ ರಾಜ್ಯದ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಜನರ ದುಡಿಮೆಯ ಅವಕಾಶಗಳೆಲ್ಲ ಮುಚ್ಚಿ ಹೋಗಿವೆ. ಅಸಂಖ್ಯಾತ ಕಾರ್ಮಿಕರು/ನೌಕರರನ್ನು ಕಾರ್ಖಾನೆ ಮತ್ತು ಕಂಪೆನಿಗಳು ಕೆಲಸದಿಂದ ತೆಗೆದು ಹಾಕಿವೆ. ಜನರ ಬಳಿ ಹಣವಿಲ್ಲ.
ಇಂತಹ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ಕೊರೋನಾ ಚಿಕಿತ್ಸೆಗಾಗಿ ದರಗಳನ್ನು ನಿಗಧಿಪಡಿಸಿದೆ. ಪ್ರಸ್ತುತ ದರಗಳನ್ನು ನೋಡಿದರೆ ಮೇಲ್ಮಧ್ಯಮ ವರ್ಗಗಳಿಗೇ ಆಘಾತ ತರುವಂತಿದೆ. ಕೊರೋನಾ ಸೋಂಕು ಕುಟುಂಬದೊಳಕ್ಕೆ ವ್ಯಾಪಿಸಿದರೆ ಸಾಮಾನ್ಯವಾಗಿ ಕುಟುಂಬದ ಸದಸ್ಯರೆಲ್ಲರನ್ನು ಬಾಧಿಸುತ್ತದೆ. ಇಂತಹ ಪರಿಸ್ಥಿಯಲ್ಲಿ ಸರ್ಕಾರ ದಿನಾಂಕ: 23-06-2020 ರಂದು ಈ ಕೆಳಗಿನಂತೆ ಆಸ್ಪತ್ರೆಗೆ ದರಗಳನ್ನು ನಿಗಧಿಪಡಿಸಿದೆ.

ಸರ್ಕಾರ ದಿನವೊಂದಕ್ಕೆ ನಿಗಧಿ ಮಾಡಿರುವ ಈ ದರಗಳನ್ನು ಜನತೆ ಎಲ್ಲಿಂದ ನೀಡಲು ಸಾಧ್ಯ? ಈ ದರಗಳನ್ನು ನೋಡಿದರೆ ಸಾಕು ಜನರಿಗೆ ಹೃದಯಾಘಾತವಾಗುವಂತಿದೆ. ಇದನ್ನು ಗಮನಿಸಿದರೆ ಈ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯಗಳು ಜೀವಂತವಾಗಿವೆಯೇ ಎಂಬ ಪ್ರಶ್ನೆ ಬರುತ್ತದೆ. ಜನರ ಬಗ್ಗೆ ಕಾಳಜಿ ಇರುವ ಸರ್ಕಾರವೊಂದು ಮಾಡುವ ಕೆಲಸವೇ ಇದು? ಒಂದು ಕುಟುಂಬದ ನಾಲ್ಕೈದು ಜನ ಸದಸ್ಯರು ವೆಂಟಿಲೇಟರ್ ಸಹಾಯದಿಂದ ಚಿಕಿತ್ಸೆ ಪಡೆಯುವ ಅನಿವಾರ್ಯತೆ ಉಂಟಾದರೆ ಎಲ್ಲಿಂದ 10-12 ಲಕ್ಷಕ್ಕೂ ಅಧಿಕ ಮೊತ್ತದ ಹಣ ತುಂಬಲು ಸಾಧ್ಯ?
ಇದಿಷ್ಟೆ ಅಲ್ಲದೆ ಸರ್ಕಾರದ ಅಧಿಸೂಚನೆ ಪ್ರಕಾರ
1)ಇಬ್ಬರು-ಮೂರು ಜನ ವಾರ್ಡ್‍ಗಳನ್ನು ಹಂಚಿಕೊಂಡು ಚಿಕಿತ್ಸೆ ಪಡೆದರೆ ಅವರಿಗೆ ಮೇಲಿನ ದರಗಳ ಜೊತೆಗೆ ಶೇ.25 ರವರೆಗೆ ಹೆಚ್ಚಿನ ದರಗಳನ್ನು ನಿಗಧಿಪಡಿಸಬಹುದು.
2)ಸರ್ಕಾರ ನಿಗಧಿಪಡಿಸಿರುವ ದರಗಳು ವಿಮಾ ಪ್ಯಾಕೇಜುಗಳಿಗೆ ಅನ್ವಯಿಸುವುದಿಲ್ಲವೆಂದು ಹೇಳಲಾಗಿದೆ.
3)ಸೂಟ್‍ಗಳನ್ನು ಪಡೆದರೆ ಅದಕ್ಕೆ ಮಿತಿ ಇಲ್ಲದಷ್ಟು ವೆಚ್ಚ ವಸೂಲಿ ಮಾಡಬಹುದಾಗಿ ತಿಳಿಸಲಾಗಿದೆ.
ಜನತೆಗೆ ಒಂದು ಕಡೆ ಹಣ ಹೊಂದಿಸುವ ಸಮಸ್ಯೆ ಆದರೆ ಮತ್ತೊಂದು ಕಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳನ್ನು ಚಿಕಿತ್ಸೆ ನೀಡಲು ಜಾಗವೇ ಇಲ್ಲದೆ ತುಂಬಿ ಹೋಗಿವೆ ಎಂಬ ಮಾಹಿತಿ ಬರುತ್ತಿದೆ. ಸುಮಾರು 35,000 ವೆಂಟಿಲೇಟರ್‍ಗಳನ್ನು ಸರಬರಾಜು ಮಾಡಿ ಎಂದು ಕೇಂದ್ರ ಸರ್ಕಾರವನ್ನು ಕೇಳಿದರೆ, ಕೇಂದ್ರವು ಕೇವಲ 90 ವೆಂಟಿಲೇಟರ್‍ಗಳನ್ನು ಮಾತ್ರ ನೀಡಿದೆಯೆಂದು ಮಾಹಿತಿ ಇದೆ. ರಾಜ್ಯ ಸರ್ಕಾರವು ವೆಂಟಿಲೇಟರ್ ಉತ್ಪಾದಿಸಿಕೊಡುವಂತೆ ಕಂಪೆನಿಗಳನ್ನು ಇತ್ತೀಚೆಗೆ ಕೋರಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಾಮನಗರ ಮತ್ತು ಗುಲ್ಬರ್ಗ ಜಿಲ್ಲೆಗಳಿಗೆ ಸರಬರಾಜು ಮಾಡಲಾಗಿದ್ದ ಔಷಧಿ ಕಳಪೆ ಗುಣಮಟ್ಟದ್ದಾಗಿವೆ ಎಂದು ವರದಿಯಾಗಿದೆ. ಪಿ.ಪಿ.ಇ ಕಿಟ್ ಮತ್ತು ಇನ್ನಿತರೆ ವೈದ್ಯಕೀಯ ಸಲಕರಣೆಗಳ ಕುರಿತು ವೈದ್ಯರೆ ಅನೇಕ ಕಡೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ಚಿಕಿತ್ಸೆಯ ಅವ್ಯವಸ್ಥೆ ಕುರಿತಂತೆ ರೋಗಿಯೊಬ್ಬರು ಮಾಡಿರುವ ವರದಿ ಗಾಬರಿ ಹುಟ್ಟಿಸುವಂತಿದೆ. ಇದನ್ನೆಲ್ಲ ನೋಡಿದರೆ ಸರ್ಕಾರ ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಪರಿಸ್ಥಿತಿ ಮಾತ್ರ ದಿನದಿಂದ ದಿನಕ್ಕೆ ವಿಷಮಿಸುತ್ತಿದೆ.
ಸಂಕಷ್ಟದಿಂದ ಕಂಗೆಟ್ಟ ಜನ ವ್ಯವಸ್ಥೆಯ ಮೇಲೆ ನಂಬಿಕೆ ಕಳೆದುಕೊಂಡು ಅರಾಜಕ ವಾತಾವರಣ ನಿರ್ಮಾಣವಾಗುವುದರ ಬದಲು ಸರ್ಕಾರ ತನ್ನ ಪುಕ್ಕಲುತನದ ನೀತಿಯನ್ನು ಮತ್ತು ಖಾಸಗಿ ಆಸ್ಪತ್ರೆಗಳ ಲಾಬಿಯನ್ನು ಮೆಟ್ಟಿ ನಿಂತು ಪರಿಸ್ಥಿಯನ್ನು ನಿಗ್ರಹಿಸಬೇಕಾಗಿದೆ.
ಇಂದು ಸರ್ಕಾರ ಹೊರಡಿಸಿರುವ ಅಧಿಸೂಚನೆಯಲ್ಲಿ ಚಿಕಿತ್ಸೆ ಕುರಿತಂತೆ ಯಾವುದೇ ನಿರ್ದಿಷ್ಟ ಸ್ಟಾಂಡರ್ಡ್ ಟ್ರೀಟ್‍ಮೆಂಟ್ ಪ್ರೊಟೊಕಾಲ್ ಗಳಿಲ್ಲ. ಹಾಗಾಗಿ ವಿರೋಧ ಪಕ್ಷದ ನಾಯಕನಾಗಿ ನಾನು ಈ ಕೆಳಕಂಡಂತೆ ಸರ್ಕಾರವನ್ನು ಒತ್ತಾಯಿಸುತ್ತೇನೆ.
1)ಕೇಂದ್ರ-ರಾಜ್ಯ ಸರ್ಕಾರ ವೈಫಲ್ಯಗಳಿಂದಾಗಿ ಕೊರೋನಾ ಹರಡಿರುವುದರಿಂದ, ಕೊರೋನಾ ಸಂಬಂಧಿತ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸಬೇಕು.
2)ಎಲ್ಲಾ ಆಸ್ಪತ್ರೆಗಳಿಗೆ ಸ್ಟಾಂಡರ್ಡ್ ಟ್ರೀಟ್‍ಮೆಂಟ್ ಪ್ರೊಟೊಕಾಲ್   ಅನ್ನು ಮೊದಲು ನಿಗಧಿಪಡಿಸಬೇಕು.
ಚಿಕಿತ್ಸೆಗೆ ಸ್ಟಾಂಡರ್ಡ್ ಟ್ರೀಟ್‍ಮೆಂಟ್ ಪ್ರೊಟೊಕಾಲ್ ಯಾಕೆ ಬೇಕೆಂದರೆ ಹಣ ಇರುವವರು ಮಾತ್ರ ವೆಂಟಿಲೇಟರ್ ಸೌಲಭ್ಯ ಪಡೆಯುತ್ತಾರೆ. ಬದುಕುವ ಶಕ್ತಿ ಇದ್ದು ಹಣ ಇಲ್ಲದೇ ವೆಂಟಿಲೇಟರ್ ಸೌಲಭ್ಯ ಪಡೆಯಲಾಗದೆ ಬಡ, ಮಧ್ಯಮ ವರ್ಗದ ರೋಗಿಗಳು ಮರಣ ಹೊಂದಿದರೆ ಸರ್ಕಾರ ಕೊಲೆಗಡುಗನ ಸ್ಥಾನದಲ್ಲಿ ನಿಲ್ಲಬೇಕಾಗುತ್ತದೆ. ಕೊರೋನಾದ ಭೀತಿಯನ್ನು ಇನ್ನಷ್ಟು ಹೆಚ್ಚಿಸಿ ಹಣದ ದಂಧೆಗೆ ಅನೇಕರು ಇಳಿಯಬಹುದು.

ಈ ಎಲ್ಲಾ ಸಮಸ್ಯೆಗಳು ತಪ್ಪಬೇಕೆಂದರೆ ಸರ್ಕಾರ ತುರ್ತಾಗಿ ಉಚಿತ ಚಿಕಿತ್ಸೆಯನ್ನು ನೀಡುವ ಬಗ್ಗೆ ಘೋಷಿಸಬೇಕು ಮತ್ತು ಚಿಕಿತ್ಸೆ ನೀಡಲು ಸ್ಟಾಂಡರ್ಡ್ ಟ್ರೀಟ್‍ಮೆಂಟ್ ಪ್ರೊಟೊಕಾಲ್ ಕೂಡಲೇ ನಿಗಧಿಪಡಿಸಬೇಕು.

ಚಿಕಿತ್ಸೆಯ ಶಿಷ್ಠಾಚಾರ ಸರಿಯಾಗಿ ಪಾಲನೆಯಗುತ್ತಿದೆಯೇ ಎಂಬುದನ್ನು ನಿರಂತರವಾಗಿ ಪರಿಶೀಲಿಸಲು ಸರ್ಕಾರ ತಜ್ಞರ ಸಮಿತಿಯನ್ನು ನೇಮಿಸಬೇಕು ಹಾಗೂ ಜನ ಸಾಮಾನ್ಯರು ಆತಂಕವಿಲ್ಲದೆ ಚಿಕಿತ್ಸೆ ತಡೆಯುವಂಥ ನಿರ್ಭೀತ ವಾತಾವರಣ ಸೃಷ್ಟಿಸಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Tags: BJPCongressPrime Minister Narendra ModiSiddaramaiah
ShareTweetSendShare
Join us on:

Related Posts

ಯಡಿಯೂರಪ್ಪ ನನಗೆ ಹಿರಿಯಣ್ಣನಿದ್ದಂತೆ: ಈಶ್ವರಪ್ಪ ಸ್ಪಷ್ಟನೆ, ರಾಜಕೀಯ  ಜರ್ನಿಗೆ ಹೊಸ ತಿರುವು?

ಯಡಿಯೂರಪ್ಪ ನನಗೆ ಹಿರಿಯಣ್ಣನಿದ್ದಂತೆ: ಈಶ್ವರಪ್ಪ ಸ್ಪಷ್ಟನೆ, ರಾಜಕೀಯ ಜರ್ನಿಗೆ ಹೊಸ ತಿರುವು?

by Shwetha
June 19, 2025
0

ಮಾಜಿ ಸಚಿವ ಹಾಗೂ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ತಮ್ಮ ಮಾತುಗಳಿಂದ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣರಾಗಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರು ನನಗೆ ಹಿರಿಯಣ್ಣನಂತೆ. ಅವರಿಗೂ...

ನಂದಿನಿ, ಅಮುಲ್… ಎರಡೂ ನಮ್ಮದೇ : ಸಿಟಿ ರವಿ ರಿಯಾಕ್ಷನ್

ನಂದಿನಿ, ಅಮುಲ್… ಎರಡೂ ನಮ್ಮದೇ : ಸಿಟಿ ರವಿ ರಿಯಾಕ್ಷನ್

by Shwetha
June 19, 2025
0

ಬೆಂಗಳೂರು ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮತ್ತು ಅಮುಲ್ ಹಾಲು ಉತ್ಪನ್ನಗಳ ಕಿಯಾಸ್ಕ್‌ಗಳನ್ನು ಸ್ಥಾಪಿಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ ಬಳಿಕ, ಈ ವಿಚಾರವು ಚರ್ಚೆಗೆ ಕಾರಣವಾಗಿದೆ. ಈ...

ನಂದಿ ಬೆಟ್ಟದಲ್ಲಿ ನಡೆಯಬೇಕಿದ್ದ ಸಂಪುಟ ಸಭೆ ಕೊನೆ ಕ್ಷಣದಲ್ಲಿ ರದ್ದು: ಅಧಿಕಾರಿಗಳಲ್ಲಿ ನಿರಾಸೆ

ನಂದಿ ಬೆಟ್ಟದಲ್ಲಿ ನಡೆಯಬೇಕಿದ್ದ ಸಂಪುಟ ಸಭೆ ಕೊನೆ ಕ್ಷಣದಲ್ಲಿ ರದ್ದು: ಅಧಿಕಾರಿಗಳಲ್ಲಿ ನಿರಾಸೆ

by Shwetha
June 19, 2025
0

ರಾಜ್ಯದ ವಿಶ್ವವಿಖ್ಯಾತ ಪ್ರವಾಸಿ ತಾಣವಾಗಿರುವ ನಂದಿಗಿರಿಧಾಮ (ನಂದಿ ಬೆಟ್ಟ)ದಲ್ಲಿ ಇಂದು ನಡೆಯಬೇಕಾಗಿದ್ದ ರಾಜ್ಯ ಸಚಿವ ಸಂಪುಟ ಸಭೆ, ಅಚ್ಚರಿಯ ತಿರುವು ಪಡೆದು ಕೊನೆ ಕ್ಷಣದಲ್ಲಿ ರದ್ದಾಗಿದೆ. ಮುಖ್ಯಮಂತ್ರಿ...

ದೇಶದಲ್ಲೇ ಮೊದಲ ಬಾರಿಗೆ ಬನ್ನೇರುಘಟ್ಟದಲ್ಲಿ ವಿದ್ಯುತ್ ಸಫಾರಿ ಬಸ್ ಚಾಲನೆ: ಶೀಘ್ರದಲ್ಲೇ 10 ವಿದೇಶೀ ವನ್ಯಜೀವಿಗಳ ಆಗಮನ

by Shwetha
June 19, 2025
0

ಬೆಂಗಳೂರು ಹೊರವಲಯದ ಪ್ರಸಿದ್ಧ ಬನ್ನೇರುಘಟ್ಟ ಜೈವಿಕ ಉದ್ಯಾನವನವು ಮತ್ತೊಂದು ಮುನ್ನಡೆಯ ಹಂತ ತಲುಪಿದ್ದು, ದೇಶದಲ್ಲೇ ಮೊದಲ ಬಾರಿಗೆ ಇಲ್ಲಿಗೆ ವಿದ್ಯುತ್ ಚಾಲಿತ ಸಫಾರಿ ಬಸ್‌ ಪರಿಚಯಗೊಂಡಿದೆ. ಈ...

ನೀವು ತುಂಬಾ ಗ್ರೇಟ್… ನಾನು ನಿಮ್ಮಂತೆಯೇ ಆಗಲು ಯತ್ನಿಸುತ್ತೇನೆ: G7 ಶೃಂಗಸಭೆಯಲ್ಲಿ ಮೆಲೋನಿಯ ಮೋದಿ ಮೆಚ್ಚುಗೆ

ನೀವು ತುಂಬಾ ಗ್ರೇಟ್… ನಾನು ನಿಮ್ಮಂತೆಯೇ ಆಗಲು ಯತ್ನಿಸುತ್ತೇನೆ: G7 ಶೃಂಗಸಭೆಯಲ್ಲಿ ಮೆಲೋನಿಯ ಮೋದಿ ಮೆಚ್ಚುಗೆ

by Shwetha
June 19, 2025
0

ಇತ್ತೀಚೆಗೆ ಜರುಗಿದ G7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿಯ ಪ್ರಧಾನ ಮಂತ್ರಿ ಜಾರ್ಜಿಯಾ ಮೆಲೋನಿ ನಡುವಿನ ಸೌಹಾರ್ದಭರಿತ ಭೇಟಿಯು ಸೋಶಿಯಲ್ ಮೀಡಿಯಾ ಮತ್ತು ರಾಜಕೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram