ಪ್ರಧಾನಿ ಭದ್ರತೆಯಲ್ಲಿ ಲೋಪ: ಮಾಜಿ SC ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಮಿತಿ ರಚಿಸಲು ಸುಪ್ರೀಂ ಸೂಚನೆ.
ಕಳೆದ ವಾರ ಪ್ರಧಾನಿಯವರ ಪಂಜಾಬ್ ಭೇಟಿಯ ವೇಳೆ ನಡೆದ ಭದ್ರತಾ ಉಲ್ಲಂಘನೆಯ ಕುರಿತು ತನಿಖೆ ನಡೆಸಲು ಸಮಿತಿಯೊಂದನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರಕ್ಕೆ ಸೂಚಿಸಿದೆ. ಸುಪ್ರೀಂ ಕೋರ್ಟ್ನ ಆದೇಶದ ಪ್ರಕಾರ ಮಾಜಿ ಎಸ್ಸಿ ನ್ಯಾಯಾಧೀಶರು ಸಮಿತಿಯ ಮುಖ್ಯಸ್ಥರಾಗಿರುತ್ತಾರೆ. ಇದು ಡಿಜಿಪಿ ಚಂಡೀಗಢ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಐಜಿ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ಗಳ ರಿಜಿಸ್ಟ್ರಾರ್ ಜನರಲ್ ಅವರನ್ನ ಕೂಡ ಒಳಗೊಂಡಿರುತ್ತದೆ.
ನಿವೃತ್ತ ನ್ಯಾಯಾಧೀಶರು ಮತ್ತು ಇತರ ಅಧಿಕಾರಿಗಳ ಹೆಸರನ್ನು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ಇಂದು ಬಿಡುಗಡೆ ಮಾಡಲಿದೆ.
ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಜನವರಿ 5 ರಂದು ಫಿರೋಜ್ಪುರದಲ್ಲಿ ನಡೆದ ಘಟನೆಯ ವಿರುದ್ಧ ‘ಲಾಯರ್ಸ್ ವಾಯ್ಸ್’ ಎಂಬ ಸಂಸ್ಥೆ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸುತ್ತಿದೆ.
ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಾಲಯವು ” ಪ್ರಧಾನಿ ಭದ್ರತೆಯಲ್ಲಿ ಉಲ್ಲಂಘನೆಯಾಗಿದೆ ಮತ್ತು ಪಂಜಾಬ್ ಸರ್ಕಾರವು ಸಹ ಒಪ್ಪಿಕೊಂಡಿದೆ” ಎಂದು ಪ್ರತಿಪಾದಿಸಿತು. “ವಿಚಾರಣೆ ನಡೆಸಿದರೆ, ಅದರ ವ್ಯಾಪ್ತಿ ಏನು ಎಂಬುದು ಪ್ರಶ್ನೆಯಾಗಿದೆ. ನೀವು ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲು ಬಯಸಿದರೆ ಈ ನ್ಯಾಯಾಲಯವು ಪರಿಶೀಲಿಸಲು ಏನು ಉಳಿದಿದೆ?” ಎಂದು ಕೇಳಿತು.
ಪಂಜಾಬ್ ಅಧಿಕಾರಿಗಳಿಗೆ ನೀಡಿರುವ ಶೋಕಾಸ್ ನೋಟಿಸ್ ಸ್ವಯಂ ವ್ಯತಿರಿಕ್ತವಾಗಿದೆ ಎಂದು ನ್ಯಾಯಾಲಯವು ಕೇಂದ್ರ ಸರ್ಕಾರಕ್ಕೆ ತಿಳಿಸಿದೆ. “ಸಮಿತಿಯನ್ನು ರಚಿಸುವ ಮೂಲಕ, ವಿಶೇಷ ರಕ್ಷಣಾ ಗುಂಪು (ಎಸ್ಪಿಜಿ) ಕಾಯಿದೆಯ ಉಲ್ಲಂಘನೆಯಾಗಿದೆಯೇ ಎಂದು ಕೇಂದ್ರವು ತನಿಖೆ ಮಾಡಲು ಪ್ರಯತ್ನಿಸುತ್ತದೆ ಮತ್ತು ನಂತರ ಅದು ಪಂಜಾಬ್ ಮುಖ್ಯ ಕಾರ್ಯದರ್ಶಿ ಮತ್ತು ಮಹಾನಿರ್ದೇಶಕರನ್ನು ತಪ್ಪಿತಸ್ಥರೆಂದು ಪರಿಗಣಿಸುತ್ತದೆ” ಎಂದು ಅದು ಸೇರಿಸಿದೆ.
ಈ ವಿಚಾರದಲ್ಲಿ ತಮ್ಮ ವಿಚಾರಣೆಯನ್ನು ಮುಂದುವರಿಸದಂತೆ ಕೇಂದ್ರ ಮತ್ತು ಪಂಜಾಬ್ ಸರ್ಕಾರಗಳಿಗೆ ನ್ಯಾಯಾಲಯ ತಿಳಿಸಿದೆ.
ಜನವರಿ 5 ರಂದು, ಪ್ರಧಾನಿ ಮೋದಿ ಫಿರೋಜ್ಪುರ ಜಿಲ್ಲೆಗೆ ಭೇಟಿ ನೀಡಬೇಕಿತ್ತು; ರೈತರ ಪ್ರತಿಭಟನೆಯಿಂದಾಗಿ ಫ್ಲೈಓವರ್ನಲ್ಲಿ ಪ್ರಧಾನಿ ಅವರನ್ನ ತಡೆಗಟ್ಟಿದ ನಂತರ ಪ್ರವಾಸವನ್ನು ಮೊಟಕುಗೊಳಿಸಲಾಯಿತು ಮತ್ತು ಅವರ ಸಮಾರಂಭವನ್ನ ರದ್ದುಗೊಳಿಸಬೇಕಾಯಿತು.
ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಲವು ನಾಯಕರು ಪಂಜಾಬ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ, ಪ್ರಧಾನಿ ಮೋದಿ ಅವರ ಮಾರ್ಗದ ವಿವರಗಳನ್ನು ಅನಧಿಕೃತ ವ್ಯಕ್ತಿಗಳೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಆರೋಪಿಸಿ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿದರು.