ಬೆಂಗಳೂರು : ಎಪಿಎಂಸಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ ವಿರೋಧಿಸಿ ಸರ್ಕಾರದ ವಿರುದ್ಧ ರೈತರು ಸಿಡಿದೆದ್ದಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅನ್ನದಾತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ರೈತರ ಆಕ್ರೋಶದ ಕಿಚ್ಚು ರಾಜಧಾನಿಯನ್ನು ಧಗಧಗಿಸುತ್ತಿದೆ.
ವಿವಾದಾತ್ಮಕ ಕೃಷಿ ಮಸೂದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಈಗಾಗಲೇ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.
ಬೆಂಗಳೂರಿನ ಮೌರ್ಯ ವೃತ್ತ, ಪ್ರೀಡಂ ಪಾರ್ಕ್, ಮೈಸೂರು ರಸ್ತೆ ಬಳಿ ರಸ್ತೆ ತಡೆ ನಡೆಸಿ, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ.
ಇದೇ ವೇಳೆ ಗೊರಗುಂಟೆ ಪಾಳ್ಯದಲ್ಲಿ ರೈತರು ರಸ್ತೆಗೆ ಅಡ್ಡಲಾಗಿ ಕುಳಿತು ಧರಣಿ ಆರಂಭಿಸಿದ್ದರು. ಪರಿಸ್ಥಿತಿ ಕೈಮೀರುವುದನ್ನು ಅರಿತ ಪೆÇಲೀಸರು ನೂರಾರು ರೈತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ವಿವಾದಾತ್ಮಕ ಮಸೂದೆಯ ವಿರುದ್ಧ ದೇಶದಾದ್ಯಂತ ಅನ್ನದಾತರು ಪ್ರತಿಭಟನೆ ನಡೆಸುತ್ತಿದ್ದು,ಇಂದು ಪ್ರಮುಖ ಹೆದ್ದಾರಿಗಳನ್ನು ತಡೆದು ಕೇಂದ್ರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.