ಮೈಸೂರು: ನಿಯಮ ಉಲ್ಲಂಘಿಸಿ ವಾಹನ ಚಾಲನೆ ಮಾಡಿದ ಆರೋಪದ ಮೇಲೆ ಪೊಲೀಸರು ಯುವಕನ ತಲೆಗೆ ಲಾಠಿಯಿಂದ ಹಲ್ಲೆ ನಡೆಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಬಸ್ತಿಪುರ ಚೆಕ್ ಪೊಲೀಸ್ ಬಳಿ ವಾಹನಗಳ ತಪಾಸಣೆ ನಡೆಸುತ್ತಿದ್ದ ಪೊಲೀಸರು ಯುವಕ ಆಕರ್ಶ್ನ ಬೈಕ್ನ್ನು ತಡೆದಿದ್ದಾರೆ. ನಾನು ಬೈಕ್ ನಲ್ಲಿ ತೆರಳುತ್ತಿದ್ದಾಗ ಹೆಬ್ಬಾಳ ಠಾಣೆ ಪೇದೆ ಏಕಾಏಕಿ ಏನನ್ನೂ ವಿಚಾರಿಸದೆ, ಬೈಕ್ ನಿಲ್ಲಿಸಲು ಸೂಚಿಸದೆ ಲಾಠಿಯಿಂದ ತಲೆಗೆ ಬಲವಾಗಿ ಹೊಡೆದಿದ್ದಾರೆ.
ಇದರಿಂದಾಗಿ ನನಗೆ ರಕ್ತಸ್ರಾವವಾಗಿದೆ. ಬಳಿಕ ನಾನು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನು ಪಡೆದಿದ್ದೇನೆ. ನನ್ನದು ಯಾವುದೇ ತಪ್ಪಿಲ್ಲದಿದ್ದರೂ ಪೇದೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಲು ಹೋದರೂ ಪೊಲೀಸರು ವಿವಿಧ ಕಾರಣವನ್ನು ಹೇಳಿಕೊಂಡು ದೂರು ಸ್ವೀಕರಿಸಲು ನಿರಾಕರಿಸುತ್ತಿದ್ದಾರೆ. ಇದರಿಂದಾಗಿ ಪೊಲೀಸ್ ಕಮಿಷನರ್ ಅವರನ್ನು ಭೇಟಿ ಮಾಡಿ ದೂರನ್ನು ನೀಡುವುದಾಗಿ ಹಲ್ಲೆಗೊಳಗಾದ ಯುವಕ ಆಕರ್ಶ್ ಹೇಳಿದ್ದಾರೆ.
ಪೊಲೀಸ್ ಪೇದೆ ಉಮೇಶ್ ಎಂಬುವರು ಯುವಕ ಆಕರ್ಶ್ ತಲೆಗೆ ಲಾಠಿಯಿಂದ ಹೊಡೆದಿದ್ದಕ್ಕೆ ರಕ್ತಸೋರುತ್ತಿರುವ ವಿಡಿಯೋ ವೈರಲ್ ಆಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel