ದೆವ್ವಕ್ಕೆ ಹೆದರಿ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ suicide saaksha tv
ಚೆನ್ನೈ : ದೆವ್ವಕ್ಕೆ ಹೆದರಿ ಪೊಲೀಸ್ ಕಾನ್ಸ್ ಟೇಬಲ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿದ ಕಡಲೂರು ಜಿಲ್ಲೆಯಲ್ಲಿ ನಡೆದಿದೆ.
33 ವರ್ಷದ ಪ್ರಭಾಕರನ್ ಆತ್ಮಹತ್ಯೆ ಮಾಡಿಕೊಂಡಿರುವ ಪೊಲೀಸ್ ಪೇದೆಯಾಗಿದ್ದಾರೆ.
ಕಡಲೂರು ಸಶಸ್ತ್ರ ಪೊಲೀಸ್ನಲ್ಲಿ ಮೊದಲ ಕಾನ್ಸ್ಟೆಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಪ್ರಭಾಕರನ್ ವಿಷ್ಣುಪ್ರಿಯಾ ಅವರನ್ನು ಮದುವೆಯಾಗಿದ್ದರು.
ಪೊಲೀಸ್ ಕ್ವಾರ್ಟರ್ಸ್ನಲ್ಲಿ ವಾಸವಿದ್ದ ಪ್ರಭಾಕರನ್ ಅವರ ಕನಸಿನಲ್ಲಿ ಬೆಂಕಿಯಲ್ಲಿ ಸುಟ್ಟುಹೋದ ಮಹಿಳೆಯೊಬ್ಬರು ಬಂದು ಕತ್ತು ಹಿಸುಕಲು ಪ್ರಯತ್ನಿಸಿದ್ದಳಂತೆ.
ಈ ಬಗ್ಗೆ ಹೆಚ್ಚು ತಲೆಕಡೆಸಿಕೊಂಡಿದ್ದ ಪ್ರಭಾಕರನ್ ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ಕನಸಿನ ಬಗ್ಗೆ ಜೋತಿಷ್ಯರ ಬಳಿ ಹೇಳಿಕೊಂಡಿದ್ದರು.
ಅವರು ಇದು ಪ್ರೇತ ಅಥವಾ ಆತ್ಮದ ಕಾಟವಿರಬಹುದು ಎಂದಿದ್ದರು.
ಹೀಗಾಗಿ, 15 ದಿನಗಳ ಕಾಲ ಅನಾರೋಗ್ಯದ ರಜೆ ಪಡೆದಿದ್ದ ಪ್ರಭಾಕರನ್ ಪೂಜಾ ಕೊಠಡಿಯಲ್ಲಿ ಬೀಗ ಹಾಕಿಕೊಂಡು ನೇಣುಬಿಗಿದುಕೊಂಡು ಸಾವನ್ನಪ್ಪಿದ್ದಾರೆ.