ಕಾರ್ಮಿಕರ ಮಕ್ಕಳಿಗೆ ಪಾಠ ಮಾಡ್ತಾರೆ ಈ ಪೊಲೀಸ್
ಸಿಲಿಕಾನ್ ಸಿಟಿಯ ಅನ್ನಪೂರ್ಣೇಶ್ವರಿ ನಗರದ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಶಾಂತಪ್ಪ ಜಡೆಮ್ಮನವರ್ ಸದ್ಯ ಟಾಕ್ ಆಫ್ ದಿ ಟೌನ್ ಆಗಿದ್ದಾರೆ. ಇವರು ಡ್ಯೂಟಿಗೆ ಹೋಗುವ ಮುನ್ನ ಕಾರ್ಮಿಕರ ಮಕ್ಕಳಿಗೆ ಪಾಠ ಹೇಳಿಕೊಡುತ್ತಿದ್ದು, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕಾರ್ಯಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ.
ಶಾಂತಪ್ಪ ಅವರು ಪ್ರತಿದಿನ ಬೆಳಗ್ಗೆ 7 ಗಂಟೆಗೆ ಕರ್ತವ್ಯಕ್ಕೆ ತೆರಳುತ್ತಾರೆ. ಆದ್ರೆ ಇದಕ್ಕೂ ಮೊದಲು ಅವರು ಪಶ್ಚಿಮ ಬೆಂಗಳೂರಿನ ನಾಗರಬಾವಿಯಲ್ಲಿ ವಾಸವಿರುವ ಕಾರ್ಮಿಕರ ಮಕ್ಕಳಿಗೆ ಪಾಠ ಮಾಡುತ್ತಾರೆ. ಸುಮಾರು 30 ಮಕ್ಕಳಿಗೆ ಒಂದು ಗಂಟೆ ಪಾಠ ಮಾಡುತ್ತಾರೆ. ಶಾಲೆಯ ಪಠ್ಯಕ್ಕೆ ಅನುಗುಣವಾಗಿ ಪಾಠ ಮಾಡಲು ಸಾಧ್ಯವಾಗದೇ ಇರುವ ಕಾರಣ, ಸಾಮಾನ್ಯ ಜ್ಞಾನ ಮತ್ತು ಸಾಮಾನ್ಯ ಗಣಿತದ ಬಗ್ಗೆ ಪಾಠವನ್ನು ಮಾಡುತ್ತಿದ್ದಾರೆ.
ಸೆ. 16ರಿಂದ ಮಾದಪ್ಪನ ದರ್ಶಕ್ಕಿಲ್ಲ ಅವಕಾಶ..!
ಕೊರೊನಾ ಆರ್ಭಟ ಹಿನ್ನೆಲೆಯಲ್ಲಿ ಮಲೆಮಹದೇಶ್ವರ ಬೆಟ್ಟದ ವಾರ್ಷಿಕ ಜಾತ್ರೆಯನ್ನು ರದ್ದು ಮಾಡುವಂತೆ ಚಾಮರಾಜನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಸೆಪ್ಟೆಂಬರ್ 17 ರಂದು ಅಮವಾಸ್ಯೆ ಇರುವುದರಿಂದ ಮಲೆ ಮಹಾದೇಶ್ವರ ಬೆಟ್ಟಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗಿರುತ್ತದೆ. ಆದರೆ ಕೊರೊನಾ ಆತಂಕದ ನಡುವೆ ಹೆಚ್ಚಾಗಿ ಭಕ್ತರ ಆಗಮನದಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆಯಿದೆ. ಹೀಗಾಗಿಯೇ ಮುನ್ನೆಚಚ್ಚರಿಕಾ ಕ್ರಮವಾಗಿ ಮಹದೇಶ್ವರಸ್ವಾಮಿಯ ದರ್ಶನಕ್ಕೆ ಭಕ್ತರ ಪ್ರವೇಶಕ್ಕೆ ಬ್ರೇಕ್ ಹಾಕಲಾಗಿದೆ.
https://youtu.be/fe-67D72-qs
ಸಿದ್ದರಾಮಯ್ಯ ಡ್ರಗ್ಸ್ ಮಾಫಿಯಾ ತನಿಖೆಯ ಹಾದಿ ತಪ್ಪಿಸುತ್ತಿದ್ದಾರೆ: ಕಾರಜೋಳ
ಸರ್ಕಾರ ಅತಿವೃಷ್ಠಿ ಪರಿಸ್ಥಿತಿ ಮುಚ್ಚಿ ಹಾಕಲು, ಕೋವಿಡ್ ವೈಫಲ್ಯ ಮರೆಮಾಚಲು ಡ್ರಗ್ಸ್ ತನಿಖೆ ವರದಿ ಸೋರಿಕೆ ಮಾಡುತ್ತಿದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಡಿಸಿಎಂ ಗೋವಿಂದ ಕಾರಜೋಳ ಚಿತ್ರದುರ್ಗದಲ್ಲಿ ತಿರುಗೇಟು ನೀಡಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಡ್ರಗ್ಸ್ ಮಾಫಿಯಾ ತನಿಖಾ ಹಾದಿ ತಪ್ಪಿಸುವ ಉದ್ದೇಶದಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ. ಡ್ರಗ್ಸ್ ಮಾಫಿಯಾದಲ್ಲಿ ಯಾರೇ ಇದ್ದರೂ ಅವರಿಗೆ ಶಿಕ್ಷೆ ಆಗಲೇಬೇಕು. ಸರ್ಕಾರ ಕೋವಿಡ್ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಿದ ಕಾರಣಕ್ಕೆ ವೈರಸ್ ನಿಯಂತ್ರಣದಲ್ಲಿದೆ. ಈ ಬಗ್ಗೆ ಸಿದ್ದರಾಮಯ್ಯ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಸಿದ್ದರಾಮಯ್ಯಗೆ ಗೋವಿಂದ ಕಾರಜೋಳ ಟಾಂಗ್ ನೀಡಿದ್ದಾರೆ.
ಪ್ರಶಾಂತ್ ಸಂಬರಗಿ ಬಿಜೆಪಿ ಜೊತೆಯಲ್ಲಿ ಇಲ್ವಾ : ಸಿದ್ದರಾಮಯ್ಯ
ಪ್ರಶಾಂತ್ ಸಂಬರಗಿ ಬಿಜೆಪಿ ಜೊತೆಯಲ್ಲಿ ಇಲ್ವಾ? ಹಾಗಂತ ನಾವು ಏನಾದ್ರೂ ಆರೋಪ ಮಾಡಿದ್ದೀವಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಡ್ರಗ್ ಮಾಫಿಯಾದಲ್ಲಿ ಜಮೀರ್ ಕೇಳಿ ಬರುತ್ತಿರುವ ಹಿನ್ನೆಲೆ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕ್ಯಾಸಿನೋಗೆ ಯಾರದೋ ಜೊತೆ ಹೋದರು ಅನ್ನೋದು ತಪ್ಪಲ್ಲ. ಡ್ರಗ್ಸ್ ವ್ಯವಹಾರದಲ್ಲಿ ಭಾಗಿಯಾಗಿದ್ರೆ ತಪ್ಪು. ಮಾಜಿ ಸಿಎಂ ಕುಮಾರಸ್ವಾಮಿ, ಶಾಸಕ ಜಮೀರ್ ಅಹ್ಮದ್ ಕ್ಯಾಸಿನೋಗೆ ಹೋಗಿರುವದನ್ನ ಒಪ್ಪಿಕೊಂಡಿದ್ದಾರೆ. ಈ ವಿಷಯದ ಕುರಿತು ನಾನು ಹೆಚ್ಚು ಮಾತನಾಡಲ್ಲ. ಬೇಕಿದ್ರೆ ಅವರನ್ನೇ ನೀವು ಕೇಳಬೇಕು. ನಾನು ವಿದೇಶಕ್ಕೆ ಹೋದಾಗ ಕ್ಯಾಸಿನೋ ಆಡುವ ಜಾಗವನ್ನ ನೋಡಿದ್ದೇನೆ. ಆದ್ರೆ ಅಲ್ಲಿ ಆಡಿಲ್ಲ. ಜಮೀರ್ ಕೊಲಂಬೋಗೆ ಹೋಗಿದ್ದು ಅಪರಾಧವಲ್ಲ ಎಂದು ಹೇಳಿದರು.
ವ್ಯಸನಗಳಿಂದ ಯುವಕರು ಯೌವನ ಕಳೆದುಕೊಳ್ಳತ್ತಿರುವುದು ವಿಷಾದನೀಯ: ಹಿರೇಮಠ ಶ್ರೀ
ವ್ಯಸನಗಳಿಂದ ಯುವಕರು ಯೌವನ ಕಳೆದುಕೊಳ್ಳತ್ತಿರುವುದು ವಿಷಾದನೀಯ ಎಂದು ತುಮಕೂರಿನ ಹಿರೇಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಅವರು ಡ್ರಗ್ ಮಾಫಿಯಾ ಬಗ್ಗೆ ಮಾತನಾಡಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಹಳೆನಿಜಗಲ್ಲಿನ ಕೆರೆ ಭರ್ತಿಯಾದ ಹಿನ್ನೆಲೆಯಲ್ಲಿ, ಕೆರೆಗೆ ಬಾಗಿನ ಸಮರ್ಪಿಸಿದ ಹಿರೇಮಠದ ಶ್ರೀಗಳು, ನಂತರ ಡ್ರಗ್ ಮಾಫಿಯಾ ಬಗ್ಗೆ ಮಾತನಾಡಿದರು. ಮಾದಕ ವ್ಯಸನಗಳಿಗೆ ಯುವಕರು ದಾಸರಾಗಬಾರದು. ಆಧುನಿಕ ಸಮಾಜದಲ್ಲಿ ತಂತ್ರಜ್ಞಾನ ಬೆಳೆದಿದೆ. ಎಲ್ಲವೂ ಅನ್ ಲೈನ್ ಕಾಲ ಎಂಬಾAತಾಗಿದೆ. ಯುವಕರು ತಮ್ಮ ವ್ಯಕ್ತಿತ್ವ ಕಟ್ಟಿಕೊಳ್ಳಬೇಕು. ಅಂದಿನ ಯುವಕರು ಸುಶಿಕ್ಷತರಿರುತ್ತಿರಲಿಲ್ಲ. ಇಂದು ಯವಕರು ಸುಶಿಕ್ಷತರಾಗಿದ್ದಾರೆ. ಆದರೆ ಯುವಕರು ಸಾಮಾಜಿಕ ಜಾಲತಾಣದಿಂದ ಕೆಟ್ಟಿಲ್ಲ. ಪ್ರಕೃತಿಯನ್ನು ನೋಡಿ ಯುವಕರು ಕಲಿಯಬೇಕು. ವಿವೇಚನೆ ಬಳಸಬೇಕು. ಯುವಕರು ವಿವೇಚನೆ ಗಳಿಸಬೇಕು ಎಂದು ತಿಳಿಸಿದರು.
ಇನ್ನೊಂದು ವಾರ ರಾಜ್ಯದಲ್ಲಿ ಭಾರಿ ಮಳೆ
ಇನ್ನೊಂದು ವಾರ ರಾಜ್ಯದಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಲೇ ರಾಜ್ಯದಲ್ಲಿ ಮಾನ್ಸೂನ್ ಚುರುಕಾಗಿದ್ದು, ಸಿದ್ದಪುರದಲ್ಲಿ 11 ಸೆಂ.ಮೀ, ಕುಂದಾಪುರ 10 ಸೆಂ.ಮೀ ಸೇರಿದಂತೆ ರಾಜ್ಯದ ಹಲವೆಡೆ ವ್ಯಾಪಕ ಮಳೆಯಾಗಿದೆ. ಏತನ್ಮಧ್ಯೆ ಕರಾವಳಿ ಭಾಗದಲ್ಲಿ ಇಂದಿನಿAದ ಸೆಪ್ಟೆಂಬರ್ 17 ರವರೆಗೆ ಹಾಗೂ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗಲಿದೆ. ಹೀಗಾಗಿ 14 ರಿಂದ 17ರ ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.








