ಪೊಲೀಸರಿಂದಲೇ ಗಾಂಜಾ ದಂಧೆ
ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರ ಆರ್.ಟಿ.ನಗರದ ನಿವಾಸದ ಭದ್ರತೆಗೆ ನಿಯೋಜನೆ ಮಾಡಿದ್ದ ಪೇದೆಗಳಿಬ್ಬರು ಗಾಂಜಾ ದಂಧೆಗೆ ಇಳದಿದ್ದಾರೆ. ಇದು ಬೇಲಿಯೇ ಎದ್ದು ಹೊಲ ಮೇಯ್ದಂಗೆ ಆಗಿದೆ.
ನಗರದ ಕೋರಮಂಗಲ ಠಾಣೆಯ ಸಿಬ್ಬಂದಿಗಳಾದ ಸಂತೋಷ್ ಮತ್ತು ಶಿವಕುಮಾರ್ ಪೇದೆಗಳು ಸಿಎಂ ನಿವಾಸದ ಬಳಿಯೇ, ಮೋಸ್ಟ್ ವಾಂಟೆಂಡ್ ಡ್ರಗ್ ಪೆಡ್ಲರ್ ಗಳಾದ ಅಖಿಲ್ ರಾಜ್ ಹಾಗೂ ಅಮ್ಜದ್ ಖಾನ್ ಬಳಿ ಗಾಂಜಾ ಖರೀದಿಸುತ್ತಿದ್ದರು. ಪೇದೆಗಳು ಗಾಂಜಾ ಖರೀದಿಸಿದ ಬಳಿಕ ಡ್ರಗ್ಸ್ ಪೆಡ್ಲರ್ ಗಳಿಗೆ ಯಾವುದೇ ಹಣ ನೀಡಿರಲಿಲ್ಲ.
ಇದರಿಂದ ಡ್ರಗ್ಸ್ ಪೆಡ್ಲರ್ ಗಳು ಹಣ ಕೇಳಿದ್ದಕ್ಕೆ ಅವರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದರು. ಈ ವೇಳೆ ಹೊಯ್ಸಳ ಸಿಬ್ಬಂದಿ ಸಿಎಂ ಮನೆ ಬಳಿ ಗಸ್ತಿನಲ್ಲಿದ್ದರು. ಅನುಮಾನದ ಮೇಲೆ ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಪೊಲೀಸರು ನಾಲ್ವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.