ADVERTISEMENT
Wednesday, September 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಪ್ರಜ್ವಲ್ ರೇವಣ್ಣ ಜೈಲಲ್ಲೇ ಇರಲಿ ಎನ್ನುವುದು ಹೆಚ್ ಡಿ ಕುಮಾರಸ್ವಾಮಿ ಆಸೆ: ಕೇಂದ್ರ ಮಂತ್ರಿಯೋ ಅಥವಾ ಪಂಚಾಯ್ತಿ ಮೆಂಬರೋ? ಕುಮಾರಸ್ವಾಮಿ ವಿರುದ್ಧ ಸಚಿವ ಬಾಲಕೃಷ್ಣ ಕೆಂಡಾಮಂಡಲ

Shwetha by Shwetha
September 16, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಾಯಕರು ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ಈಗ ಮತ್ತೊಂದು ಸ್ಫೋಟಕ ಹಂತಕ್ಕೆ ತಲುಪಿದೆ. ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಮುಂದಿಟ್ಟುಕೊಂಡು ಸಚಿವ ಹೆಚ್ ಸಿ ಬಾಲಕೃಷ್ಣ ಅವರು ಕುಮಾರಸ್ವಾಮಿ ವಿರುದ್ಧ ಅತ್ಯಂತ ಗಂಭೀರ ಹಾಗೂ ಶಾಕಿಂಗ್ ಆರೋಪಗಳನ್ನು ಮಾಡಿದ್ದಾರೆ.

ಮಗನ ರಾಜಕೀಯ ಭವಿಷ್ಯಕ್ಕಾಗಿ ಅಣ್ಣನ ಮಗನನ್ನೇ ಬಲಿ ಕೊಟ್ಟರಾ ಕುಮಾರಸ್ವಾಮಿ

Related posts

ಅನ್ನಭಾಗ್ಯ ಪಡಿತರ ವಿತರಣೆಯಲ್ಲಿ ಮಹತ್ವದ ಬದಲಾವಣೆ: ಬೆರಳಚ್ಚು ಹೊಂದಿಕೆಯಾಗದವರಿಗೆ ವಿನಾಯಿತಿ

ಅನ್ನಭಾಗ್ಯ ಪಡಿತರ ವಿತರಣೆಯಲ್ಲಿ ಮಹತ್ವದ ಬದಲಾವಣೆ: ಬೆರಳಚ್ಚು ಹೊಂದಿಕೆಯಾಗದವರಿಗೆ ವಿನಾಯಿತಿ

September 16, 2026
ಐಎಎಸ್ ಅಧಿಕಾರಿಗಳ ಜತೆ ಜುಗಲ್ಬಂದಿ ಆಡಿದ್ದ  ಕನ್ನಾಳೆ ಅಕ್ರಮಗಳ ಪಟ್ಟಿ ನೋಡಿ ಬೆಚ್ಚಿಬಿದ್ದ ತನಿಖಾಧಿಕಾರಿಗಳು:ಶೂನ್ಯದಿಂದ ನೂರಾರು ಕೋಟಿ ಒಡೆಯನಾದ ಅಕ್ರಮ ದಲ್ಲಾಳಿಯ ಆಟಕ್ಕೆ ಬ್ರೇಕ್ ಹಾಕಿದ ಸಿಐಡಿ.

ಐಎಎಸ್ ಅಧಿಕಾರಿಗಳ ಜತೆ ಜುಗಲ್ಬಂದಿ ಆಡಿದ್ದ ಕನ್ನಾಳೆ ಅಕ್ರಮಗಳ ಪಟ್ಟಿ ನೋಡಿ ಬೆಚ್ಚಿಬಿದ್ದ ತನಿಖಾಧಿಕಾರಿಗಳು:ಶೂನ್ಯದಿಂದ ನೂರಾರು ಕೋಟಿ ಒಡೆಯನಾದ ಅಕ್ರಮ ದಲ್ಲಾಳಿಯ ಆಟಕ್ಕೆ ಬ್ರೇಕ್ ಹಾಕಿದ ಸಿಐಡಿ.

September 16, 2026

ಪ್ರಜ್ವಲ್ ರೇವಣ್ಣ ಜೈಲಲ್ಲೇ ಇರಬೇಕು ಎನ್ನುವುದು ಸ್ವತಃ ಕುಮಾರಸ್ವಾಮಿ ಅವರ ಆಸೆಯಾಗಿದೆ ಎಂದು ಸಚಿವ ಬಾಲಕೃಷ್ಣ ಹೇಳಿದ್ದಾರೆ. ತಮ್ಮ ಮಗ ನಿಖಿಲ್ ಕುಮಾರಸ್ವಾಮಿ ಅವರನ್ನು ರಾಜಕೀಯವಾಗಿ ಪ್ರತಿಷ್ಠಾಪನೆ ಮಾಡಲು ಅಡ್ಡಿಯಾಗಬಹುದು ಎಂಬ ಕಾರಣಕ್ಕೆ, ಅಣ್ಣನ ಮಗ ಪ್ರಜ್ವಲ್ ಅವರನ್ನು ಮುಗಿಸಲು ಕುಮಾರಸ್ವಾಮಿ ಮುಂದಾಗಿದ್ದಾರೆ. ಪ್ರಜ್ವಲ್ ಅವರನ್ನು ಜೈಲಿಗೆ ಕಳುಹಿಸಿದ್ದು ಇದೇ ಕುಮಾರಸ್ವಾಮಿ ಎಂದು ಬಾಲಕೃಷ್ಣ ಗುಡುಗಿದ್ದಾರೆ. ಪ್ರಜ್ವಲ್ ರೇವಣ್ಣ ಅವರನ್ನು ರಾಜಕೀಯವಾಗಿ ಸಂಪೂರ್ಣವಾಗಿ ಮುಗಿಸುವ ತನಕ ಕುಮಾರಸ್ವಾಮಿ ಸುಮ್ಮನಿರಲ್ಲ ಎಂದು ಅವರು ಕಿಡಿಕಾರಿದ್ದಾರೆ.

ಕೇಂದ್ರ ಸಚಿವರ ವರ್ತನೆ ಪಂಚಾಯ್ತಿ ಮೆಂಬರ್ ನಂತಿದೆ

ಹೆಚ್ ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿದ್ದರೂ ಕೂಡ ಅತ್ಯಂತ ಬಾಲಿಶವಾಗಿ ವರ್ತಿಸುತ್ತಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಪಂಚಾಯ್ತಿ ಮೆಂಬರ್ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಜಗತ್ತಿನಲ್ಲಿ ತಾವೊಬ್ಬರೇ ಮೇಧಾವಿಗಳು, ಉಳಿದವರೆಲ್ಲಾ ದಡ್ಡರು ಎಂಬ ಭ್ರಮೆಯಲ್ಲಿ ಅವರಿದ್ದಾರೆ. ನಾನು ಕೇವಲ ಬಡವರಿಗಾಗಿಯೇ ಹುಟ್ಟಿದ್ದೇನೆ ಎಂಬಂತೆ ಬಿಂಬಿಸಿಕೊಳ್ಳುವ ಅವರ ಮನಸ್ಥಿತಿಯೇ ವಿಚಿತ್ರವಾಗಿದೆ ಎಂದು ಬಾಲಕೃಷ್ಣ ವ್ಯಂಗ್ಯವಾಡಿದ್ದಾರೆ.

ಹಗರಣಗಳ ನೆಪವೊಡ್ಡಿ ಪ್ರಜ್ವಲ್ ಪ್ರಕರಣದ ಹಾದಿ ತಪ್ಪಿಸುವ ಯತ್ನ

ನೈಸ್ ಹಾಗೂ ಕೆಪಿಎಸ್ ಪಿ ಹಗರಣಗಳನ್ನು ಮುಚ್ಚಿ ಹಾಕಲು ಸರ್ಕಾರ ಪ್ರಜ್ವಲ್ ರೇವಣ್ಣ ವಿಚಾರವನ್ನು ಮುನ್ನೆಲೆಗೆ ತಂದಿದೆ ಎಂಬ ಕುಮಾರಸ್ವಾಮಿ ಅವರ ಆರೋಪಕ್ಕೆ ಸಚಿವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಜ್ವಲ್ ಪ್ರಕರಣಕ್ಕೂ ಆ ಹಗರಣಗಳಿಗೂ ಏನು ಸಂಬಂಧ? ಈ ಪ್ರಕರಣದ ಬಗ್ಗೆ ಪದೇ ಪದೇ ಮಾತನಾಡುವ ಮೂಲಕ ಪ್ರಜ್ವಲ್ ರೇವಣ್ಣ ಶಾಶ್ವತವಾಗಿ ಜೈಲಿನಲ್ಲಿ ಇರುವಂತೆ ಕುಮಾರಸ್ವಾಮಿ ನೋಡಿಕೊಳ್ಳುತ್ತಿದ್ದಾರೆ. ಮೊಬೈಲ್ ಫೋನ್ ಹೇಗೆ ಸಿಕ್ಕಿತು ಎಂಬ ಬಗ್ಗೆ ಸಿಬಿಐಗೆ ಪತ್ರ ಬರೆದು ತನಿಖೆ ಮಾಡಿಸಲಿ, ಅದನ್ನು ಬಿಟ್ಟು ಸುಮ್ಮನೆ ಆರೋಪ ಮಾಡುವುದು ಸರಿಯಲ್ಲ ಎಂದು ತಿರುಗೇಟು ನೀಡಿದ್ದಾರೆ.

ಒಕ್ಕಲಿಗ ಕಾರ್ಡ್

ದೇವೇಗೌಡರ ಕುಟುಂಬವನ್ನು ಮುಗಿಸಲು ಕಾಂಗ್ರೆಸ್ ಸಂಚು ರೂಪಿಸಿದೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಬಾಲಕೃಷ್ಣ, ರಾಜಕಾರಣದಲ್ಲಿ ಯಾರೂ ಯಾರನ್ನೂ ಮುಗಿಸಲು ಸಾಧ್ಯವಿಲ್ಲ. ನಾವೇನೂ ಕುಮಾರಸ್ವಾಮಿ ಅವರನ್ನು ಬೆಳೆಸಲು ಸಾಧ್ಯವೇ? ಇದು ರಾಜಕಾರಣ, ಇಲ್ಲಿ ವಿರೋಧಿಗಳನ್ನು ಯಾರೂ ಬೆಳೆಸುವುದಿಲ್ಲ. ಒಕ್ಕಲಿಗರು ಎನ್ನುವ ಸೆಂಟಿಮೆಂಟ್ ಬಳಸಿಕೊಂಡು ರಾಜಕಾರಣ ಮಾಡುವುದನ್ನು ಅವರು ಬಿಡಲಿ. ಕೇಂದ್ರ ಸಚಿವರಾಗಿ ರಾಜ್ಯಕ್ಕೆ ಉದ್ಯೋಗ ತರುವ ಕೆಲಸ ಮಾಡಲಿ ಎಂದು ಅವರು ಸಲಹೆ ನೀಡಿದ್ದಾರೆ.

ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಬಂದ ಮೇಲೆ ನಮಗೆ ನೆಮ್ಮದಿಯ ನಿದ್ದೆ ಹತ್ತಿದೆ ಎಂದು ಬಾಲಕೃಷ್ಣ ಅವರು ವ್ಯಂಗ್ಯದ ಮೂಲಕವೇ ಕುಮಾರಸ್ವಾಮಿ ಅವರ ಅಬ್ಬರಕ್ಕೆ ಬ್ರೇಕ್ ಹಾಕುವ ಪ್ರಯತ್ನ ಮಾಡಿದ್ದಾರೆ. ಈ ಹೇಳಿಕೆಗಳು ಈಗ ಜೆಡಿಎಸ್ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಮುಂದಿನ ದಿನಗಳಲ್ಲಿ ಈ ರಾಜಕೀಯ ಜಿದ್ದಾಜಿದ್ದಿ ಯಾವ ತಿರುವು ಪಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.

ShareTweetSendShare
Join us on:

Related Posts

ಅನ್ನಭಾಗ್ಯ ಪಡಿತರ ವಿತರಣೆಯಲ್ಲಿ ಮಹತ್ವದ ಬದಲಾವಣೆ: ಬೆರಳಚ್ಚು ಹೊಂದಿಕೆಯಾಗದವರಿಗೆ ವಿನಾಯಿತಿ

ಅನ್ನಭಾಗ್ಯ ಪಡಿತರ ವಿತರಣೆಯಲ್ಲಿ ಮಹತ್ವದ ಬದಲಾವಣೆ: ಬೆರಳಚ್ಚು ಹೊಂದಿಕೆಯಾಗದವರಿಗೆ ವಿನಾಯಿತಿ

by Shwetha
September 16, 2026
0

ರಾಜ್ಯದ ಬಡ ಮತ್ತು ಅಗತ್ಯವಿರುವ ಜನರಿಗೆ ಆಹಾರ ಭದ್ರತೆ ಒದಗಿಸುವ ಅನ್ನಭಾಗ್ಯ ಯೋಜನೆಯ ಪಡಿತರ ವಿತರಣೆಯಲ್ಲಿ ಎದುರಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ...

ಐಎಎಸ್ ಅಧಿಕಾರಿಗಳ ಜತೆ ಜುಗಲ್ಬಂದಿ ಆಡಿದ್ದ  ಕನ್ನಾಳೆ ಅಕ್ರಮಗಳ ಪಟ್ಟಿ ನೋಡಿ ಬೆಚ್ಚಿಬಿದ್ದ ತನಿಖಾಧಿಕಾರಿಗಳು:ಶೂನ್ಯದಿಂದ ನೂರಾರು ಕೋಟಿ ಒಡೆಯನಾದ ಅಕ್ರಮ ದಲ್ಲಾಳಿಯ ಆಟಕ್ಕೆ ಬ್ರೇಕ್ ಹಾಕಿದ ಸಿಐಡಿ.

ಐಎಎಸ್ ಅಧಿಕಾರಿಗಳ ಜತೆ ಜುಗಲ್ಬಂದಿ ಆಡಿದ್ದ ಕನ್ನಾಳೆ ಅಕ್ರಮಗಳ ಪಟ್ಟಿ ನೋಡಿ ಬೆಚ್ಚಿಬಿದ್ದ ತನಿಖಾಧಿಕಾರಿಗಳು:ಶೂನ್ಯದಿಂದ ನೂರಾರು ಕೋಟಿ ಒಡೆಯನಾದ ಅಕ್ರಮ ದಲ್ಲಾಳಿಯ ಆಟಕ್ಕೆ ಬ್ರೇಕ್ ಹಾಕಿದ ಸಿಐಡಿ.

by Shwetha
September 16, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಹಗರಣ ಇಡೀ ರಾಜ್ಯವನ್ನೇ ನಡುಗಿಸಿದೆ. ಈ ಹಗರಣದ ರೂವಾರಿ, ವಿಧಾನಸೌಧದ ಕಾರಿಡಾರ್‌ಗಳಲ್ಲಿ ದರ್ಬಾರ್ ನಡೆಸುತ್ತಿದ್ದ ಬಸವರಾಜ್ ಕನ್ನಾಳೆ ಎಂಬ ಸಾಮಾನ್ಯ...

ಮಕ್ಕಳ ಆನ್‌ಲೈನ್ ಸುರಕ್ಷತೆಗೆ ಮಹತ್ವದ ಹೆಜ್ಜೆ: ಲೈಂಗಿಕ ದೌರ್ಜನ್ಯ ಪ್ರಕರಣ ವರದಿ ಮಾಡಲು ಮೆಟಾ ಒಪ್ಪಿಗೆ

ಮಕ್ಕಳ ಆನ್‌ಲೈನ್ ಸುರಕ್ಷತೆಗೆ ಮಹತ್ವದ ಹೆಜ್ಜೆ: ಲೈಂಗಿಕ ದೌರ್ಜನ್ಯ ಪ್ರಕರಣ ವರದಿ ಮಾಡಲು ಮೆಟಾ ಒಪ್ಪಿಗೆ

by Shwetha
September 16, 2026
0

ಮಕ್ಕಳನ್ನು ಆನ್‌ಲೈನ್‌ನಲ್ಲಿ ಲೈಂಗಿಕ ದೌರ್ಜನ್ಯ ಹಾಗೂ ಇತರ ಅಪಾಯಕಾರಿ ಚಟುವಟಿಕೆಗಳಿಂದ ರಕ್ಷಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ...

ನನಗೆ ಮುಸ್ಲಿಮರೇ ಮೊದಲು: ಕಲಾವಿದನಿಗೆ ಒಂದು ಧರ್ಮದ ಹಂಗೇಕೆ? ಬಿಗ್ ಸ್ಟಾರ್ ಬೋಳಾರ್ ವಿರುದ್ಧ ತಿರುಗಿಬಿದ್ದ ಫ್ಯಾನ್ಸ್

ನನಗೆ ಮುಸ್ಲಿಮರೇ ಮೊದಲು: ಕಲಾವಿದನಿಗೆ ಒಂದು ಧರ್ಮದ ಹಂಗೇಕೆ? ಬಿಗ್ ಸ್ಟಾರ್ ಬೋಳಾರ್ ವಿರುದ್ಧ ತಿರುಗಿಬಿದ್ದ ಫ್ಯಾನ್ಸ್

by Shwetha
September 16, 2026
0

ಮಂಗಳೂರು: ತುಳು ಚಿತ್ರರಂಗ ಹಾಗೂ ನಾಟಕ ರಂಗದ ಧ್ರುವತಾರೆ, ಜನಪ್ರಿಯ ಹಾಸ್ಯ ನಟ ಅರವಿಂದ್ ಬೋಳಾರ್ ಅವರು ಖಾಸಗಿ ಕಾರ್ಯಕ್ರಮವೊಂದರಲ್ಲಿ ನೀಡಿದ ಹೇಳಿಕೆ ಈಗ ಕರಾವಳಿ ಭಾಗದಲ್ಲಿ...

dk-shivakumar-statement-kpsc-scam-kumaraswamy-bjp

ಹಗರಣಗಳ ವಿರುದ್ಧ ದಾಖಲೆಗಳ ಸಮರ: ಯಾವುದೇ ಕಾರಣಕ್ಕೂ ಹಿಂದೆ ಸರಿಯಲ್ಲ ಎಂದ ಕುಮಾರಸ್ವಾಮಿ

by Shwetha
September 16, 2026
0

ರಾಜ್ಯ ಸರ್ಕಾರದ ವಿರುದ್ಧ ತಾನು ಮಾಡಿರುವ ಆರೋಪಗಳಿಗೆ ಸೂಕ್ತ ದಾಖಲೆಗಳನ್ನು ಹೊಂದಿದ್ದು, ಸಂಪೂರ್ಣ ಸಿದ್ಧತೆಯೊಂದಿಗೆ ಜನರ ಮುಂದೆ ಬರುವುದಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹೊಳೆನರಸೀಪುರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram