ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ರಾಜ್ ಕುಂದ್ರಾ ಬಗ್ಗೆ ಮಾದಕ ನಟಿ ಪೂನಂ ಪಾಂಡೆ  ಬಿಚ್ಚಿಟ್ಟ ಶಾಕಿಂಗ್ ವಿಚಾರಗಳು..!

Namratha Rao by Namratha Rao
July 22, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ರಾಜ್ ಕುಂದ್ರಾ ಬಗ್ಗೆ ಮಾದಕ ನಟಿ ಪೂನಂ ಪಾಂಡೆ  ಬಿಚ್ಚಿಟ್ಟ ಶಾಕಿಂಗ್ ವಿಚಾರಗಳು..!

ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ , ಉದ್ಯಮಿ ರಾಜ್ ಕುಂದ್ರಾ ಅಶ್ಲೀಲ ವಿಡಿಯೋ ನಿರ್ಮಾಣ ಪ್ರಕರಣದಲ್ಲಿ  ಮುಂಬೈ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದು, ವಿಚಾರಣೆ ನಡೆಸಿರುವ ನ್ಯಾಯಾಲುಯವು ಜುಲೈ 23 ರವರೆಗೂ ಅವರನ್ನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.. ಈ ನಡುವೆ ರಾಜ್ ಕುಂದ್ರ ಶಿಲ್ಪಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗ್ತ ಇದ್ದಾರೆ.. ರಾಜ್ ಕುಂದ್ರ ಪೋರ್ನ್ ವಿಡಿಯೋಗಳ ಕುರಿತಾಗಿ ಮಾಡಿದ್ದ ಹಳೆಯ ಟ್ವೀಟ್ ಗಳು ವೈರಲ್ ಆಗ್ತಿವೆ.. ಕೆಲವೊಬ್ರು ರಾಜ್ ಕುಂದ್ರಾ ಪರ ನಿಂತಿದ್ದಾರೆ..

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

ಇದರ ಬೆನ್ನಲ್ಲೇ ಕಾಂಟ್ರವರ್ಸಿ ಕ್ವೀನ್ , ಬೋಲ್ಡ್ ಹೇಳಿಕೆಗಳನ್ನೇ ನೀಡುತ್ತಾ ಸುದ್ದಿಯಲ್ಲಿರುವ ಮಾದಕ ನಟಿ ಪೂನಂ ಪಾಂಡೆ  ಈ ಹಿಂದೆ ರಾಜ್ ಕದ್ರಾ ವಿರುದ್ಧ ಮಾಡಿದ್ದ ಆರೋಪದ ಸುದ್ದಿ ಈಗ ವೈರಲ್ ಆಗ್ತಿದೆ.. ಹೌದು ಪೂನಂ  2019ರಲ್ಲಿಯೇ ರಾಜ್ ಕುಂದ್ರ ವಿರುದ್ಧ ದೂರು ದಾಖಲಿಸಿದ್ದರು.  ರಾಜ್ ಕುಂದ್ರರನ್ನು ‘ಬ್ಲೂ ಫಿಲ್ಮ್ ದಂಧೆಯ ಮಾಸ್ಟರ್ ಮೈಂಡ್’ ಎಂದು ಆರೋಪಿಸಿದ್ದರು ಎನ್ನುವ ಸುದ್ದಿ ಈಗ  ಬಿ ಟೌನ್ ನಲ್ಲಿ ಹಲ್ ಚಲ್ ಸೃಷ್ಟಿ ಮಾಡಿದೆ.. ರಾಜ್ ಕುಂದ್ರ ಬಂಧನದ ಬೆನ್ನಲ್ಲೇ ಪೂನಂ ಪಾಂಡೆ ಸಖತ್ ಟ್ರೆಂಡಿಂಗ್ ನಲ್ಲಿದ್ದಾರೆ. ಮಾಡೆಲ್, ನಟಿ ಪೂನಂ ಪಾಂಡೆ 2019ರಲ್ಲಿ ರಾಜ್ ಕುಂದ್ರ ವಿರುದ್ಧ ಮಾಡಿರುವ ಗಂಭೀರ ಆರೋಪ ಈಗ ಸದ್ದು ಮಾಡುತ್ತಿದೆ. ಇದೆಲ್ಲದರ ನಡುವೆ ಪೂನಂ ಪಾಂಡೆ ನೀಡುತ್ತಿರುವ ಹೇಳಿಕೆಗಳು ಸಂಚಲನ ಸೃಷ್ಟಿಸುತ್ತಿವೆ. ಕುಂದ್ರಾ ವಿರುದ್ಧ ಪೂನಂ ಆರೋಪಗಳ ಮೇಲೆ ಆರೋಪ ಮಾಡುತ್ತಿದ್ದು, ಶಾಕಿಂಗ್ ವಿಚಾರಗಳನ್ನ ಬಹಿರಂಗಪಡಿಸುತ್ತಿದ್ದಾರೆ.

ರಾಷ್ಟ್ರೀಯ ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಪೂನಂ ‘ನನ್ನನ್ನು ಬೆದರಿಸಿ ಒಪ್ಪಂದಕ್ಕೆ ಸಹಿ ಮಾಡಿಸಿಕೊಂಡಿದ್ದರು. ಅವರು ಹೇಳಿದಂತೆ ಚಿತ್ರೀಕರಣ ಮಾಡಬೇಕಿತ್ತು. ಫೋಸ್ ಕೊಡಬೇಕಿತ್ತು. ಇಲ್ಲವಾದಲ್ಲಿ ನನ್ನ ಖಾಸಗಿ ಸಂಗತಿಗಳನ್ನು ಸೋರಿಕೆ ಮಾಡುವುದಾಗಿ ಹೇಳುತ್ತಿದ್ದರು’ಎಂಬ ವಿಚಾರ ಹೊರಹಾಕಿದ್ದಾರೆ.  ನಾನು ಅವರ ಒಪ್ಪಂದಿಂದ ಹಿಂದಕ್ಕೆ ಸರಿದಾಗ ನನ್ನ ಖಾಸಗಿ ಸಂದೇಶಗಳನ್ನು ಲೀಕ್ ಮಾಡಿದರು.  ಕಾಲ್ ಮಾಡಿ, ನಿಮಗಾಗಿ ನಾನು ನಗ್ನವಾಗಲು ಸಿದ್ದ  ಅಂತಹ ಸಂಭಾಷೆಗಳೊಂದಿಗೆ ವೈಯಕ್ತಿಕ ನಂಬರ್ ಸೋರಿಕೆ ಮಾಡಿದರು  ಎಂದು ದೂರಿದ್ದಾರೆ. ಇದಾದ ಮೇಲೆ ನನಗೆ ಎಲ್ಲಾ ಕಡೆಯಿಂದಲೂ ಫೋನ್ ಕಾಲ್ ಬರುವುದಕ್ಕೆ ಶುರುವಾಯಿತು. ಸಾವಿರಾರು ಸಂಖ್ಯೆಯಲ್ಲಿ ಫೋನ್ ಕಾಲ್ ಬಂತು. ಜನರು ನನಗೆ ಅಶ್ಲೀಲ ವಿಡಿಯೋ ಮತ್ತು ಫೋಟೋಗಳನ್ನು ಕಳುಹಿಸಲು ಶುರು ಮಾಡಿದರು. ಅಸಭ್ಯವಾಗಿ ವರ್ತಿಸಿದರು. ಆ ಸಮಯದಲ್ಲಿ ನನಗೆ ಏನಾದರೂ ತೊಂದರೆ ಉಂಟಾಗಬಹುದು ಎಂಬ ಭಯದಿಂದ ಮನೆ ಬಿಟ್ಟು ಹೋದೆ ಎಂದು ಪೂನಂ ಬಹಿರಂಗಪಡಿಸಿದ್ದಾರೆ.

ರಾಜ್ ಕುಂದ್ರಾ ಅವರ ಅರ್ಮ್ಸ್ ಪ್ರೈಮ್ ಮೀಡಿಯಾ ಸಂಸ್ಥೆ ಜೊತೆ ಪೂನಂ ಪಾಂಡೆ ಒಪ್ಪಂದ ಮಾಡಿಕೊಂಡಿದ್ದರು. ಈ ಒಪ್ಪಂದ ಮುಗಿದ ಬಳಿಕವೂ ರಾಜ್ ಕುಂದ್ರ ಮತ್ತು ಅವರ ಸಹಚರರು ತನ್ನ ವಿಡಿಯೋ ತುಣುಕುಗಳನ್ನು ಮತ್ತು ಸಿನಿಮಾಗಳನ್ನು ನಿರ್ದಾಕ್ಷಿಣ್ಯವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಪೂನಂ ಪೊಲೀಸ್ ಸ್ಟೇಷನ್ ಮೆಟ್ಟಿಲೇರಿದ್ದರು. ಆಗ ರಾಜ್ ಕುಂದ್ರಾ ಈ ಆರೋಪಗಳನ್ನು ನಿರಾಕರಿಸಿದರು. ಇದೀಗ ರಾಜ್ ಕುಂದ್ರಾ ಅರೆಸ್ಟ್ ಬೆನ್ನಲ್ಲೇ ಅವರ ಹಲೇ ಟ್ವೀಟ್ ಗಳು , ಪೂನಂ ಆರೋಪ ಸುದ್ದಿಗಳೂ ಕೂಡ ವೈರಲ್ ಆಗತೊಡಗಿವೆ..

ಅಶ್ಲೀಲ ಚಿತ್ರಗಳಲ್ಲಿ ಕಾಣಿಸಿಕೊಳ್ಳುವಂತೆ ರಾಜ್‌ ಕುಂದ್ರಾ ಅವರು ತಮಗೆ ನೇರ ಸಂದೇಶ ಕಳುಹಿಸಿದ್ದರು ಎಂದು ಯೂಟ್ಯೂಬ್‌ ಸ್ಟಾರ್‌ ಪುನೀತ್‌ ಕೌರ್‌ ಆರೋಪಿಸಿದ್ದಾರೆ. ಇಂತಹ ಚಿತ್ರಗಳಲ್ಲಿ ಕಾಣಿಸಿಕೊಳ್ಳುವಂತೆ ರಾಜ್‌ ಕುಂದ್ರಾ ಅವರು ತಮಗೆ ನೇರ ಸಂದೇಶ ಕಳುಹಿಸಿದ್ದರು ಎಂದು ತಮ್ಮ ಇನ್‌ಸ್ಟಾಗ್ರಾಮ್‌ ನಲ್ಲಿ  ವಿಡಿಯೊಗಳ  ಮೂಲಕ ಹೇಳಿಕೊಂಡಿದ್ದಾರೆ. ಈ ವಿಚಾರವಾಗಿ ಬರೆದುಕೊಂಡಿರುವ ಕೌರ್‌, ಬ್ರೋಸ್‌, ನೇರ ಸಂದೇಶ ಹೊಂದಿದ್ದ ವಿಡಿಯೊ ಪರಿಶೀಲನೆ ಮಾಡಿದ್ದನ್ನು ನೀವು ನೆನಪಿಸಿಕೊಳ್ಳುತ್ತಿದ್ದಾರಾ? ಅಲ್ಲಿ ರಾಜ್‌ ಕುಂದ್ರಾ ಹಾಟ್‌ ಶಾಟ್‌ ಗಾಗಿ ನನ್ನನ್ನು ಸಂಪರ್ಕಿಸಿದ್ದರು ಎಂದು ತಿಳಿಸಿದ್ದಾರೆ. ಅಲ್ಲದೇ ರಾಜ್‌ ಕುಂದ್ರಾ ನೇರ ಸಂದೇಶ ಕಳುಹಿಸಿದ್ದರು.. ನಾವು ಅದು ಸ್ಪಾಮ್ ಅಂದುಕೊಂಡಿದ್ದೆವು. ಈ ಮನುಷ್ಯ ನಿಜವಾಗಿಯೂ ಜನರಿಗೆ ಆಮಿಷವೊಡ್ಡುತ್ತಿದ್ದಾನೆ. ಈಗ ಅವನು ಜೈಲಿನಲ್ಲಿ ಕೊಳೆಯಲಿ ಎಂದು ಹೇಳಿದ್ದಾರೆ.

“ ರಾಜ್‌ ಕುಂದ್ರಾ ನನಗೆ ಅಶ್ಲೀಲ ಚಿತ್ರಗಳಲ್ಲಿ ಕಾಣಿಸಿಕೊಳ್ಳಲು ಕೇಳಿದ್ದರು, ಈತ ಜೈಲಿನಲ್ಲಿಯೇ ಕೊಳೆಯಲಿ ” – ಯೂಟ್ಯೂಬ್ ಸ್ಟಾರ್

ಈ ನಡುವೆ  ರಾಜ್ ಕುಂದ್ರಾ ಅವರು ಈ ಹಿಂದೆ ಮಾಡಿದ್ದ  ಟ್ವೀಟ್ ಈಗ ಭಾರೀ ವೈರಲ್ ಆಗ್ತಿದೆ. ನೀಲಿ ಚಿತ್ರದ ಬಗ್ಗೆ ರಾಜ್ ಕುಂದ್ರಾ ಅವರು 2012ರಲ್ಲಿ ಮಾಡಿದ್ದ ಸುಮಾರು 8 – 9 ವರ್ಷಗಳ ಹಳೆಯ ಟ್ವೀಟ್‌ ಗಳು ಈಗ ವೈರಲ್ ಆಗುತ್ತಿವೆ. ವೇಶ್ಯಾವಾಟಿಕೆ ಮತ್ತು ಟ್ವೀಟ್ ನಲ್ಲಿ ‘ಕ್ಯಾಮೆರಾದಲ್ಲಿ ಸೆರೆಯಾದ ಸೆಕ್ಸ್‌ ನೋಡಲು ಹಣ ತೆರುವುದು ಕಾನೂನುಬದ್ಧ ಆಗಿರುವಾಗ ವೇಶ್ಯಾವಾಟಿಕೆ ಏಕೆ ಕಾನೂನು ಬಾಹಿರ’ ಎಂದು ರಾಜ್ ಕುಂದ್ರಾ ಪ್ರಶ್ನೆ ಮಾಡಿದ್ದರು. ಆ ಮೂಲಕ ವೇಶ್ಯಾವಾಟಿಕೆಯನ್ನು ಕಾನೂನುಬದ್ಧಗೊಳಿಸಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಅದೇ ವರ್ಷ ಮಾಡಿದ್ದ ಮತ್ತೊಂದು ಟ್ವೀಟ್ ನಲ್ಲಿ ನಟರು ಕ್ರಿಕೆಟ್ ಆಡುತ್ತಿದ್ದಾರೆ. ಕ್ರಿಕೆಟಿಗರು ರಾಜಕಾರಣ ಮಾಡುತ್ತಿದ್ದಾರೆ. ರಾಜಕಾರಣಿಗಳು ಪೋರ್ನ್ ವಿಡಿಯೋಗಳನ್ನು ನೋಡುತ್ತಿದ್ದಾರೆ. ಪೋರ್ನ್ ಸ್ಟಾರ್‌ ಗಳು ನಟರಾಗುತ್ತಿದ್ದಾರೆ ಎಂದಿದ್ದರು. ಇದೀಗ ರಾಜ್  ಬಂಧನದ ಬೆನ್ನಲ್ಲೇ ಹಳೆಯ ಟ್ವೀಟ್ ಗಳು ವೈರಲ್ ಆಗ್ತಿವೆ.. ಇನ್ನೂ ಈ ಪ್ರಕರಣದ ಬಗ್ಗೆ ಹಲವು ತಿಂಗಳುಗಳಿಂದ ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದರು.. ಮಾಹಿತಿಗಳನ್ನೆಲ್ಲಾ ಕಲೆ ಹಾಕಿದ ನಂತರ ಈ ಪ್ರಕರಣದ ಮುಖ್ಯ ಆರೋಪಿ ರಾಜ್  ಕುಂದ್ರಾ ಎಂಬುದು ಗೊತ್ತಾಗಿದೆ..raj kundra saaskahtv

ವರ್ಷದ ಫೆಬ್ರವರಿಯಲ್ಲಿ ಈ ಬಗ್ಗೆ ದೂರು ದಾಖಲಾಗಿತ್ತು, ತನಿಖೆ ವೇಳೆ ಪ್ರಕರಣದ ಮುಖ್ಯ ಆರೋಪಿ ರಾಜ್ ಕುಂದ್ರಾ ಎಂದು ತಿಳಿದುಬಂದಿದ್ದು ಅವರ ವಿರುದ್ಧ ಪ್ರಾಥಮಿಕ ಸಾಕ್ಷ್ಯಗಳನ್ನು ಒಟ್ಟುಗೂಡಿಸಿಕೊಂಡ ಬಳಿಕ ಅವರನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ರಾಜ್ ಕುಂದ್ರಾ ಉದ್ಯಮಿ ಆಗಿದ್ದು, ಐಪಿಎಲ್ ತಂಡ ರಾಜಸ್ಥಾನ ರಾಯಲ್ಸ್‌ನ ಮಾಲೀಕರು ಸಹ ಆಗಿದ್ದಾರೆ.  ಈ ನಡುವೆ ಮಾಡೆಲ್ ಒಬ್ಬರು ರಾಜ್ ಕುಂದ್ರಾ ಬೆಂಬಲಕ್ಕೆ ಬಂದಿದ್ದು, ರಾಜ್ ಕುಂದ್ರ ತಪ್ಪು ಮಾಡಿಲ್ಲ.. ಪಾರ್ನ್ ವಿಡಿಯೋಸ್ ಶುಟ್ ಮಾಡಿಸಿಲ್ಲ. ಇವು ಬೋಲ್ಡ್ ವಿಡಿಯೋಸ್. ಎರಿಯೋಟಿಕ್ ವಿಡಿಯೋಗಳನ್ನ ಪಾರ್ನ್ ವಿಡಿಯೋಗಳ ಜೊತೆಗೆ ಸೇರಿಸಬೇಡಿ ಎಂದಿದ್ದಾರೆ. ಕಳೆದ ವರ್ಷದಿಂದ ಅಶ್ಲೀಲ ಚಿತ್ರೀಕರಣ ದಂಧೆಯ ಹಿಂದೆ ಬಿದ್ದಿದ್ದ ಪೊಲೀಸರು ದೊಡ್ಡ ಜಾಲವನ್ನು ಪತ್ತೆ ಮಾಡಿ 9 ಜನರನ್ನು ಬಂಧಿಸಿದ್ದಾರೆ. ಅಲ್ಲದೇ ಇನ್ನೂ ಅನೇಕರ ಹೆಸರುಗಳು ಕೇಳಿ ಬರ್ತಿವೆ ಎನ್ನಲಾಗಿದೆ..

ಅಶ್ಲೀಲ ವಿಡಿಯೋ ಚಿತ್ರೀಕರಣ – ಶಿಕ್ಷೆ ತಪ್ಪಿಸಿಕೊಳ್ಳಲು ಪೊಲೀಸರಿಗೆ  ಲಂಚ ಕೊಟ್ರಾ ರಾಜ್ ಕುಂದ್ರಾ..?

Tags: blue film caseBollywoodPoonam Pandeyraj kundrashilpa shetty
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram