ಇನ್ಮುಂದೆ ದೇಶದಲ್ಲಿ ಸೂರ್ಯಾಸ್ತದ ನಂತರವೂ ಪೋಸ್ಟ್ ಮಾರ್ಟಮ್ ನಡೆಸಲು ಅನುಮತಿ..!
ನವದೆಹಲಿ : ಇಷ್ಟು ದಿನಗಳ ವರೆಗೂ ಮರಣೋತ್ತರ ಪರೀಕ್ಷೆಯನ್ನ ಸೂರ್ಯಾಸ್ತಕ್ಕೂ ಮುನ್ನವೇ ನೆರವೇರಿಸಬೇಕಾಗಿತ್ತು.. ಆದ್ರೆ ಇನ್ಮುಂದೆ ಸೂರ್ಯಾಸ್ತದ ನಂತರವೂ ಕೂಡ ದೇಶದಲ್ಲಿ ಮೃತ ದೇಹಗಳ ಮರಣೋತ್ತರ ಪರೀಕ್ಷೆಯನ್ನು ಮಾಡಬಹುದು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮಾಹಿತಿ ನೀಡಿದ್ದಾರೆ.
ರಾತ್ರಿ ವೇಳೆ ಮರಣೋತ್ತರ ಪರೀಕ್ಷೆ ನಡೆಸುವ ಸೌಲಭ್ಯ ಹೊಂದಿರುವ ಆಸ್ಪತ್ರೆಗಳು ಇನ್ಮುಂದೆ ಸೂರ್ಯಾಸ್ತದ ನಂತರವೂ ಮರಣೋತ್ತರ ಪರೀಕ್ಷೆಯನ್ನು (Post Mortam) ಮಾಡಬಹುದಾಗಿದೆ ಎಂದು ಆರೋಗ್ಯ ಸಚಿವಾಲಯ ನಿರ್ಧರಿಸಿದೆ. ಈ ಮೂಲಕ ಬ್ರಿಟಿಷರ ಕಾಲದ ಹಳೆ ವ್ಯವಸ್ಥೆ ಕೊನೆಗೊಂಡಿದೆ ಎಂದು ಮನ್ಸುಖ್ ಹೇಳಿದ್ದಾರೆ.
ಅಂಗಾಂಗ ದಾನದ ಮರಣೋತ್ತರ ಪರೀಕ್ಷೆಗಳನ್ನು ಆದ್ಯತೆಯ ಆಧಾರದ ಮೇಲೆ ಮಾಡಬೇಕು.. ಅಂತಹ ಮರಣೋತ್ತರ ಪರೀಕ್ಷೆಗಳನ್ನು ನಿಯಮಿತವಾಗಿ ನಡೆಸಲು ಮೂಲಸೌಕರ್ಯ ಹೊಂದಿರುವ ಆಸ್ಪತ್ರೆಗಳಲ್ಲಿ ಸೂರ್ಯಾಸ್ತದ ನಂತರವೂ ಪರೀಕ್ಷೆ ಮಾಡಬಹುದು ಎಂದು ಹೊಸ ಪ್ರೋಟೋಕಾಲ್ ಹೇಳುತ್ತದೆ. ಈ ನಿರ್ಧಾರದಲ್ಲಿ, ಆರೋಗ್ಯ ಸಚಿವಾಲಯವು ಯಾವುದೇ ಅನುಮಾನಗಳನ್ನು ನಿವಾರಿಸಲು ಮತ್ತು ಕಾನೂನು ಉದ್ದೇಶಗಳಿಗಾಗಿ ರಾತ್ರಿ ಎಲ್ಲಾ ಮರಣೋತ್ತರ ಪರೀಕ್ಷೆಗಳಿಗೆ ಮರಣೋತ್ತರ ಪರೀಕ್ಷೆಯ ವೀಡಿಯೊ ರೆಕಾರ್ಡಿಂಗ್ ಮಾಡಲಾಗುವುದು ಎಂದು ಹೇಳಿದೆ.
ರಾತ್ರಿ ಯಾವ ಸಂದರ್ಭಗಳಲ್ಲಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಲಾಗುವುದಿಲ್ಲ ಎಂಬುದರ ಮಾಹಿತಿಯನ್ನೂ ಕೂಡ ಕೇಂದ್ರ ಸರ್ಕಾರ ನೀಡಿದೆ. ತೀರ್ಪಿನ ಪ್ರಕಾರ, ಕಾನೂನು ಮತ್ತು ಸುವ್ಯವಸ್ಥೆ ಇಲ್ಲದಿದ್ದರೆ, ರಾತ್ರಿಯ ಸಮಯದಲ್ಲಿ ಕೊಲೆ, ಆತ್ಮಹತ್ಯೆ, ಅತ್ಯಾಚಾರ, ವಿರೂಪಗೊಂಡ ದೇಹ ಮುಂತಾದ ವಿಭಾಗಗಳ ಅಡಿಯಲ್ಲಿ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗುವುದಿಲ್ಲ ಎಂದು ಹೇಳಲಾಗಿದೆ. ಈ ಹೊಸ ನಿರ್ಧಾರದ ಬಗ್ಗೆ ಸರ್ಕಾರವು ಸಂಬಂಧಿಸಿದ ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳು, ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.








