ಕೊರೊನಾ ಜಾಗೃತಿ ಮೂಡಿಸಿದ ಪವರ್ ಸ್ಟಾರ್ ಕೊಟ್ಟ 5 ಸಲಹೆಗಳಿವು – VIDEO
ಬೆಂಗಳೂರು: ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಮತ್ತೊಂದೆಡೆ ಲಾಕ್ ಡೌನ್ ನಿಂದಾಗಿ ಬಡವರು , ಸಿನಿಮಾ ಕಾರ್ಮಿಕರ ಬದುಕು ಸಂಕಷ್ಟಕ್ಕೆ ಸಿಲುಕಿದೆ.. ಅನೇಕರು ಒಂದು ಹೊತ್ತಿನ ಊಟಕ್ಕೆ ಕಷ್ಟ ಪಡುವ ಪರಿಸ್ಥಿತಿ ಎದುರಾಗಿದೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಉಪೇಂದ್ರ , ಪುನೀತ್ ರಾಜ್ ಕುಮಾರ್ , ಯಶ್, ದರ್ಶನ್, ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ಜೊತೆ ಜೊತೆಗೆ ಕೋವಿಡ್ ಮಹಾಮಾರಿ , ಲಸಿಕೆ ಬಗ್ಗೆ , ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸೆಲೆಬ್ರಿಟಿಗಳು ಅರಿವು ಮೂಡಿಸುವ ಕಾರ್ಯ ಮಾಡ್ತಿದ್ದಾರೆ. ಇದೀಗ ಸ್ಯಾಂಡಲ್ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಕೊರೊನಾದಿಂದ ನಮ್ಮನ್ನು ನಾವು ಹೇಗೆ ರಕ್ಷಿಸಿಕೊಳ್ಳಬಹುದು ಎಂಬುವುದಕ್ಕೆ ಕೆಲ ಸಲಹೆ ನೀಡಿದ್ದಾರೆ.
ಕೊರೊನಾ ಎರಡನೇ ಅಲೆಯಿಂದಾಗಿ ಅನೇಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹಲವರು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ. ರಾಜ್ಯದಲ್ಲಿ ಕೊರೊನಾ ಲಾಕ್ಡೌನ್ ಘೋಷಿಸಿದ್ದರೂ, ದಿನದಿಂದ ದಿನ ಅತೀ ವೇಗವಾಗಿ ಹರಡುತ್ತಿರುವ ಕೊರೊನಾದಿಂದ ಮುಕ್ತಿ ಪಡೆಯಲು ಜನರು ಕೆಲವು ನಿಯಮಗಳನ್ನು ಪಾಲಿಸಬೇಕು ಎಂದು ನಟ ಪುನೀತ್ ರಾಜ್ ಕುಮಾರ್ ವೀಡಿಯೋವೊಂದನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಮನವಿ ಮಾಡಿದ್ದಾರೆ. ಜೊತೆಗೆ ಕೊರೊನಾ ಎರಡನೆ ಅಲೆಯು ಎಲ್ಲರ ಮೇಲೂ ಪರಿಣಾಮ ಬೀರುತ್ತಿದೆ. ಈ ಮಾರಕ ವೈರಸ್ ವಿರುದ್ಧ ಹೋರಾಡಲು ನಾವೆಲ್ಲರೂ ಒಟ್ಟಾಗಿ ಸೇರಬೇಕಾಗಿದೆ. ನಾವು ಸುರಕ್ಷಿತವಾಗಿರೋಣ ಮತ್ತು ನಮ್ಮ ಸುತ್ತಲಿರುವವರನ್ನು ಸುರಕ್ಷಿತವಾಗಿರಿಸೋಣ ಎಂದು ಕ್ಯಾಪ್ಷನ್ನಲ್ಲಿ ಬರೆದುಕೊಂಡಿದ್ದಾರೆ.
ಕೊರೊನಾ ಜಾಗೃತಿ ಅಭಿಯಾನಕ್ಕೆ ಕೈ ಜೋಡಿಸಿರುವ ಪುನೀತ್ ರಾಜ್ ಕುಮಾರ್ರವರು ಕೆಲವು ಸಾಕ್ಷ್ಯ ಚಿತ್ರಗಳ ಮೂಲಕ 5 ಸೂತ್ರಗಳನ್ನು ತಿಳಿಸಿದ್ದಾರೆ. ವೀಡಿಯೋದಲ್ಲಿ, ಕೊರೊನಾ ಟೆಸ್ಟ್ ರಿಪೋರ್ಟ್ಗಾಗಿ ಕಾಯುತ್ತಿದ್ದೀರಾ ಅಥವಾ ಕೊರೊನಾ ಇರುವುದು ದೃಢವಾಗಿದ್ಯಾ? ಹಾಗಾದರೆ ಪ್ರತಿ ಮನೆಯಲ್ಲಿಯೂ ಜೊತೆಯಾಗಿ ಕೊರೊನಾ ಗೆಲ್ಲಿ ಎಂದಿದ್ದಾರೆ. ಈ ವೇಳೆ ಇಬ್ಬರು ಮಕ್ಕಳನ್ನು ಸಂಯಮ ಹಾಗೂ ಎಚ್ಚರದ ಮಾತಿನಂತೆ ಬಿಂಬಿಸಿ 5 ಸೂತ್ರಗಳನ್ನು ತಿಳಿಸಿದ್ದಾರೆ.
https://www.instagram.com/p/CP-QcBbBQYF/
1. ಮೊದಲನೇಯದ್ದಾಗಿ – ಜಾಗರೂಕತೆಯಿಂದ ಒಂದು ಪ್ರತ್ಯೇಕ ಕೊಠಡಿಯಲ್ಲಿ ಕನಿಷ್ಠ ಪಕ್ಷ ಒಬ್ಬರೇ ಉಳಿದು ಬಿಡಿ.
2. ಸ್ವತಃ ಚಿಕಿತ್ಸೆ ಮಾಡಿಕೊಳ್ಳದೇ ವೈದ್ಯರನ್ನು ಸಂಪರ್ಕಿಸಿ.
3. ಮನೆಯಲ್ಲಿರುವವರು ಕಾಲಕಾಲಕ್ಕೆ ಸೋಪಿನಿಂದ ಕೈ ತೋಳಿಯುವಂತೆ ನೋಡಿಕೊಳ್ಳಿ.
4. ನೀವು ಕೊರೊನಾ ಸೋಂಕಿತರನ್ನು ಮನೆಯಲ್ಲಿಯೇ ನೋಡಿಕೊಳ್ಳುತ್ತಿದ್ದರೆ, ಮಾಸ್ಕ್ನನ್ನು ಮೂಗು ಹಾಗೂ ಬಾಯಿಯನ್ನು ಮುಚ್ಚುವಂತೆ ಸರಿಯಾಗಿ ಧರಿಸಿ.
5. ಮುಂದಿನ ಕೆಲವು ದಿನಗಳಲ್ಲಿ ಜ್ವರ ಕಡಿಮೆಯಾಗದಿದ್ದರೆ ಹಾಗೂ ಉಸಿರಾಟದ ತೊಂದರೆಯಾಗುತ್ತಿದ್ದರೆ, ನಿಮ್ಮ ವೈದ್ಯರನ್ನು ಸಂಪರ್ಕಿಸಿ, ವೈದ್ಯರು ಸೂಚಿಸಿದರೆ ಮಾತ್ರ ಹತ್ತಿರ ಆಸ್ಪತ್ರೆಯನ್ನು ಸಂಪರ್ಕಿಸಿ ಎಂದು ಸಲಹೆಗಳನ್ನ ನೀಡಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.