ADVERTISEMENT
Friday, September 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ರಾಹುಲ್ ಗಾಂಧಿ ಬಗ್ಗೆ ನಾಲಿಗೆ ಹರಿಬಿಟ್ಟರೆ ಹುಷಾರ್:ನೀನು ಯಾವನೋ ಎಂದು ಕೇಳಬೇಕಾಗುತ್ತದೆ ಶ್ರೀರಾಮುಲುಗೆ ಪ್ರದೀಪ್ ಈಶ್ವರ್ ಎಚ್ಚರಿಕೆ

Shwetha by Shwetha
September 4, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಏಕವಚನದಲ್ಲಿ ಮಾತನಾಡುತ್ತಿರುವ ಬಿಜೆಪಿ ಮುಖಂಡ ಶ್ರೀರಾಮುಲು ವಿರುದ್ಧ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿಯವರನ್ನು ಇನ್ನೊಂದು ಬಾರಿ ಅವನು ಇವನು ಎಂದರೆ, ನೀನು ಯಾವನೋ ಎಂದು ನಾನು ಕೇಳಬೇಕಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ನಾಯಕರನ್ನು ಅಂತರಾಷ್ಟ್ರೀಯ ಕಳ್ಳರ ಸಂಘದ ಪದಾಧಿಕಾರಿಗಳಿಗೆ ಹೋಲಿಸಿದ ಪ್ರದೀಪ್ ಈಶ್ವರ್, ಕರ್ನಾಟಕ ಅಂತರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ ಹಾಗೂ ಉಪಾಧ್ಯಕ್ಷ ಶ್ರೀರಾಮುಲು ಎಂದು ಲೇವಡಿ ಮಾಡಿದರು. ಕರ್ನಾಟಕವನ್ನು ಲೂಟಿ ಮಾಡಿದ್ದೇ ಈ ಇಬ್ಬರು ನಾಯಕರು ಎಂದು ಅವರು ಗಂಭೀರವಾಗಿ ಆರೋಪಿಸಿದರು.

Related posts

ಮರಿ ಖರ್ಗೆ ಎಂದು ಅಣಕಿಸಿದ ಆರ್ ಅಶೋಕ್ ಗೆ ಪ್ರಿಯಾಂಕ್ ತಿರುಗೇಟು: ಮರಿ ಅಶೋಕ್ ಯಾಕೆ ಇನ್ನೂ ಗಣವೇಶ ಧರಿಸಿಲ್ಲ ಎಂದು ಪ್ರಶ್ನೆ

ಮರಿ ಖರ್ಗೆ ಎಂದು ಅಣಕಿಸಿದ ಆರ್ ಅಶೋಕ್ ಗೆ ಪ್ರಿಯಾಂಕ್ ತಿರುಗೇಟು: ಮರಿ ಅಶೋಕ್ ಯಾಕೆ ಇನ್ನೂ ಗಣವೇಶ ಧರಿಸಿಲ್ಲ ಎಂದು ಪ್ರಶ್ನೆ

September 4, 2026
ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ: ಸೆ. 4ರಂದು GBA ವ್ಯಾಪ್ತಿಯಲ್ಲಿ ಮಾಂಸ ಮಾರಾಟ, ಪ್ರಾಣಿ ವಧೆ ನಿಷೇಧ

ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ: ಸೆ. 4ರಂದು GBA ವ್ಯಾಪ್ತಿಯಲ್ಲಿ ಮಾಂಸ ಮಾರಾಟ, ಪ್ರಾಣಿ ವಧೆ ನಿಷೇಧ

September 4, 2026

ಬಿಜೆಪಿ ಆಡಳಿತಾವಧಿಯ ಸಾಲು ಸಾಲು ಹಗರಣಗಳ ಪಟ್ಟಿ ಬಿಡುಗಡೆ ಮಾಡಿದ ಶಾಸಕರು, ರಾಜ್ಯವನ್ನು ಲೂಟಿ ಮಾಡಿದವರಿಂದ ನಾವು ಪಾಠ ಕಲಿಯುವ ಅವಶ್ಯಕತೆಯಿಲ್ಲ ಎಂದರು. ಕೋವಿಡ್ ಹಗರಣ, ಬೋವಿ ನಿಗಮದ ಅಕ್ರಮ, ನೀಟ್ ಅವ್ಯವಹಾರ, ದೇವರಾಜ್ ಅರಸು ಟ್ರಕ್ ಟರ್ಮಿನಲ್ ಹಗರಣ, ಕಿಯೋನಿಕ್ಸ್ ಭ್ರಷ್ಟಾಚಾರ, ಪಿಎಸ್ಐ ನೇಮಕಾತಿ ಅಕ್ರಮ, ಪರಶುರಾಮ್ ಥೀಮ್ ಪಾರ್ಕ್, ಬಿಟ್ ಕಾಯಿನ್ ಹಾಗೂ ಕೆಕೆಆರ್ ಡಿ ಅಕ್ರಮಗಳು ನಡೆದಿದ್ದು ಬಿಜೆಪಿ ಅವಧಿಯಲ್ಲೇ ಎಂದು ಗುಡುಗಿದರು.

ಯಡಿಯೂರಪ್ಪ, ಬೊಮ್ಮಾಯಿ, ಶ್ರೀರಾಮುಲು, ಶಶಿಕಲಾ ಜೊಲ್ಲೆ, ಕೋಟ ಶ್ರೀನಿವಾಸ ಪೂಜಾರಿ, ಸುಧಾಕರ್, ಜನಾರ್ದನ ರೆಡ್ಡಿ ಮತ್ತು ಅಶೋಕ್ ಅವರ ಕಾಲದಲ್ಲಿ ನಡೆದ ಈ ಲೂಟಿಗಳಿಗೆ ಮೊದಲು ಉತ್ತರ ನೀಡಲಿ ಎಂದು ಸವಾಲು ಹಾಕಿದರು.

ನಮ್ಮ ಕಾಂಗ್ರೆಸ್ ಸರ್ಕಾರ ಗೃಹಿಣಿಯರಿಗೆ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುತ್ತಿದೆ ಮತ್ತು ಅಭಿವೃದ್ಧಿಗಾಗಿ 57 ಸಾವಿರ ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ. ಆದರೆ ವಿರೋಧ ಪಕ್ಷದ ನಾಯಕರಿಗೆ ರಾಜ್ಯದ ಬರಗಾಲದ ಬಗ್ಗೆ ಮಾತನಾಡಲು ಅರಿವಿಲ್ಲ, ಕೇವಲ ಡೊಳ್ಳು ಹೊಡೆದು ಡ್ಯಾನ್ಸ್ ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಗೌರವಯುತವಾಗಿ ಮಾತನಾಡುವುದನ್ನು ಕಲಿಯದಿದ್ದರೆ ತಕ್ಕ ಶಾಸ್ತಿ ಮಾಡಬೇಕಾಗುತ್ತದೆ ಎಂದು ಶ್ರೀರಾಮುಲುಗೆ ಎಚ್ಚರಿಸಿದರು.

ShareTweetSendShare
Join us on:

Related Posts

ಮರಿ ಖರ್ಗೆ ಎಂದು ಅಣಕಿಸಿದ ಆರ್ ಅಶೋಕ್ ಗೆ ಪ್ರಿಯಾಂಕ್ ತಿರುಗೇಟು: ಮರಿ ಅಶೋಕ್ ಯಾಕೆ ಇನ್ನೂ ಗಣವೇಶ ಧರಿಸಿಲ್ಲ ಎಂದು ಪ್ರಶ್ನೆ

ಮರಿ ಖರ್ಗೆ ಎಂದು ಅಣಕಿಸಿದ ಆರ್ ಅಶೋಕ್ ಗೆ ಪ್ರಿಯಾಂಕ್ ತಿರುಗೇಟು: ಮರಿ ಅಶೋಕ್ ಯಾಕೆ ಇನ್ನೂ ಗಣವೇಶ ಧರಿಸಿಲ್ಲ ಎಂದು ಪ್ರಶ್ನೆ

by Shwetha
September 4, 2026
0

ಬೆಂಗಳೂರು: ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ಈಗ ಮರಿ ಹಾಗೂ ಹಿರಿ ಮಟ್ಟಕ್ಕೆ ತಲುಪಿದೆ. ಪ್ರಿಯಾಂಕ್ ಖರ್ಗೆ...

ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ: ಸೆ. 4ರಂದು GBA ವ್ಯಾಪ್ತಿಯಲ್ಲಿ ಮಾಂಸ ಮಾರಾಟ, ಪ್ರಾಣಿ ವಧೆ ನಿಷೇಧ

ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ: ಸೆ. 4ರಂದು GBA ವ್ಯಾಪ್ತಿಯಲ್ಲಿ ಮಾಂಸ ಮಾರಾಟ, ಪ್ರಾಣಿ ವಧೆ ನಿಷೇಧ

by Shwetha
September 4, 2026
0

ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 4ರಂದು ಗ್ರೇಟರ್ ಬೆಂಗಳೂರು ಅಥಾರಿಟಿ (GBA) ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಕುರಿತು...

ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (04-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
September 4, 2026
0

ದಿನ ಭವಿಷ್ಯ: 04-09-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದಾಯಕವಾದ ದಿನವಾಗಿದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕಠಿಣ ಶ್ರಮಕ್ಕೆ ತಕ್ಕ ಮನ್ನಣೆ ಸಿಗಲಿದೆ. ಮೇಲಧಿಕಾರಿಗಳು ನಿಮ್ಮ...

ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ:  ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ

ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ: ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ

by Shwetha
September 3, 2026
0

ಕಾಠ್ಮಂಡು: ಇತ್ತೀಚಿನ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ನಲುಗಿ ಹೋಗಿರುವ ನೇಪಾಳ, ಇದೀಗ ಜಗತ್ತಿನ ಬಲಿಷ್ಠ ರಾಷ್ಟ್ರಗಳ ವಿರುದ್ಧ ತಿರುಗಿಬಿದ್ದಿದೆ. ಸಾವಿರಾರು ಜೀವಗಳನ್ನು ಬಲಿಪಡೆದ ಈ ನೈಸರ್ಗಿಕ...

ಬೆಂಗಳೂರಿನಲ್ಲಿ ‘ಏರೋ ಇಂಡಿಯಾ 2027’ಕ್ಕೆ ದಿನಾಂಕ ಫಿಕ್ಸ್

ಬೆಂಗಳೂರಿನಲ್ಲಿ ‘ಏರೋ ಇಂಡಿಯಾ 2027’ಕ್ಕೆ ದಿನಾಂಕ ಫಿಕ್ಸ್

by Shwetha
September 3, 2026
0

ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯಲಿರುವ ಪ್ರತಿಷ್ಠಿತ ‘ಏರೋ ಇಂಡಿಯಾ 2027’ ವೈಮಾನಿಕ ಪ್ರದರ್ಶನಕ್ಕೆ ದಿನಾಂಕ ನಿಗದಿಯಾಗಿದೆ. 16ನೇ ಆವೃತ್ತಿಯ ಈ ಬೃಹತ್ ಏರ್‌ಶೋ 2027ರ ಫೆಬ್ರವರಿ 8ರಿಂದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram