ಹುಬ್ಬಳ್ಳಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೊರೊನಾ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಿವೆ. ಹೀಗಾಗಿ ಸದ್ಯಕ್ಕೆ ಪೆಟ್ರೋಲ್ ಹಾಗೂ ಡೀಸೆಲ್ ದರ ಇಳಿಕೆ ಕಷ್ಟ ಎಂಬ ಅರ್ಥದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೋಶಿ, ಸರ್ಕಾರಗಳು ಕೋವಿಡ್ ಕಲ್ಯಾಣ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿವೆ. ಹೀಗಾಗಿ ಸರ್ಕಾರಗಳ ಆದಾಯದಲ್ಲಿ ಭಾರಿ ಕುಸಿತವಾಗಿದೆ. ಇದರ ಬೆನ್ನಲ್ಲೇ ಕಚ್ಚಾತೈಲ ಬೆಲೆ ಕೂಡ ಹೆಚ್ಚಳವಾಗಿರುವುದು ಪೆಟ್ರೋಲ್ ಬೆಲೆ ಹೆಚ್ಚಲು ಕಾರಣ ಎಂದು ಸ್ಪಷ್ಟಪಡಿಸಿದ್ದಾರೆ.
ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಂಬAಧ ಕೇಂದ್ರ ಸರ್ಕಾರ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.
ಅಂತಾ ರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಹೆಚ್ಚಳವಾಗಿದೆ. ಆಮದು ಮೇಲಿನ ಅವಲಂಬನೆ ಕಡಿಮೆ ಮಾಡುವ ನಿಟ್ಟಿನಲ್ಲಿ ಪ್ರಯತ್ನಗಳು ಮುಂದುವರೆದಿವೆ. ಬೆಲೆ ಇಳಿಕೆಯ ವಿಚಾರವನ್ನು ಸಹಾನುಭೂತಿಯಿಂದ ಪರಿಶೀಲಿಸಲಾಗುವುದು ಎಂದರು.
ಹಿAದೆ ಯುಪಿಎ ಸರ್ಕಾರವೇ ಪೆಟ್ರೋಲ್, ಡೀಸೆಲ್ ಬೆಲೆ ನಿಯಂತ್ರಣವನ್ನು ಮುಕ್ತಗೊಳಿಸಿದೆ. ಅದನ್ನೇ ಈಗಲೂ ಮುಂದುವರೆಸಲಾಗಿದೆ. ಆರ್ಥಿಕ ಸಂಪನ್ಮೂಲ ಸಂಗ್ರಹ ದೃಷ್ಟಿಯಿಂದ ರಾಜ್ಯ ಸರ್ಕಾರಗಳೂ ತೆರಿಗೆ ಹಾಕುತ್ತಿವೆ. ಹೀಗಾಗಿ ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಪ್ರಹ್ಲಾದ್ ಜೋಶಿ ಜಾರಿಕೊಂಡರು.