ಖರ್ಗೆ ನಿಮಗೆ ಎಷ್ಟು ದುಡ್ಡು ಕೊಟ್ಟಿದ್ದಾರೆ : ಪ್ರತಾಪ್ ಸಿಂಹ ವಿರುದ್ಧ ಮುತಾಲಿಕ್ ಕಿಡಿ
ಕಲಬುರಗಿ : ಪ್ರಿಯಾಂಕ್ ಖರ್ಗೆಯವರ ಏಜೆಂಟ್ ಆಗಿ ನೀವ್ಯಾಕೆ ಮಾತನಾಡಿದ್ದಿರಾ? ಹೀಗೆ ಮಾತನಾಡಲು ಖರ್ಗೆ ನಿಮಗೆ ಎಷ್ಟು ದುಡ್ಡು ಕೊಟ್ಟಿದ್ದಾರೆ ಎಂದು ಶ್ರೀರಾಮಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆಗೆ ಸಂಬಂಧಿಸಿದಂತೆ ಪ್ರತಾಪ್ ಸಿಂಹ ಮಾತನಾಡಿದ್ದು, ಖರ್ಗೆ ಏಜೆಂಟ್ ಆಗಿ ನೀವ್ಯಾಕೆ ಮಾತನಾಡುತ್ತಿದ್ದೀರಾ ಎಂದು ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿದರು.
ನೀವು ಧಾರ್ಮಿಕ ಮುಖಂಡರಾಗಿ ಜನರ ಬಗ್ಗೆ ಮಾತಾನಾಡಿ, ಕ್ರಿಶ್ಚಿಯನ್ ಮತಾಂತರ, ಹಿಂದೂಗಳ ಮೇಲೆ ದಬ್ಬಾಳಿಕೆಗಳ ಬಗ್ಗೆ ಮಾತಾಡಲು ನಿಮಗೆ ಏನಾಗಿದೆ ಎಂದು ಪ್ರಮೋದ್ ಮುತಾಲಿಕ್ ಪ್ರಶ್ನಿಸಿದರು. ಖರ್ಗೆ ಅವರು ನಿಮಗೆ ಈ ರೀತಿ ಮಾತನಾಡಲು ಎಷ್ಟು ದುಡ್ಡು ಕೊಟ್ಟಿದ್ದಾರೆ ಎಂದು ಗರಂ ಆದರು.
ಇನ್ನು ಇದೇ ವೇಳೆ ಮಸೀದಿಗಳ ಮೇಲಿನ ಮೈಕ್ ನಿಷೇಧದ ಬಗ್ಗೆ ಮಾತನಾಡಿ, ಈ ಬಗ್ಗೆ ಸುಪ್ರೀಂ ಕೋರ್ಟ್ ಹಲವು ದಿನಗಳ ಹಿಂದೆ ಆದೇಶ ನೀಡಿದೆ.
ಆದ್ರೆ ಈವರೆಗೂ ಆ ಆದೇಶ ಪಾಲನೆ ಆಗುತ್ತಿಲ್ಲ. ಬೆಳ್ಳಂಬೆಳಗ್ಗೆ ಮಸೀದಿಗಳ ಮೇಲೆ ಮೈಕ್ ಶಬ್ದ ಶುರುವಾಗುತ್ತದೆ.
ಇದು ಕೋರ್ಟ್ ಆದೇಶ ಉಲ್ಲಂಘನೆ ಆಗುತ್ತದೆ. ಜಿಲ್ಲಾಧಿಕಾರಿಗಳು ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು.
ಇಲ್ಲಾ ನಾವೇ ಮಸೀದಿಗಳ ಮೇಲಿನ ಮೈಕ್ ಕಿತ್ತು ಬಿಸಾಕ್ತೀವಿ ಎಂದು ಮುತಾಲಿಕ್ ಗುಡುಗಿದರು.