Pramod Muthalik | ಪಿಎಫ್ಐ ಸಂಘಟನೆಯನ್ನು ಬ್ಯಾನ್ ಮಾಡಿದ್ದು ಆನಂದದಾಯಕ
ಧಾರವಾಡ : ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆಯನ್ನು ಬ್ಯಾನ್ ಮಾಡಿದ್ದು ಆನಂದದಾಯಕ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಕೇಂದ್ರ ಸರ್ಕಾರ ದೇಶದಾದ್ಯಂತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ಐದು ವರ್ಷಗಳ ಕಾಲ ಬ್ಯಾನ್ ಮಾಡಿ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುತಾಲಿಕ್, ನವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ಭಾರತದ ಸುರಕ್ಷತೆ ದೃಷ್ಠಿಯಿಂದ ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆಯನ್ನು ಬ್ಯಾನ್ ಮಾಡಿದ್ದು ಆನಂದದಾಯಕ.
ಹರ್ಷದ ವಾತಾವರಣ ನಿರ್ಮಾಣ ಮಾಡಿದೆ. ಭಾರತದ ಸುರಕ್ಷತೆ ದೃಷ್ಠಿಯಿಂದ ಇದು ಅವಶ್ಯಕತೆ ಇತ್ತು. ನಾನು ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.
ಕಳೆದ 15 ವರ್ಷಗಳ ನಮ್ಮ ಬೇಡಿಕೆ ಈಡೇರಿದೆ. ಪಿಎಫ್ ಐನಂತಹ ದೇಶದ್ರೋಹಿ, ಸಮಾಜ ಕಂಟಕ, ಆತಂಕಕಾರಿಯಾದ ಈ ಸಂಘಟನೆಯನ್ನು ಮೊದಲೇ ಬ್ಯಾನ್ ಮಾಡಬೇಕಿತ್ತು.
ಆದರೂ ತಡವಾದ್ರೂ ಬ್ಯಾನ್ ಮಾಡಿದ್ದು, ಈ ದೇಶಕ್ಕಾಗುವ ಗಂಡಾಂತರವನ್ನು ತಡೆಯುವ ಕೆಲಸ ಮಾಡಿದಂತಾಗಿದೆ. ಮುಸ್ಲಿಂ ಸಮಾಜ ಇದರಿಂದ ಪಾಠ ಕಲಿಯಬೇಕು.
ತಮ್ಮ ಸಮಾಜದ ಯುವಕರು ಯಾವ ದಿಕ್ಕಿನತ್ತ ಹೋಗುತ್ತಿದ್ದಾರೆ. ಎಂಬುದನ್ನು ಮುಸ್ಲಿಂ ಸಮಾಜದ ಹಿರಿಯರು ತಿಳಿದುಕೊಳ್ಳಬೇಕು. ದೇಶದ್ರೋಹಿ ಚಟುವಟಿಕೆ ಮಾಡಿದಾಗ ಸರ್ಕಾರ, ಪೊಲೀಸರ ಗಮನಕ್ಕೆ ತರಬೇಕು ಎಂಬುದನ್ನು ಅವರು ತಿಳಿದುಕೊಳ್ಳಬೇಕು.
ಈ ದೇಶಕ್ಕೆ ಇವರು ಬದ್ಧರಾಗಿರಬೇಕು. ಪಾಕಿಸ್ತಾನಕ್ಕೆ ಇಸ್ಲಾಂ ಮಾಡುವಂತ ವಿಕೃತ ಮನಸ್ಸುಳ್ಳ ಯುವಕರನ್ನು ತಡೆಯಬೇಕು.
ಇದನ್ನು ಮುಸ್ಲಿಂ ಸಮಾಜದ ಮುಖಂಡರೇ ಮಾಡಬೇಕು. ಮುಸ್ಲಿಂರು ಮಾನಸಿಕತೆ ಬದಲಾವಣೆ ಮಾಡುವ ಪ್ರಕ್ರಿಯೆ ಮದರಸಾಗಳಲ್ಲೂ ಆಗಬೇಕು ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.