ಬಿಜೆಪಿಯಲ್ಲಿ ನೈತಿಕತೆ ಅನ್ನೋದೇ ಇಲ್ಲ : ಪ್ರಮೋದ್ ಮುತಾಲಿಕ್
ಬೆಳಗಾವಿ : ಬಿಜೆಪಿ ಅವರಿಗೆ ಅಧಿಕಾರ ಮಾತ್ರ ಬೇಕಾಗಿದೆ. ಬಿಜೆಪಿಯಲ್ಲಿ ನೈತಿಕತೆ ಅನ್ನೋದೇ ಇಲ್ಲ ಎಂದು ಶ್ರೀರಾಮ ಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಾಡದ್ರೋಹಿ ಎಂಇಎಸ್ ಮಾಜಿ ಶಾಸಕರ ಬಿಜೆಪಿ ಸೇರ್ಪಡೆ ವಿಚಾರವಾಗಿ ಹುಕ್ಕೇರಿ ಪಟ್ಟಣದಲ್ಲಿ ಪ್ರತಿಕ್ರಿಯೆ ನೀಡಿದ ಮುತಾಲಿಕ್, ಬಿಜೆಪಿ ಪಕ್ಷದಲ್ಲಿ ನೈತಿಕತೆ ಅನ್ನೋದು ಇಲ್ಲ.
ಬಿಜೆಪಿಗೆ ಸೋನಿಯಾ ಗಾಂಧಿ, ಸಿದ್ದರಾಮಯ್ಯ ಬಂದರೂ ಸೇರ್ಪಡೆ ಮಾಡಿಕೊಳ್ಳುತ್ತಾರೆ. ಬಿಜೆಪಿ ಅವರಿಗೆ ಅಧಿಕಾರ ಮಾತ್ರ ಬೇಕಾಗಿದೆ. ಪ್ರಮಾಣಿಕರಿಗೆ, ಹೋರಾಟಗಾರರಿಗೆ ಬಿಜೆಪಿ ಪಕ್ಷದಲ್ಲಿ ಬೆಲೆ ಇಲ್ಲ ಎಂದು ಬಿಜೆಪಿ ವಿರುದ್ಧ ಗುಡುಗಿದರು.
ಇದೇ ವೇಳೆ ವಿನಯ್ ಕುಲಕರ್ಣಿ ಬಂಧನ ನೋವು ತಂದಿದೆ ಎಂಬ ಪಂಚಮಸಾಲಿ ಸ್ವಾಮೀಜಿಗಳ ಹೇಳಿಕೆ ವಿಚಾರವಾಗಿ ಮಾತನಾಡಿ, ಕೊಲೆ ಆರೋಪದಲ್ಲಿ ಜೈಲಿಗೆ ಹೋದರೆ ಆ ಜಾತಿ ಅವರು ನಮ್ಮವರು ಅನ್ನೋದು ಸರಿಯಲ್ಲ.
ಸಿದ್ದರಾಮಯ್ಯಗೆ ವಿಪಕ್ಷ ನಾಯಕನಾಗಿರಲು ಯೋಗತ್ಯ ಇಲ್ಲ : ಈಶ್ವರಪ್ಪ
ಕಾನೂನು ಪ್ರಕಾರ ಅಪರಾಧಿ ನಿರಪರಾಧಿ ಅನ್ನೋದು ಸಾಬೀತಾಗಲಿ. ಪ್ರಾರಂಭದಲ್ಲಿ ಆರೋಪಿಗಳು ನಮ್ಮವರು ಅನ್ನೋದು ಅನೈತಿಕತೆ. ಭ್ರಷ್ಟಾಚಾರಕ್ಕೆ ಬೆಂಬಲ ಸೂಚಿಸದಂತಾಗುತ್ತದೆ. ಈ ಬಗ್ಗೆ ಪಂಚಮಸಾಲಿ ಸ್ವಾಮೀಜಿ ಗಂಭೀರವಾಗಿ ಯೋಚಿಸಬೇಕು ಎಂದು ಮನವಿ ಮಾಡಿಕೊಂಡರು.
ಇನ್ನು ಖಾವಿ ಬಟ್ಟೆ ಹಾಕಿರುವ ನೀವು ಒಂದು ಜಾತಿಗೆ ಸೀಮಿತ ಅಲ್ಲ. ಬಂಧನವಾದ ಕೂಡಲೇ ಬೆಂಬಲ ಕೊಡುವುದರಿಂದ ತಪ್ಪು ಸಂದೇಶ ರವಾನೆ ಆಗುತ್ತದೆ.
ಆಧಾರ ಇರುವ ಕಾರಣ ಸಂಶಯದಿಂದ ವಿನಯ ಕುಲಕರ್ಣಿ ಬಂಧಿಸಿದ್ದಾರೆ. ವಿನಯ್ ಕುಲಕರ್ಣಿ ಅವರ ಪರವಾಗಿ ನಿಂತಿದ್ದು ನಿಮ್ಮ ಮಠದ ಶೋಭೆ ಅಲ್ಲ ಎಂದು ಪಂಚಮಸಾಲಿ ಪೀಠದ ಸ್ವಾಮೀಜಿ ವಿರುದ್ಧ ಪ್ರಮೋದ್ ಮುತಾಲಿಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಾಲೆಗಳ ಪುನಾರಂಭ ಬಗ್ಗೆ ಸರ್ಕಾರದ ಪತ್ರಕ್ಕೆ ಸಿದ್ದು ಕೊಟ್ಟ ಉತ್ತರದಲ್ಲೇನಿದೆ ಗೊತ್ತಾ..?
ದೀಪಾವಳಿಗೆ ಪಟಾಕಿ ಬ್ಯಾನ್ ವಿಚಾರವಾಗಿ ಮಾತನಾಡಿದ ಮುತಾಲಿಕ್, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಧಾರ್ಮಿಕ ವಿಧಿ ವಿಧಾನದಿಂದ ಆಚರಣೆಗಳು ನಡೆಯುವ ಕಾರಣ ಪಟಾಕಿಯನ್ನು ಬ್ಯಾನ್ ಮಾಡಬಾರದು. ಪಟಾಕಿಯಿಂದ ಮಾತ್ರ ಭಾರೀ ದೊಡ್ಡ ಪ್ರಮಾಣದಲ್ಲಿ ಪರಿಸರ ಮಾಲಿನ್ಯ ಆಗುತ್ತಿದೆ ಎಂಬುದು ಸುಳ್ಳು ಎಂದು ಅಭಿಪ್ರಾಯಪಟ್ಟರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel