Pramod Muthalik | ಟಿಪ್ಪು ಜಯಂತಿಯಿಂದ ಈದ್ಗಾ ಮೈದಾನ ಅಪವಿತ್ರ, ಗೋಮೂತ್ರದಿಂದ ಶುದ್ಧೀಕರಣ
ಹುಬ್ಬಳ್ಳಿ : ರಾಜಕೀಯ ಬೇಳೆ ಬೇಯಿಸಿಕೊಳ್ಳೋಕೆ ಬಿಜೆಪಿ ಟಿಪ್ಪು ಜಯಂತಿ ಆಚರಣೆಗೆ ಅನುಮತಿ ನೀಡಿದೆ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ಹೊರಹಾಕಿದ್ದಾರೆ.
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿಗೆ ಅನುಮತಿ ನೀಡಿದರ ಬಗ್ಗೆ ಮಾತನಾಡಿದ ಪ್ರಮೋದ್ ಮುತಾಲಿಕ್, ಟಿಪ್ಪು ಒಬ್ಬ ಮತಾಂಧ, ಕನ್ನಡ ದ್ರೋಹಿ ಅಂತಹ ದ್ರೋಹಿಯ ಜಯಂತಿಗೆ ಅನುಮತಿ ನೀಡಿ ಬಿಜೆಪಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ.
ದೇಶದ್ರೋಹಿಯ ಜಯಂತಿಗೆ ಅನುಮತಿ ನೀಡುವ ಮೂಲಕ ಚುನಾವಣಾ ಗಿಮಿಕ್ ನಡೆಯುತ್ತಿದೆ ಎಂದು ರಾಜ್ಯದ ವಿರುದ್ಧ ವಾಗ್ದಾಳಿ ನಡೆಸಿದರು.
ಇನ್ನು ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಿ ಮೈದಾನವನ್ನು ಅಪವಿತ್ರಗೊಳಿಸಿದ್ದಾರೆ.
ಹೀಗಾಗಿ ನಾವು ಇಂದು ಗೋಮೂತ್ರ ಸಿಂಪಡಿಸಿ ಶುದ್ಧೀಕರಣ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.