ಮುಸ್ಲಿಂ ಅವರಿಗೆ ಹಂದಿ ಮಾಂಸದ ಊಟ ಹಾಕಿ : ಹಂಸಲೇಖ ವಿರುದ್ಧ ಪ್ರತಾಪ್ ಸಿಂಹ ಗರಂ Pratap Simha saaksha tv
ಮೈಸೂರು : ನಿಮ್ಮ ಮನೆಗೆ ಮುಸ್ಲಿಂ ಸ್ನೇಹಿತರನ್ನು ಕರೆಯಿರಿ, ಅವರಿಗೆ ಹಂದಿ ಮಾಂಸದ ಊಟ ಹಾಕಿ ಎಂದು ಚಲನಚಿತ್ರ ಗೀತೆ ರಚನೆಕಾರ ಹಂಸಲೇಖರ ವಿರುದ್ಧ ಸಂಸದ ಪ್ರತಾಪ ಸಿಂಹ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಪೇಜಾವರ ಶ್ರೀಗಳು ಮಾಂಸ ತಿನ್ನುತ್ತಿದ್ರಾ..? ಎಂಬ ಹಂಸಲೇಖರ ಹೇಳಿಕೆ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿದ ಪ್ರತಾಪ್ ಸಿಂಹ,
ಹಂಸಲೇಖ ಅವರು ಪರಿಜ್ಞಾನದಿಂದ ಪೇಜಾವರರ ಶ್ರೀಗಳ ಬಗ್ಗೆ ಮಾತಾಡಬೇಕಿತ್ತು.
ಪೇಜಾವರ ಶ್ರೀಗಳು ಬೇರೆ ಜಾತಿ ಸ್ವಾಮೀಜಿ ರೀತಿ ಅಲ್ಲ. ಕರ್ಮಠ ವ್ಯವಸ್ಥೆಯನ್ನು ಮೀರಿ ಸಮಾನತೆ ಸಾರಿದವರು.
ಸಾಧು ಸಂತರ ಆಹಾರ ಪದ್ಧತಿ ಸಸ್ಯಹಾರ, ಮನಸ್ಸಿನ ತಾರತಮ್ಯ ತೆಗೆದು ಹಾಕಲು ಶ್ರೀಗಳು ಹೋಗಿದ್ದರೆ ಹೊರತು ಆಹಾರ ಪದ್ಧತಿಯ ಸಮಾನತೆಗೆ ಅಲ್ಲ ಎಂದು ಪ್ರತಾಪ್ ಸಿಂಹ ಗರಂ ಆದರು.
ಮುಂದುವರೆದು ನಿಮ್ಮ ಮನೆಗೆ ಮುಸ್ಲಿಂ ಸ್ನೇಹಿತರನ್ನು ಕರೆಯಿರಿ, ಅವರಿಗೆ ಹಂದಿ ಮಾಂಸದ ಊಟ ಹಾಕಿ, ಅವರು ತಿನ್ನುತ್ತಾರಾ ನೋಡಿ ಎಂದು ಹಂಸಲೇಖ ವಿರುದ್ಧ ಸಂಸದರು ಕಿಡಿಕಾರಿದರು.