ಪ್ರತಾಪ್ ಸಿಂಹ ಅಪ್ರಬುದ್ಧ : ಸಿದ್ದರಾಮಯ್ಯ ಕಿಡಿ
ಬೆಂಗಳೂರು : ಪ್ರತಾಪ್ ಸಿಂಹ ಅಪ್ರಬುದ್ದ ರಾಜಕಾರಣಿ. ಯಾವುದೇ ನಿಲುವಿಲ್ಲ ಅವನಿಗೆ, ಪ್ರತಿ ಬಾರಿ ನಿಲುವು ಬದಲಿಸುತ್ತಾನೆ ಎಂದು ಸಂಸದ ಪ್ರತಾಪ್ ಸಿಂಹ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಪ್ರತಾಪ ಸಿಂಹ ಸಿದ್ದರಾಮಯ್ಯಗಾರು ಎಂದು ಸಂಬೋಧಿಸಿದ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಪ್ರತಾಪ್ ಸಿಂಹ ತಮಗೂ ತೆಲಗು ಬರುತ್ತೆ ಅಂತಾ ತೋರಿಸಲು ಯತ್ನಿಸಿದ್ದಾರೆ.
ಇದು ವ್ಯಂಗ್ಯ ಇರಬಹುದು. ನನಗೆ ಗೊತ್ತಿಲ್ಲ. ಗಾರು ಎಂಬುದನ್ನ ಸೂಕ್ತ ರೀತಿಯಲ್ಲಿ ಸ್ವೀಕರಿಸುತ್ತೇನೆ. ಆದರೆ, ಪಾಪ ಬಹುವಚನದಲ್ಲಿ ಮಾತನಾಡಿದ್ದಾನೆ ಎಂದು ಸೂಚ್ಯವಾಗಿ ತಿರುಗೇಟು ನೀಡಿದರು.
ಇನ್ನು ಪ್ರತಾಪ್ ಸಿಂಹ ಅಪ್ರಬುದ್ದ ರಾಜಕಾರಣಿ. ಯಾವುದೇ ನಿಲುವಿಲ್ಲ ಅವನಿಗೆ, ಪ್ರತಿ ಬಾರಿ ನಿಲುವು ಬದಲಿಸುತ್ತಾನೆ. ಚಾಮರಾಜನಗರ ಪ್ರಕರಣದಲ್ಲಿ ಸಿಂಧೂರಿ ಪರ ಮಾತನಾಡಿದ್ದರು. ಈ ಹಿಂದೆ ರೋಹಿಣಿ ಸಿಂಧೂರಿಗೆ ಬೆಂಬಲಿಸಿದ್ದು ಯಾರು? ಈಗ ಸ್ವಾರ್ಥಕ್ಕಾಗಿ ವಿರೋಧಿಸುತ್ತಿದ್ದಾರೆ. ಅವನೊಬ್ಬ ಅಪ್ರಭುದ್ದ ರಾಜಕಾರಣಿ ಎಂದು ಟೀಕಿಸಿದರು.
ಇದೇ ವೇಳೆ ಭೂ ಮಾಫಿಯಾದಿಂದ ವರ್ಗಾವಣೆಯಾದೆ ಎಂಬ ರೋಹಿಣಿ ಸಿಂಧೂರಿ ಹೇಳಿಕೆ ಬಗ್ಗೆ ಮಾತನಾಡಿ, ಇದರ ಬಗ್ಗೆ ತನಿಖೆ ಮಾಡಲಿ. ಅದೊಂದು ರಾಜಕೀಯ ಪ್ರೇರಿತ ಕ್ರಮವಾಗಿದೆ. ಹಗರಣ ನಡೆದಿದ್ದರೆ ಸಮಗ್ರ ತನಿಖೆ ನಡೆಸಲಿ ಎಂದು ಸಿದ್ದರಾಮಯ್ಯ ಆಗ್ರಹಿಸಿದರು.