ADVERTISEMENT
Monday, March 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪರಿಷತ್ ಗಲಾಟೆ: ಕಾರಣ ಕೇಳಿ ಕಾರ್ಯದರ್ಶಿಗೆ ಪ್ರತಾಪಚಂದ್ರ ಶೆಟ್ಟಿ ನೋಟಿಸ್..!

Kariyappa N by Kariyappa N
December 18, 2020
in Newsbeat, Politics, Samagra karnataka, ರಾಜ್ಯ
notice
Share on FacebookShare on TwitterShare on WhatsappShare on Telegram

ಬೆಂಗಳೂರು: ಮಂಗಳವಾರ ನಡೆದ ವಿಧಾನಪರಿಷತ್ ವಿಶೇಷ ಅಧಿವೇಶನ ವೇಳೆ ನಡೆದ ಗಲಾಟೆ, ಸಭಾಪತಿ ಪೀಠದಲ್ಲಿ ಉಪಸಭಾಪತಿ ಕುಳಿತುಕೊಂಡಿದ್ದು ಹೇಗೆ, ಉಪಸಭಾಪತಿ ಕೂರಲು ಹೇಗೆ ಬಿಟ್ಟಿರಿ ಸೇರಿದಂತೆ ಹಲವು ಪ್ರಶ್ನೆಗಳಿಗೆ ಉತ್ತರ ನೀಡುವಂತೆ ವಿಧಾನಪರಿಷತ್ ಕಾರ್ಯದರ್ಶಿಗೆ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.

ಶೋಕಾಸ್ ನೋಟಿಸ್‍ನಲ್ಲಿ ಏನಿದೆ..!
ನೋಟಿಸ್‍ಗೆ 48 ಗಂಟೆಯೊಳಗೆ ಉತ್ತರ ನೀಡಬೇಕು. ನಿಮ್ಮ ವರ್ತನೆ ವಿಧಾನಮಂಡಲದ ನೌಕರನಿಗೆ ತಕ್ಕದಲ್ಲದ ರೀತಿಯಲ್ಲಿದ್ದು, ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ನಿಯಮಬಾಹಿರವಾಗಿ, ಬೇಜವಾಬ್ದಾರಿ ಮತ್ತು ಕರ್ವವ್ಯ ನಿರ್ಲಕ್ಷ್ಯತನದ ನಡವಳಿಗೆ ಮತ್ತು ಅಧಿಕಾರಿ ವ್ಯಾಪ್ತಿ ಮೀರಿದ ತಮ್ಮ ಕಾರ್ಯನಿರ್ವಹಣೆಯ ವಿರುದ್ಧ ಕರ್ನಾಟಕ ನಾಗರಿಕ ಸೇವೆ ನಿಯಮಾವಳಿ ರೀತಿ ಕ್ರಮಕೈಗೊಳ್ಳಬಾರದೇಕೆ ಎಂಬ ಬಗ್ಗೆ ವಿವರಣೆಯೊಂದಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ನೋಟಿಸ್ ಜಾರಿ ಮಾಡಿದ್ದಾರೆ.

Related posts

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

March 30, 2026
ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

March 30, 2026


ಡಿ.15ರಂದು ವಿಧಾನಪರಿಷತ್ ಸದನದಲ್ಲಿ ನಡೆದ ಅಹಿತಕರ ಘಟನೆ ಸಂಬಂಧ ಆಡಳಿತ ಪಕ್ಷದ ಸದಸ್ಯರು ಸಭಾಪತಿಯಾದ ನನ್ನ ಸದನ ಪ್ರವೆಶಕ್ಕೆ ನಿರ್ಬಂಧ ವಿಧಿಸಿರುವುದು ಸೇರಿದಂತೆ ಸದನದ ಕಾರ್ಯಕಲಾಪಗಳಿಗೆ ವ್ಯತಿರಿಕ್ತವಾಗಿ ನಿಯಮಾವಳಿಗಳನ್ನು ಗಾಳಿಗೆ ತೂರಿ ನಡೆದುಕೊಂಡ ಘಟನೆಗಳು ಮಾಧ್ಯಮಗಳಲ್ಲಿ ಪ್ರಸಾರವಾಗಿ ವ್ಯಾಪಕ ಟೀಕೆಗೆ ಒಳಗಾಗಿದೆ. ಇದರಿಂದ ಶತಮಾನದ ಇತಿಹಾಸವುಳ್ಳ ವಿಧಾನಪರಿಷತ್ತಿನ ಗೌರವ, ಸಂಪ್ರದಾಯ ಹಾಗೂ ಪರಂಪರೆಗೆ ಮಂಗಳವಾರ ನಡೆದ ಘಟನೆಗಳಿಂದ ಧಕ್ಕೆಯಾಗಿದೆ.


ಸದನದಲ್ಲಿ ಪ್ರತ್ಯಕ್ಷದರ್ಶಿಯಾಗಿ ಉಪಸ್ಥಿತರಿದ್ದ ತಾವು ಸದನ ಪ್ರಾರಂಭದಿಂದ ನಾನು ಆಗಮಿಸಿ ಸದನ ಮುಂದೂಡುವವರೆಗೆ ನನ್ನ ಅನುಪಸ್ಥಿತಿಯಲ್ಲಿ ಹಾಗೂ ನನ್ನ ನಿರ್ಗಮನದ ನಂತರ ನಡೆದ ಘಟನೆಗಳ ಸಂಕ್ಷಿಪ್ತ ವರದಿಯನ್ನು ಕೂಡಲೇ ಸಲ್ಲಿಸಬೇಕು.
ಪರಿಷತ್ ಸಚಿವಾಲಯದ ಜಾಲತಾಣದಲ್ಲಿ ಪ್ರಕಟಿಸಿರುವ ದೃಶ್ಯಮಾಲಿಕೆಗಳನ್ನು ವೀಕ್ಷಿಸಿದಾಗ ಸದನದ ಕಾರ್ಯಕಲಾಪಗಳ ಸಂಪೂರ್ಣ ಆಡಳಿತದ ಜವಾಬ್ದಾರಿ ವಹಿಸಿದ್ದ ತಾವು ಕೋರಂ ಬೆಲ್ ಚಾಲನೆಯಲ್ಲಿದ್ದಾಗ್ಯೂ ನಿಯಮ ಬಾಹಿರವಾಗಿ ಉಪಸಭಾಪತಿಗಳು ಸಭಾಪತಿ ಪೀಠ ಅಲಂಕರಿಸಿರುವುದು, ಸದನ ಪ್ರವೇಶ ಮಾಡುವ ದ್ವಾರವನ್ನು ಮುಚ್ಚಿ ನನ್ನ ಪ್ರವೇಶಕ್ಕೆ ನಿರ್ಬಂಧಿಸಿರುವುದು, ನಿಯಮ ಬಾಹಿರವಾಗಿ ಪೀಠ ಅಲಂಕರಿಸಿದ್ದ ಉಪಸಭಾಪತಿಯವರಿಗೆ ಸರಿಯಾಗಿ ಮಾಹಿತಿ ನೀಡದೆ, ಸದನ ಮುಂದುವರೆಸುವ ಚಿತಾವಣೆ ರೀತಿ ತಾವು ದಾಖಲೆಗಳನ್ನು ನೀಡಿರುವುದು ಸೇರಿದಂತೆ ತಮ್ಮ ಕರ್ತವ್ಯಕ್ಕೆ ಸಾಕ್ಷಿಯಾಗಿರುವ ಹಲವು ಅಂಶಗಳನ್ನು ಗಮನಿಸಿದ್ದೇನೆ.
ಹೀಗೆ ಮೇಲಿನ ಅಂಶಗಳಿಗೆ ಉತ್ತರ ನೀಡುವಂತೆ ಸೂಚಿಸಿ ಕಾರ್ಯದರ್ಶಿಗೆ ಸಭಾಪತಿ ಪ್ರತಾಪ್‍ಚಂದ್ರ ಶೆಟ್ಟಿ ಶೋಕಾಸ್ ಜಾರಿ ಮಾಡಿದ್ದಾರೆ.
ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದ ಬಿಜೆಪಿ, ಕಲಾಪ ನಡೆಸಲು ಉಪ ಸಭಾಪತಿ ಧರ್ಮೇಗೌಡರನ್ನು ಸಭಾಪತಿ ಪೀಠದಲ್ಲಿ ಕೂರಿಸಿದ್ದರು. ಸಭಾಪತಿಯ ಅನುಮತಿ ಇಲ್ಲದೆ ಉಪ ಸಭಾಪತಿ ಆ ಪೀಠದಲ್ಲಿ ಕೂರುವಂತಿಲ್ಲ ಎಂದು ಕಾಂಗ್ರೆಸ್ ಸದಸ್ಯರು ಧರ್ಮೇಗೌಡರನ್ನು ಪೀಠದಿಂದ ಎಳೆದು, ಗ್ಲಾಸ್‍ನ್ನು ಪುಡಿಪುಡಿ ಮಾಡಿದ್ದರು.
ಸಭಾಪತಿ ಸದನದೊಳಗೆ ಬಾರದಂತೆ ಬಿಜೆಪಿ ಸದಸ್ಯರು ಬಾಗಿಲು ಹಾಕಿದ್ದರು. ಕಲಾಪದಲ್ಲೇ ಎರಡೂ ಪಕ್ಷದ ಸದಸ್ಯರು ಮೈಕೈ ಮುಟ್ಟಿಕೊಂಡು ಹೊಡೆದಾಡಿದ್ದರು. ಬಳಿಕ ಪ್ರಕರಣದ ಕುರಿತು ಮಧ್ಯ ಪ್ರವೇಶಿಸುವಂತೆ ಬಿಜೆಪಿ ನಿಯೋಗ ರಾಜ್ಯಪಾಲರಿಗೆ ದೂರು ಸಲ್ಲಿಸಿತ್ತು.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPchairman Pratapachandra ShettyCongressLegislative council uproarshowcause notice to secretar
ShareTweetSendShare
Join us on:

Related Posts

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

by Shwetha
March 30, 2026
0

ತಿಂಗಳಿಡೀ ಕತ್ತೆ ಥರ ದುಡಿಯೋದೆ ಒಂದನೇ ತಾರೀಖು ಬರೋ ಆ ಸಂಬಳದ ಮೆಸೇಜ್ ನೋಡೋಕೆ ಅಲ್ವಾ? ಆದ್ರೆ ಏಪ್ರಿಲ್ ಒಂದರಿಂದ ನಮ್ಮ ನಿಮ್ಮೆಲ್ಲರ ಸಂಬಳದ ರೂಲ್ಸ್ ಕಂಪ್ಲೀಟ್...

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

by Shwetha
March 30, 2026
0

ರಾಜ್ಯದಲ್ಲಿ ಬಜೆಟ್ ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಸಚಿವರು ಹಾಗೂ ಶಾಸಕರು ಸಂಪೂರ್ಣವಾಗಿ ಚುನಾವಣಾ ಮೂಡ್‌ಗೆ ಜಾರಿದ್ದಾರೆ. ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ...

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

by Shwetha
March 30, 2026
0

ಮುಂಬರುವ ಚುನಾವಣೆಯ ಕಾವು ದಿನೇ ದಿನೇ ಏರುತ್ತಿದ್ದು ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು...

ಖಾಲಿ ಇರುವ 8 ಸಾವಿರ ಪಿಎಸ್ಐ ಹುದ್ದೆ ಭರ್ತಿ ಅಪರಾಧಿಗಳ ವಿರುದ್ಧ ನಿಷ್ಠುರ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಖಾಲಿ ಇರುವ 8 ಸಾವಿರ ಪಿಎಸ್ಐ ಹುದ್ದೆ ಭರ್ತಿ ಅಪರಾಧಿಗಳ ವಿರುದ್ಧ ನಿಷ್ಠುರ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

by Shwetha
March 30, 2026
0

ಮೈಸೂರಿನ ಪೊಲೀಸ್ ಅಕಾಡೆಮಿಯಲ್ಲಿ ನಡೆದ ಪಿಎಸ್ಐಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಯುವಜನತೆಗೆ ಹಾಗೂ ಪೊಲೀಸ್ ಇಲಾಖೆಗೆ ಭರ್ಜರಿ ಸಿಹಿಸುದ್ದಿ...

ಎಚ್ಚರ ನಿಮ್ಮ ಮನೆಯಲ್ಲಿ ಎರಡಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಇದ್ದರೆ ಜೈಲು ಫಿಕ್ಸ್ ಇಂದೇ ಈ ಕಾನೂನು ತಿಳಿದುಕೊಳ್ಳಿ

ಎಚ್ಚರ ನಿಮ್ಮ ಮನೆಯಲ್ಲಿ ಎರಡಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಇದ್ದರೆ ಜೈಲು ಫಿಕ್ಸ್ ಇಂದೇ ಈ ಕಾನೂನು ತಿಳಿದುಕೊಳ್ಳಿ

by Shwetha
March 30, 2026
0

ಪ್ರತಿಯೊಬ್ಬರ ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಇರುವುದು ಸಾಮಾನ್ಯ. ಗ್ಯಾಸ್ ಖಾಲಿಯಾದರೆ ಊಟಕ್ಕೆ ಪರದಾಡಬೇಕು ಎಂಬ ಭಯದಿಂದ ಅನೇಕರು ಮೂರ್ನಾಲ್ಕು ಸಿಲಿಂಡರ್ ಗಳನ್ನು ಅಡ್ವಾನ್ಸ್ ಆಗಿ ಬುಕ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram