ಹಿಂದೂ ಕಾರ್ಯಕರ್ತ , ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಭೀಕರ ಹತ್ಯೆ ಪ್ರಕರಣ ಇಡೀ ದಕ್ಷಿಣ ಕನ್ನಡದಲ್ಲಿ ಆಕ್ರೋಶದ ಕಿಚ್ಚು ಹೆಚ್ಚಿಸಿದೆ.. ಹಿಂದೂ ಕಾರ್ಯಕರ್ತರು , ಬಿಜೆಪಿ ಕಾರ್ಯಕರ್ತರು ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧವೇ ಕೆಂಡ ಕಾರುತತ್ತಿದ್ದಾರೆ.. ಕರಾವಳಿ ಕಾದ ಕೆಂಡದಂತಾಗಿದೆ..
ಘಟನೆಗೂ ಮುಂಚಿತವಾಗೆ ಹಂತಕರು ಪ್ಲಾನ್ ಮಾಡಿಕೊಂಡಿದ್ದರು ಎಂದು ಹೇಳಲಾಗ್ತಿದೆ.. ಈ ಪ್ರಕರಣದ ಸಿಸಿಟಿವಿ ದೃಶ್ಯ ಸಿಕ್ಕಿದೆ.. 40 ನಿಮಿಷಗಳ ಕಾಲ ಅದೇ ಜಾಗದಲ್ಲಿ ಬೈಕ್ ಒಂದು ಬಂದು ನಿಂತಿದ್ದು ಸಿಟಿಟಿಯಲ್ಲಿ ಸೆರೆಯಾಗಿದೆ..
ಸದ್ಯ ಬೆಳ್ಳಾರೆ ಠಾಣೆ ಪೊಲೀಸರು ಅದೇ ಬೈಕ್ ನ ಬೆನ್ನು ಬಿದ್ದಿದ್ದಾರೆ.. ಸಿಸಿಟಿವಿ ದೃಶ್ಯ ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ ಪೊಲೀಸರು. ಘಟನಾ ಸ್ಥಳದಲ್ಲಿ ಸುಮಾರು ಕಾಲದಿಂದ ಅನುಮಾನಸ್ಪದವಾಗಿ ಮೂವರು ಓಡಾಡ್ತಿದ್ದದ್ದು ಕಂಡುಉ ಬಂದಿದೆ..
8 ಗಂಟೆ 1 ನಿಮಿಷ 51 ಸೆಕೆಂಡ್ ಗೆ ಬೈಕ್ ಪ್ರವೀಣ್ ಅಂಗಡಿ ಬಳಿ ಬಂದಿದೆ.. 8 ಗಂಟೆ 1 ನಿಮಿಷ 57 ಸೆಕೆಂಡ್ ಗೆ 50 ಮೀಟರ್ ದೂರದಲ್ಲಿ ನಿಂತಿಕೊಳ್ಳುತ್ತದೆ.. 8 ಗಂಟೆ 33 ನಿಮಿಷಕ್ಕೆ ಅಂಗಡಿ ಮುಂದೆ ಹೋಗಿ ಮತ್ತದೇ ಜಾಗದಲ್ಲಿ ಬಂದು ನಿಂತಿಕೊಳ್ಳುತ್ತದೆ..
ನಂತರ 8 ಗಂಟೆ 38 ನಿಮಿಷಕ್ಕೆ ಮತ್ತೆ ಅಂಗಡಿ ದಿಕ್ಕಿನತ್ತ ಸಾಗಿದೆ. 8 ಗಂಟೆ 40 ನಿಮಿಷಕ್ಕೆ ಅಂಗಡಿಯತ್ತ ಜನ ಓಡೋಡಿ ಬರುತ್ತಾರೆ.. 8.38 ರಿಂದ 8.40 ರ ಸಮಯದಲ್ಲಿ ಹತ್ಯೆ ನಡೆದಿರುವ ಸಾಧ್ಯತೆಯಿದೆ.
ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ನೆಟ್ಟಾರುರನ್ನ ದುಷ್ಕರ್ಮಿಗಳ ಬರ್ಬರವಾಗಿ ಹತ್ಯೆಗೈದಿದ್ದರು. ಆನಂತರದಿಂದ ರಾಜ್ಯದ ಮೂಲೆ ಮೂಲೆಯಲ್ಲಿ ಆಕ್ರೋಶ ಭುಗಿಲೆದ್ದಿದೆ.. ಬಿಜೆಪಿ ಕಾರ್ಯಕರ್ತರು ಹಿಂದೂ ಕಾರ್ಯಕರ್ತರು ಸರ್ಕಾರದ ವಿರುದ್ಧವೇ ತಿರುಗಿಬಿದ್ದಿದ್ದಾರೆ,.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ 31 ವರ್ಷದ ಪ್ರವೀಣ್ ಕುಮಾರ್ ನೆಟ್ಟಾರು , ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು.. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು.
ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಸರಣಿ ಸಾವಿನಿಂದಾಗಿ ಹಿಂದೂ ಪರ ಹೋರಾಟಗಾರರು ಜೊತೆಗೆ ಬಿಜೆಪಿ ಕಾರ್ಯಕರ್ತರೂ ಸರ್ಕಾರದ ವಿರುದ್ಧ ಆಕ್ರೋಸ ಹೊರಹಾಕುತ್ತಾ ಪ್ರತಿಭಟನೆಗಳನ್ನ ಮಾಡ್ತಿದ್ದು , ದಕ್ಷಿಣ ಕನ್ನಡದಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ..








