Praveen Nettaru Murder | ಹಿಂದೂ ಕಾರ್ಯಕರ್ತರ ರಕ್ಷಣೆ ಮಾಡುವಲ್ಲಿ ಸರ್ಕಾರ ವಿಫಲ
ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆಯನ್ನು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಶ್ರೀ ಖಂಡಿಸಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು, ಹಿಂದು ಯುವಕ ಪ್ರವೀಣ್ ಹತ್ಯೆ ಮಾನವ ಸಮಾಜ ತಲೆ ತಗ್ಗಿಸುವಂತಾಗಿದೆ.
ಬಿಜೆಪಿ ಸರ್ಕಾರ ಹಿಂದು ಕಾರ್ಯಕರ್ತರನ್ನ ರಕ್ಷಣೆ ಮಾಡುವಲ್ಲಿ ವಿಫಲವಾಗುತ್ತಿದೆ ಎಂದು ಬೇಸರ ಹೊರಹಾಕಿದ್ದಾರೆ.
ಹಿಂದು ಕಾರ್ಯಕರ್ತರು, ಹಿಂದೂಗಳು ಬಿಜೆಪಿ ಮೇಲೆ ಇಟ್ಟಿರುವ ನಂಬಿಕೆ ಹುಸಿಯಾಗುತ್ತಿದೆ.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂ ಹತ್ಯೆಯ ನಾಲ್ಕನೇ ಕೊಲೆ ಇದಾಗಿದೆ.
ಸರ್ಕಾರ ಏನು ಮಾಡುತ್ತಿದೆ. ಗೃಹ ಸಚಿವರು ಏನು ಮಾಡುತ್ತಿದ್ದಾರೆ ಅನ್ನೋದು ಯಕ್ಷ ಪ್ರಶ್ನೆಯಾಗಿದೆ.
ದುಷ್ಟ ಶಕ್ತಿಗಳನ್ನ ಮಟ್ಟ ಹಾಕಲು ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಬೇಕು.
ಕೊಲೆಗಾರರನ್ನ ನಿಂತ ಜಾಗದಲ್ಲೆ ಗುಂಡಿಟ್ಟು ಕೊಲೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಅಲ್ಲದೆ ಯಾರ್ಯಾರಿಗೆ ಬೇದರಿಕೆ ಇದೆ ಅವರಿಗೆ ಸರ್ಕಾರ ಭದ್ರತೆ ಕೊಡಬೇಕು.
ಎಡಿಜಿಪಿ ಅಲೋಕ್ ಕುಮಾರ್ ಸೂಕ್ಷ್ಮ ಪ್ರದೇಶ ಮಂಗಳೂರಿಗೆ ಭೇಟಿ ಕೊಡಬೇಕು.
ರಾಜ್ಯದ ಯಾವ ಭಾಗದಲ್ಲೂ ಹಿಂದೂ ಕಾರ್ಯಕರ್ತರು ಸುರಕ್ಷಿತವಾಗಿಲ್ಲ ಎಂದು ಕಲಬುರಗಿಯಲ್ಲಿ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಶ್ರೀ ಆತಂಕ ಹೊರಹಾಕಿದ್ದಾರೆ.