ನವೀನ್ ಹುಟ್ಟೂರಿನಲ್ಲಿ ಸಾರ್ವಜನಿಕ ದರ್ಶನಕ್ಕೆ ಸಕಲ ಸಿದ್ದತೆ
ಹಾವೇರಿ: ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧದ ಸಂದರ್ಭದಲ್ಲಿ ಸಾವನ್ನಪ್ಪಿದ್ದ ಕನ್ನಡಿಗ ವಿದ್ಯಾರ್ಥಿ ನವೀನ್ ಪಾರ್ಥಿವ ಶರೀರ ಬೆಂಗಳೂರಿನಿಂದ ಸ್ವಗ್ರಾಮದತ್ತ ಆಗಮಿಸುತ್ತಿದ್ದು, ಸಾರ್ವಜನಿಕ ದರ್ಶನಕ್ಕೆ ಸಕಲ ಸಿದ್ದತೆ ಮಾಡಲಾಗಿದೆ.
ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿರುವ ನವೀನ್ ನಿವಾಸದಲ್ಲಿ ಅಂತಿಮ ಪೂಜೆಗಳು ನಡೆಯಲಿದ್ದು, ಎಲ್ಲ ರೀತಿಯ ಸಿದ್ಧತೆಗಳು ನಡೆಯುತ್ತಿದೆ. ಇನ್ನು ನವೀನ್ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೂ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ವೀರಶೈವ ಸಂಪ್ರದಾಯದ ವಿಧಿ – ವಿಧಾನಗಳಂತೆ ಪಾರ್ಥಿವ ಶರೀರದ ಪೂಜಾ ಕಾರ್ಯಗಳು ನಡೆಯಲಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಅರ್ಧ ಗಂಟೆಯಲ್ಲಿ ಪೂಜಾ ಕೆಲಸಗಳನ್ನು ಪೂರ್ಣ ಮಾಡಲಾಗುವುದು ಎಂದು ತಿಳಿದು ಬಂದಿದೆ.