ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಅಂತಿಮ ನಮನ ಸಲ್ಲಿಸಿದ ರಾಷ್ಟ್ರಪತಿ ಕೋವಿಂದ್ ಮತ್ತು ಪ್ರಧಾನಿ ಮೋದಿ
ಹೊಸದಿಲ್ಲಿ, ಸೆಪ್ಟೆಂಬರ್01: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಂತ್ಯಕ್ರಿಯೆ ಇಂದು ಪೂರ್ಣ ಮಿಲಿಟರಿ ಗೌರವಗಳೊಂದಿಗೆ ನಡೆಯಲಿದೆ. 84 ವರ್ಷದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಮೆದುಳಿನ ಶಸ್ತ್ರಚಿಕಿತ್ಸೆಯ ನಂತರ ಗಂಭೀರವಾಗಿತ್ತು. ಶಸ್ತ್ರಚಿಕಿತ್ಸೆಯ ಮೊದಲು ಅವರಿಗೆ ಕೊರೋನವೈರಸ್ ಸೋಂಕು ಕೂಡ ದೃಢಪಟ್ಟಿತ್ತು. ವೈದ್ಯರ ಅವಿರತ ಪ್ರಯತ್ನದ ನಡುವೆಯೂ ಅವರು ಸೋಮವಾರ ನಿಧನರಾದರು. ಮಾಜಿ ರಾಷ್ಟ್ರಪತಿ ಗೌರವಾರ್ಥ ಕೇಂದ್ರ ಸರ್ಕಾರ ದೇಶದಾದ್ಯಂತ ಏಳು ದಿನಗಳ ಅಧಿಕೃತ ಶೋಕಾಚರಣೆ ಘೋಷಿಸಿದೆ. ಪ್ರಣಬ್ ಮುಖರ್ಜಿ ಅವರ ಮೃತದೇಹವನ್ನು ದೆಹಲಿಯ 10 ರಾಜಾಜಿ ಮಾರ್ಗದಲ್ಲಿರುವ ಅವರ ಅಧಿಕೃತ ಮನೆಗೆ ಕೊಂಡೊಯ್ಯಲಾಗಿದೆ.
ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ್ದಾರೆ.
ಉಪಾಧ್ಯಕ್ಷ ಎಂ.ವೆಂಕಯ್ಯ ನಾಯ್ಡು, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸಹ ಮಾಜಿ ರಾಷ್ಟ್ರಪತಿ ಮುಖರ್ಜಿ ಅವರಿಗೆ ಗೌರವ ಸಲ್ಲಿಸಿದರು.
https://www.facebook.com/saakshatv/videos/730560094186218/
ಕೋವಿಡ್-19 ಪ್ರೋಟೋಕಾಲ್ ಕಾರಣ, ಮಾಜಿ ರಾಷ್ಟ್ರಪತಿಗಳ ದೇಹವನ್ನು ಗನ್ ಕ್ಯಾರೇಜ್ ಬದಲಿಗೆ ಹಿಯರ್ಸ್ ವ್ಯಾನ್ನಲ್ಲಿ ಕೊನೆಯ ವಿಧಿಗಳಿಗಾಗಿ ತೆಗೆದುಕೊಂಡು ಹೋಗಲಾಗುತ್ತದೆ. ಅಂತ್ಯಕ್ರಿಯೆ ಲೋದಿ ರಸ್ತೆ ಶವಾಗಾರದಲ್ಲಿ ನಡೆಯಲಿದೆ.








