ಬೆಂಗಳೂರಿನ ಟೆಕ್ಕಿಯೊಬ್ಬನಿಗೆ ತೆಲಂಗಾಣದಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಸೋಂಕು ಹರಡದಂತೆ ಸಮರ್ಪಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಾಜ್ಯದ ಆರೋಗ್ಯ ಸಚಿವ ಬಿ ಶ್ರೀರಾಮುಲು ಹೇಳಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳವಾರ ಆರೋಗ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು, ಆಯುಕ್ತರು ಮತ್ತು ಹಿರಿಯ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಕೊರೋನಾ ಸೋಂಕು ಪೀಡಿತ ಟೆಕ್ಕಿ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕ್ಷಣದಿಂದ ಹೈದರಾಬಾದ್ ಗೆ ತೆರಳುವವರೆಗೂ ಆತ ಸಂಪರ್ಕಿಸಿರುವ ಪ್ರತಿಯೊಬ್ಬರನ್ನೂ ಪತ್ತೆ ಮಾಡಿ ಕೂಡಲೇ ಅವರಿಗೆ ಸೋಂಕು ಪರೀಕ್ಷೆ ನಡೆಸಿ ನಿಗಾದಲ್ಲಿ ಇರಿಸಲಾಗುವುದು ಎಂದು ಸಾಂಕ್ರಾಮಿಕ ರೋಗ ವಿಭಾಗದ ಜಂಟಿ ನಿರ್ದೇಶಕ ಡಾ| ಬಿ.ಜಿ.ಪ್ರಕಾಶ್ ಕುಮಾರ್ ಮಾಹಿತಿ ನೀಡಿದರು.
ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ: ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ
ಕಾಠ್ಮಂಡು: ಇತ್ತೀಚಿನ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ನಲುಗಿ ಹೋಗಿರುವ ನೇಪಾಳ, ಇದೀಗ ಜಗತ್ತಿನ ಬಲಿಷ್ಠ ರಾಷ್ಟ್ರಗಳ ವಿರುದ್ಧ ತಿರುಗಿಬಿದ್ದಿದೆ. ಸಾವಿರಾರು ಜೀವಗಳನ್ನು ಬಲಿಪಡೆದ ಈ ನೈಸರ್ಗಿಕ...








