ವದೆಹಲಿ: ವೃಕ್ಷಮಾತೆ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ತುಳಸಿಗೌಡ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.
ತಮ್ಮ ಎಕ್ಸ್ ಖಾತೆ ಮೂಲಕ ಪ್ರಧಾನಿ ಸಂತಾಪ ಸೂಚಿಸಿದ್ದಾರೆ. ಕರ್ನಾಟಕದ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತ ತುಳಸಿ ಗೌಡ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಪ್ರಕೃತಿಯನ್ನು ಪೋಷಿಸಲು, ಸಾವಿರಾರು ಸಸಿಗಳನ್ನು ನೆಡಲು ಮತ್ತು ನಮ್ಮ ಪರಿಸರವನ್ನು ಸಂರಕ್ಷಿಸಲು ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಇವರು ಪರಿಸರ ಸಂರಕ್ಷಣೆಗೆ ಮಾರ್ಗದರ್ಶಕ ಬೆಳಕಾಗಿ ಉಳಿಯುತ್ತಾರೆ. ಅವರ ಕೆಲಸ ನಮ್ಮ ಭೂಮಿಯನ್ನು ರಕ್ಷಿಸಲು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದು ಕಂಬನಿ ಮಿಡಿದಿದ್ದಾರೆ,.
ತುಳಸಿ ಗೌಡ ಅವರು ವಯೋಸಹಜದಿಂದಾಗಿ ಇಹಲೋಕ ತ್ಯಜಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹಾಲಕ್ಕಿ ಬುಡಕಟ್ಟು ಜನಾಂಗದ ಮಹಿಳೆಯಾಗಿರುವ ಇವರಿಗೆ ಸುಬ್ರಾಯ ಮತ್ತು ಸೋಮಿ ಎಂಬ ಇಬ್ಬರು ಮಕ್ಕಳಿದ್ದಾರೆ. ತುಳಸಿ ಗೌಡ ನಾಲ್ಕು ಜನ ಮೊಮ್ಮಕ್ಕಳನ್ನು ಅಗಲಿದ್ದಾರೆ.
ವರ್ಷಕ್ಕೆ ಮೂವತ್ತು ಸಾವಿರಕ್ಕೂ ಅಧಿಕ ಸಸಿಗಳನ್ನು ತುಳಸಿ ಗೌಡ ಅವರು ನೆಟ್ಟು ಬೆಳೆಸುತ್ತಿದ್ದರು. ಹೀಗಾಗಿ ಅವರು ಲಕ್ಷಾಂತರ ಮರಗಳನ್ನು ನೆಟ್ಟು ಪೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ವೃಕ್ಷಮಾತೆ ಎಂದೇ ಕರೆಯಲಾಗುತ್ತಿತ್ತು. ಅಳಿವಿನಂಚಿನಲ್ಲಿನ ಹಲವಾರು ಕಾಡು ಗಿಡಗಳ ಬೀಜ ಸಂಗ್ರಹಿಸಿ ಸಸಿಗಳನ್ನು ಮಾಡಿ ಕಾಡಿನಲ್ಲಿ ನೆಡುವ ಮೂಲಕ ಸದ್ದಿಲ್ಲದೇ ಹಸಿರು ಕ್ರಾಂತಿ ಮಾಡಿದ್ದರು. ಹೀಗಾಗಿ ಕೇಂದ್ರ ಸರ್ಕಾರ ಅವರ ಸೇವೆ ಗುರುತಿಸಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.
ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್
ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...








