ದೇಶವಾಸಿಗಳಿಗೆ ಗಣೇಶ ಚತುರ್ಥಿ ಹಬ್ಬದ ಶುಭಾಶಯ ಹಾರೈಸಿದ ಪ್ರಧಾನಿ ಮೋದಿ
ಹೊಸ ದಿಲ್ಲಿ, ಅಗಸ್ಟ್ 22:ಪ್ರಧಾನಿ ನರೇಂದ್ರ ಮೋದಿ ದೇಶವಾಸಿಗಳಿಗೆ ಶನಿವಾರ ಗಣೇಶ ಚತುರ್ಥಿ ಹಬ್ಬದ ಶುಭಾಶಯ ಕೋರಿದ್ದಾರೆ. ಎಲ್ಲೆಡೆ ಸಂತೋಷ ಮತ್ತು ಸಮೃದ್ಧಿ ಇರಲಿ ಎಂದು ಹಾರೈಸಿದ್ದಾರೆ.

ಗಣೇಶ ಚತುರ್ಥಿಯ ಶುಭ ಹಬ್ಬದ ಶುಭಾಶಯಗಳು. ಭಗವಾನ್ ಶ್ರೀ ಗಣೇಶ್ ನ ಆಶೀರ್ವಾದ ಯಾವಾಗಲೂ ನಮ್ಮ ಮೇಲೆ ಇರಲಿ. ಎಲ್ಲೆಡೆ ಸಂತೋಷ ಮತ್ತು ಸಮೃದ್ಧಿ ಇರಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಕೋವಿಡ್ -19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಮೊಟಕುಗೊಂಡ ಹಬ್ಬಗಳ ನಡುವೆ ಗಣೇಶ ಚತುರ್ಥಿಯನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ.








