ADVERTISEMENT
Wednesday, July 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

Mangaluru: ವೈದ್ಯರು, ತಜ್ಞರ ಕೊರತೆ ನೀಗಿಸಲು ವೈದ್ಯಕೀಯ ಶಿಕ್ಷಣಕ್ಕೆ ಆದ್ಯತೆ, ಹೊಸ ಕಾಲೇಜುಗಳ ನಿರ್ಮಾಣ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

Vivek Biradar by Vivek Biradar
March 25, 2022
in Malenadu Karnataka, Newsbeat, ಮಲೆನಾಡು ಕರ್ನಾಟಕ
Sudakar Saaksha Tv
Share on FacebookShare on TwitterShare on WhatsappShare on Telegram

ವೈದ್ಯರು, ತಜ್ಞರ ಕೊರತೆ ನೀಗಿಸಲು ವೈದ್ಯಕೀಯ ಶಿಕ್ಷಣಕ್ಕೆ ಆದ್ಯತೆ, ಹೊಸ ಕಾಲೇಜುಗಳ ನಿರ್ಮಾಣ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ಫಿಸಿಯೋಥೆರಪಿಯಲ್ಲಿ ಜ್ಞಾನದಷ್ಟೇ ಕೌಶಲ್ಯವೂ ಮುಖ್ಯ

Related posts

shilpa-shaila-commonwealth-games-bronze-medal-karnataka-para-athlete

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ.

July 28, 2026
vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

July 28, 2026

ಮಂಗಳೂರು, ಮಾರ್ಚ್ 25, ಶುಕ್ರವಾರ

ಭಾರತದಲ್ಲಿ 10 ಸಾವಿರ ಜನಸಂಖ್ಯೆಗೆ 0.59 ಫಿಸಿಯೋಥೆರಪಿ ತಜ್ಞರಿದ್ದಾರೆ. ಇದಕ್ಕಾಗಿಯೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಹೊಸ ಕಾಲೇಜುಗಳನ್ನು ಆರಂಭಿಸುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಅಂತಾರಾಷ್ಟ್ರೀಯ ಫಿಸಿಯೋಥೆರಪಿ ಸಮ್ಮೇಳನ ‘ಮಂಗಳೂರು ಫಿಸಿಯೋಕಾನ್-2022’ ನಲ್ಲಿ ಮಾತನಾಡಿದ ಸಚಿವರು, ಅಮೆರಿಕದಲ್ಲಿ 10 ಸಾವಿರ ಜನಸಂಖ್ಯೆಗೆ 7 ಫಿಸಿಯೋಥೆರಪಿ ತಜ್ಞರಿದ್ದಾರೆ. ಆದರೆ ಭಾರತದಲ್ಲಿ 10 ಸಾವಿರ ಜನಸಂಖ್ಯೆಗೆ 0.59 ತಜ್ಞರಿದ್ದಾರೆ. ಈ ರೀತಿ ವೈದ್ಯರು, ತಜ್ಞರ ಕೊರತೆ ನಿವಾರಿಸಲೆಂದೇ ಪ್ರಧಾನಿ ನರೇಂದ್ರ ಮೋದಿಯವರು ವೈದ್ಯಕೀಯ ಶಿಕ್ಷಣಕ್ಕೆ ಆದ್ಯತೆ ನೀಡಿ ಹೆಚ್ಚು ಕಾಲೇಜುಗಳನ್ನು ಆರಂಭಿಸಿದ್ದಾರೆ. ಇದರಿಂದಾಗಿ ಹೆಚ್ಚು ವೈದ್ಯರು, ತಜ್ಞರು ಹೊರಬಂದು ಕೊರತೆ ನೀಗಿಸಲು ಸಾಧ್ಯವಾಗುತ್ತದೆ ಎಂದರು.

ಔಷಧಿಗಳು ರೋಗವನ್ನು ಗುಣಪಡಿಸುತ್ತವೆ. ಆದರೆ ಫಿಸಿಯೋಥೆರಪಿಯು ಜೀವನ ನೀಡುತ್ತದೆ. ನರ ಸಂಬಂಧಿ ಸಮಸ್ಯೆ, ಅಂಗವೈಕಲ್ಯ ಮೊದಲಾದವುಗಳಿಗೆ ಫಿಸಿಯೋಥೆರಪಿ ಪರಿಹಾರ ನೀಡುತ್ತದೆ. ಆಧುನಿಕ ಕಾಲದಲ್ಲಿ ಜ್ಞಾನವೇ ಮುಖ್ಯವಾದ ಶಕ್ತಿ. ಅದೇ ರೀತಿಯಲ್ಲಿ ಫಿಸಿಯೋಥೆರಪಿ ಕ್ಷೇತ್ರದಲ್ಲಿ ಜ್ಞಾನದ ಜೊತೆಗೆ ಕೌಶಲ್ಯವೂ ಮುಖ್ಯವಾದ ಶಕ್ತಿ. ಇಂತಹ ಕೌಶಲ್ಯವನ್ನು ತಜ್ಞರು ಅಭಿವೃದ್ಧಿ ಮಾಡಿಕೊಳ್ಳಬೇಕು. ತಂತ್ರಜ್ಞಾನ ಹಾಗೂ ಸಂಶೋಧನೆಗಳು ಇಲ್ಲಿ ಮುಖ್ಯವಾಗುತ್ತದೆ. ಫಿಸಿಯೋಥೆರಪಿ ಬಹಳ ಪುರಾತನವಾದ ಜ್ಞಾನವಾಗಿದೆ. ಭಾರತದ ಆಯುರ್ವೇದದಲ್ಲೂ ಇದಕ್ಕೆ ಸಂಬಂಧಿಸಿದ ಅಂಶಗಳಿವೆ ಎಂದರು.

ಯೋಗ ಹಾಗೂ ಪ್ರಾಣಾಯಾಮವನ್ನು ಪ್ರತಿ ದಿನ ಮಾಡುವವರು ಅನಾರೋಗ್ಯಕ್ಕೊಳಗಾದರೂ ಬೇಗನೆ ಗುಣಮುಖರಾಗುವ ಸಾಮರ್ಥ್ಯ ಹೊಂದಿರುತ್ತಾರೆ. ಇಂತಹ ದೈಹಿಕ ಚಟುವಟಿಕೆಗಳು ಆರೋಗ್ಯ ವೃದ್ಧಿಗೆ ಎಷ್ಟು ಅಗತ್ಯ ಎಂಬುದನ್ನು ಗಮನಿಸಬಹುದು. ಕೋವಿಡ್ ಆರಂಭವಾದ ಸಂದರ್ಭದಲ್ಲಿ ಆರೋಗ್ಯ ಇಲಾಖೆಯು ನಿಮ್ಹಾನ್ಸ್ ಸಹಯೋಗದಲ್ಲಿ ಕೋವಿಡ್ ರೋಗಿಗಳು ಹಾಗೂ ಅವರ ಕುಟುಂಬದವರಿಗೆ ಆಪ್ತ ಸಮಾಲೋಚನೆಯ ಸೇವೆಯನ್ನು ವಿಶೇಷವಾಗಿ ನೀಡಲು ಆರಂಭಿಸಿತು. ಕೆಲ ಕೊರೊನಾ ರೋಗಿಗಳು ರೋಗದ ಭಯದಿಂದಲೇ ಆತ್ಮಹತ್ಯೆಗೆ ಶರಣಾದ ಘಟನೆಗಳೂ ನಡೆದಿತ್ತು. ಆದ್ದರಿಂದ ರೋಗಿಗಳನ್ನು ಮಾನಸಿಕವಾಗಿ ಬಲಗೊಳಿಸಲು ಆಪ್ತ ಸಮಾಲೋಚನೆ ನಡೆಸಲಾಯಿತು. ಈ ಕಾರ್ಯಕ್ರಮದಡಿ ಸುಮಾರು 25 ಲಕ್ಷ ಜನರಿಗೆ ಆಪ್ತ ಸಮಾಲೋಚನೆ ನಡೆಸಲಾಗಿದೆ ಎಂದು ತಿಳಿಸಿದರು.

ಜನರಿಗೆ ದೈಹಿಕ ಆರೋಗ್ಯ ಸೇವೆಗಳ ಜೊತೆಗೆ ಮಾನಸಿಕ ಆರೋಗ್ಯ ಸೇವೆಯನ್ನೂ ನೀಡಬೇಕಿದೆ. ಇದಕ್ಕಾಗಿ ಕೇಂದ್ರ ಆರ್ಥಿಕ ಸಚಿವರು ಈ ಬಾರಿಯ ಬಜೆಟ್ ನಲ್ಲಿ, ಟೆಲಿ ಮೆಂಟಲ್ ಹೆಲ್ತ್ ಕಾರ್ಯಕ್ರಮ ಘೋಷಿಸಿದ್ದಾರೆ. ಇದು ನಿಮ್ಹಾನ್ಸ್ ಸಹಯೋಗದಲ್ಲಿ ನಡೆಯಲಿದ್ದು, ಕರ್ನಾಟಕವೇ ಇದರ ನೇತೃತ್ವ ವಹಿಸಲಿರುವುದು ಸಂತಸದ ಸಂಗತಿ. ಕರ್ನಾಟಕ ಈಗ ವೈದ್ಯಕೀಯ ಶಿಕ್ಷಣದ ಕೇಂದ್ರವಾಗಿದ್ದು, 75 ಫಿಸಿಯೋಥೆರಪಿ ಕಾಲೇಜುಗಳಿವೆ ಎಂದು ಹೇಳಿದರು.

ಉಕ್ರೇನ್ ನಿಂದ ಹಿಂದಿರುಗಿದ ವೈದ್ಯ ವಿದ್ಯಾರ್ಥಿಗಳ ಕಲಿಕೆ ಸ್ಥಗಿತಗೊಳ್ಳದಂತೆ ಕ್ರಮ ವಹಿಸಲಾಗಿದೆ. ಇದಕ್ಕಾಗಿ ಸಮಿತಿ ರಚಿಸಿ ಸಲಹೆ ಪಡೆಯಲಾಗುತ್ತದೆ. ಯುದ್ಧ ನಿಂತ ಬಳಿಕ ವಿದ್ಯಾರ್ಥಿಗಳು ಆ ದೇಶಕ್ಕೆ ಮರಳಲಿದ್ದಾರೆಯೇ ಎಂಬ ಬಗ್ಗೆ ತಿಳಿದಿಲ್ಲ. ಆದ್ದರಿಂದ ಅಲ್ಲಿಯವರೆಗೂ ಕಲಿಕೆ ಮುಂದುವರಿಸಲು ಅವಕಾಶ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಖಾಸಗಿ, ಸರ್ಕಾರಿ, ಡೀಮ್ಡ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಕಲಿಕೆ ಮುಂದುವರಿಯಲಿದೆ ಎಂದರು.

Tags: #Saaksha TVDr K SudakarMagaluru
ShareTweetSendShare
Join us on:

Related Posts

shilpa-shaila-commonwealth-games-bronze-medal-karnataka-para-athlete

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ.

by admin
July 28, 2026
0

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ..ಗ್ಲಾಸ್ಗೋ ಪೋಡಿಯಂನಲ್ಲಿ ಕರುನಾಡಿನ ರೈತನ ಮಗಳ...

vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

by admin
July 28, 2026
0

ವಾಸ್ತು ಶಾಸ್ತ್ರ –  ದಿಕ್ಕು ನಿರ್ದೇಶನಗಳು, ಬ್ರಹ್ಮಸ್ಥಾನ (ಮಧ್ಯಭಾಗ) ತಟಸ್ಥ ಶಕ್ತಿಯ ಕೇಂದ್ರ (Neutral Energy Zone) ಮನೆಯ ಮಧ್ಯಭಾಗವನ್ನು ತೆರವು ಮತ್ತು ಸ್ವಚ್ಛವಾಗಿಡುವುದು ಉತ್ತಮ. ಶ್ರೀ ಕ್ಷೇತ್ರ...

guru-purnima-2026-gajakesari-yoga-rashi-bhavishya

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

by admin
July 28, 2026
0

ಬುಧವಾರ ಜುಲೈ 29ರಂದು ಗುರು ಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಆಷಾಢ ಮಾಸದ ಹುಣ್ಣಿಮೆಯನ್ನು ಗುರು ಪೂರ್ಣಿಮೆ ಎನ್ನಲಾಗುವುದು ಈ ಮಂಗಳಕರ ದಿನ ಜ್ಯೋತಿಷ್ಯದಲ್ಲಿ ತುಂಬಾ ವಿಶೇಷವಾಗಿದೆ. ಯಾಕೆಂದರೆ ಈ...

rishikanta-singh-commonwealth-games-silver-medal-journey

Rishikantha singh – ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..!

by admin
July 28, 2026
0

ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..! ಅವನು ಶಾಲೆಗೆ ಹೋಗಿ ಓದಿದ್ದು ಬರೀ 8ನೇ...

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

by Shwetha
July 28, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಜಕೀಯ ನಿವೃತ್ತಿಯ ಸುಳಿವು ನೀಡಿದ ಬೆನ್ನಲ್ಲೇ, ಕಾಂಗ್ರೆಸ್‌ನಲ್ಲಿ ಈ ಕುರಿತು ಚರ್ಚೆಗಳು ಜೋರಾಗಿವೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram