ಶಾಲೆ ಬಂದ್ ಗೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ..!!
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಕಂಟ್ರೋಲ್ ಗೆ ಸಿಗುತ್ತಿಲ್ಲ. ದಿನೆ ದಿನೆ ಸೋಂಕಿತರ ಸಂಖ್ಯೆ ಡಬ್ಕಿ ಡಬಲ್ ಲೆಕ್ಕದಲ್ಲಿ ದಾಖಲಾಗ್ತಿದೆ.
ಇದ್ರ ನಡುವೆ ಬೆಂಗಳೂರಿನಲ್ಲಿ ಗುರುವಾರ ಒಂದೇ ದಿನ 2906 ಪ್ರಕರಣಗಳ ದಾಖಲಾದ ಕಾರಣ 6 ರಿಂದ 9 ನೇ ತರಗತಿಗಳನ್ನ ಬಂದ್ ಮಾಡಿ ಆದೇಶ ಹೊರಡಿಸಿದ್ದು, ಪರ ವಿರೋಧಕ್ಕೆ ಕಾರಣವಾಗಿದೆ.
ರುಪ್ಸಾ ಕರ್ನಾಟಕ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ಸರ್ಕಾರದ ಈ ನಿರ್ಧಾರದ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ. ಶಾಲೆಯಲ್ಲಿ ಮಕ್ಕಳು ಅತ್ಯಂತ ಸುರಕ್ಷಿತರಾಗಿದ್ದಾರೆ.
ಶಾಲೆಗಳಿಂದ ಮಕ್ಕಳಿಗೆ ಎಲ್ಲೂ ಸೋಂಕು ಹರಡಿಲ್ಲ. ಕೊರೊನಾದಿಂದ ಕಳೆದ ವರ್ಷವೂ ಪರೀಕ್ಷೆ ನಡೆದಿಲ್ಲ. ಈ ವರ್ಷವೂ ನಡೆಯುತ್ತಿಲ್ಲ.
ಆದ್ರೆ ಕೆಲವು ಶಾಲೆಗಳು ಪರೀಕ್ಷೆ ನಡೆಸಲು ತಯಾರಿ ನಡೆಸಿಕೊಂಡಿದ್ದಾರೆ. ಇಂಥಾ ಸಂದರ್ಭದಲ್ಲಿ ಸ್ಕೂಲ್ ಬಂದ್ ಮಾಡೋದು ಎಷ್ಟರ ಮಟ್ಟಿಗೆ ಸರಿ.
ಕನಿಷ್ಠ ಪರೀಕ್ಷೆ ನಡೆಸಲು ಅವಕಾಶ ಮಾಡಿ ಅಂತ ರುಪ್ಸಾ ಕರ್ನಾಟಕ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.