ಆಕ್ಸಿಜನ್ ಕೊರತೆ ಹೆಚ್ಚಾಗುವುದಕ್ಕೆ ಕಾರಣ ಕೇಂದ್ರದ ನಿರ್ಲಕ್ಷ್ಯ : ಪ್ರಿಯಾಂಕಾ ಗಾಂಧಿ
ನವದೆಹಲಿ: ಭಾರತದಲ್ಲಿ ಆಕ್ಸಿಜನ್ ಕೊರತೆ ಆಕ್ಸಿಜನ್ ಕೊರತೆ ಹೆಚ್ಚಾಗಿರುವುದಕ್ಕೆ ಕೇಂದ್ರದ ನಿರ್ಲಕ್ಷ್ಯವೇ ಕಾರಣವೆಂದು ಕಾಂಗ್ರೆಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಭಾರತದಲ್ಲಿ ಆಕ್ಸಿಜನ್ ಉತ್ಪಾದನೆ ವಿಶ್ವದಲ್ಲಿಯೇ ಬೃಹತ್ ಪ್ರಮಾಣದಲ್ಲಿದೆ. ಹೀಗಿರುವಾಗ ಕೊರತೆ ಏಕೆ ಉಂಟಾಗುತ್ತಿದೆ. ಕೊರೋನಾ ಒಂದನೇ ಅಲೆ ಕಡಿಮೆಯಾಗುವಾಗಲೇ ಎಚ್ಚರಿಕೆ ವಹಿಸಬೇಕಿತ್ತು, ಆಕ್ಸಿಜನ್ ಕೊರತೆಗೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ಅಲ್ಲದೇ ಸರ್ಕಾರದ ಮುಂದೆ ಸಾಕಷ್ಟು ಸಮಯವಿತ್ತು. ಆಕ್ಸಿಜನ್ ನಮ್ಮಲ್ಲಿ ಇದೆ, ಆದರೆ ಅದು ಎಲ್ಲಿಗೆ ತಲುಪಬೇಕೋ ಅಲ್ಲಿಗೆ ತಲುಪುತ್ತಿಲ್ಲ. ಕಳೆದ ಆರು ತಿಂಗಳಲ್ಲಿ 1.1 ಮಿಲಿಯನ್ ರೆಮೆಡಿಸಿವಿರ್ ರಫ್ತಾಗಿದೆ. ಇಂದು ನಾವು ಕೊರತೆ ಎದುರಿಸುತ್ತಿದ್ದೇವೆ ಎಂದರೆ ಏನರ್ಥ ಎಂದು ಪ್ರಶ್ನಿಸಿದ್ದಾರೆ.