ಕೊರೊನಾ ಸೋಂಕು ಹರಡದಂತೆ ತಡೆಯಲು ದೇಶವನ್ನು ಲಾಕ್ ಡೌನ್ ಮಾಡಲಾಗಿದೆ. ಆದರೂ ಸಹ ಕೊರೊನಾ ವೈರಸ್ ನಿಯಂತ್ರಣಕ್ಕೆ ಬರುತ್ತಿಲ್ಲ. ಹಾಗಾಗಿ ಮಾಜಿ ಸಚಿವ ಎಂ.ಬಿ ಪಾಟೀಲ್ ಮಹಾಮಾರಿ ಕೊರೂನಾ ಕಾಯಿಲೆಯಿಂದ ವಿಶ್ವವನ್ನು ರಕ್ಷಿಸಲು ಲಿಂಗ ಪೂಜೆ ಸಲ್ಲಿಸಿದರು. ನಾಡಿನ ಮಠಾಧೀಶರು ನೀಡಿದ ಕರೆ ಓಗೊಟ್ಟ ಎಂ.ಬಿ. ಪಾಟೀಲ್ ಇಂದು ಸಂಜೆ ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು. ಸಂಜೆ 7 ಗಂಟೆಗೆ ಲಿಂಗ ಪೂಜೆ ಮಾಡಿದ ಅವರು ಇಡೀ ವಿಶ್ವವನ್ನು ಈ ಮಾರಕ ಕಾಯಿಲೆಯಿಂದ ರಕ್ಷಿಸುವಂತೆ ಪ್ರಾರ್ಥಿಸಿದರು.
ದೇಶದ ಶೇ 80ರಷ್ಟು ಮಹಿಳೆಯರು ಕಿರುಕುಳದ ಸುಳಿಯಲ್ಲಿ: ಅಂಕಿ ಅಂಶಗಳ ಮೂಲಕ ಸಮಾಜದ ಕರಾಳ ಮುಖ ಅನಾವರಣಗೊಳಿಸಿದ ರಾಹುಲ್ ಗಾಂಧಿ
ಪುಣೆ: ದೇಶದ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಮತ್ತು ಮಾನಸಿಕ ಕಿರುಕುಳದ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆತಂಕಕಾರಿ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ್ದಾರೆ....








