ಲಕ್ನೋ: ಅಕ್ರಮವಾಗಿ ಸಾಗಿಸುತ್ತಿದ್ದ 95 ಮಕ್ಕಳನ್ನು ರಕ್ಷಿಸಲಾಗಿದೆ.
ಬಿಹಾರದಿಂದ (Bihar) ಉತ್ತರ ಪ್ರದೇಶಕ್ಕೆ ಸಾಗಿಸುತ್ತಿದ್ದ 95 ಮಕ್ಕಳನ್ನು ಅಯೋಧ್ಯೆಯಲ್ಲಿ (Ayodhya) ಮಕ್ಕಳ ಆಯೋಗದ (Child Commission) ಅಧಿಕಾರಿಗಳು ರಕ್ಷಿಸಿದ್ದಾರೆ. ಮಕ್ಕಳ ಕಳ್ಳಸಾಗಾಣಿಕೆಯ ಆತಂಕ ಈಗ ಮನೆ ಮಾಡಿದೆ.
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸರ್ವೇಶ್ ಅವಸ್ತಿ, ಯುಪಿ ಮಕ್ಕಳ ಆಯೋಗದ ಸದಸ್ಯೆ ಸುಚಿತ್ರಾ ಚತುರ್ವೇದಿ ತಂಡ ಮಕ್ಕಳನ್ನು ರಕ್ಷಿಸಿದೆ. ಇಲ್ಲಿ ಸಾಗಿಸುತ್ತಿದ್ದ ಮಕ್ಕಳ ಪೋಷಕರಿಂದ ಯಾವುದೇ ಒಪ್ಪಿಗೆ ಪತ್ರ ಅಲ್ಲಿದ್ದವರ ಬಳಿ ಇರಲಿಲ್ಲ. ಸಾಗಿಸುತ್ತಿದ್ದ ವಾಹನದಲ್ಲಿ ಸುಮಾರು 4 ರಿಂದ 12 ವರ್ಷದೊಳಗಿನ ಮಕ್ಕಳಿದ್ದಾರೆ. ಮಕ್ಕಳ ಪೋಷಕರನ್ನು ಸಂಪರ್ಕಿಸಲಾಗುತ್ತಿದೆ. ಮಕ್ಕಳಿಗೆ ವೈದ್ಯಕೀಯ ನೆರವು ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.