ಮ್ಯಾನ್ಮಾರ್ ನಲ್ಲಿ ಸೇನಾ ಸರ್ಕಾರದ ವಿರುದ್ಧ ಭುಗಿಲೆದ್ದ ಜನಾಕ್ರೋಶ..!
ಮ್ಯಾನ್ಮಾರ್ : ಮ್ಯಾನ್ಮಾರ್ ನಲ್ಲಿ ರಾಜಕೀಯ ಬಿಕ್ಕಟ್ಟು, ತುರ್ತು ಪರಿಸ್ಥಿತಿ ಘೋಷಣೆ, ಆಂಗ್ ಸಾನ್ ಸೂಕಿ ಬಂಧನದ ಬೆನ್ನಲ್ಲೇ ಜನಾಕ್ರೋಶ ಭುಗಿಲೆದ್ದಿದೆ. ಅವರನ್ನ ಈ ಕೂಡ್ಲೇ ಬಿಡುಗಡೆ ಮಾಡಬೇಕು ಎಂದು ವಿಶ್ವಸಂಸ್ಥೆ ಒತ್ತಾಯಿಸಿದ ಬೆನ್ನಲ್ಲೇ ಮ್ಯಾನ್ಮಾರ್ ನಲ್ಲಿ ಮಿಲಿಟರಿ ಆಡಳಿತ ವಿರೋಧಿಸಿ ನಡೆದಿರುವ ಪ್ರತಿಭಟನೆ ತೀವ್ರಗೊಂಡಿದೆ. ಹೋರಾಟಗಾರರು ತಮ್ಮ ಬಂಧನವನ್ನು ತಡೆಯಲು ಸ್ವಯಂಪ್ರೇರಿತವಾಗಿ ಕಾವಲು ಗುಂಪುಗಳನ್ನು ರಚಿಸಿಕೊಂಡಿದ್ದಾರೆ.
40 ವೀರ ಯೋಧರನ್ನ ದೇಶ ಕಳೆದುಕೊಂಡ ಕರಾಳ ದಿನಕ್ಕೆ ಇಂದಿಗೆ 2 ವರ್ಷ..! ವೀರ ಯೋಧರಿಗೊಂದು ಸಲಾಂ..!
ಕಳೆದ ವಾರ ಸೇನೆಯು ಚುನಾಯಿತ ಸರ್ಕಾರ ಕಿತ್ತುಹಾಕಿ ಆಡಳಿತವನ್ನು ತನ್ನ ಸುಪರ್ದಿಗೆ ಪಡೆದುಕೊಂಡಿದೆ. ಇದರಿಂದ ರಾಷ್ಟ್ರದಾದ್ಯಂತ ಪ್ರತಿಭಟನೆಗಳು ತೀವ್ರಗೊಂಡಿವೆ. ಸೂಕಿ ಮತ್ತು ನ್ಯಾಷನಲ್ ಲೀಗ್ ಫಾರ್ ಡೆಮಾಕ್ರಸಿ ಪಕ್ಷದ ಇತರ ನಾಯಕರನ್ನು ಸೇನೆ ಬಂಧಿಸಿದ ನಂತರ ಸರ್ಕಾರಿ ಅಧಿಕಾರಿಗಳು, ವೈದ್ಯರು ಮತ್ತಿತರರು ಪ್ರತಿಭಟನೆಗೆ ಧುಮಿಕಿದ್ದಾರೆ. ಈಗಾಗಲೇ ಮಾಜಿ ಅಧ್ಯಕ್ಷೆ ಆಂಗ್ ಸಾನ್ ಸೂಕಿ ಅವರ ರಾಜಕೀಯ ಮಿತ್ರರು ಸೇರಿದಂತೆ ಸುಮಾರು 400 ಜನರನ್ನು ಬಂಧಿಸಲಾಗಿದೆ. ಈ ಪ್ರತಿಭಟನಕಾರರನ್ನು ಬಂಧಿಸಲು ಸೇನೆ ಮುಂದಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








