ಗೋಕಾಕ್ ನಲ್ಲಿ ಸಾಹುಕಾರ್ ಬೆಂಬಲಿಗರಿಂದ ಪ್ರತಿಭಟನಾ ರ್ಯಾಲಿ
ಬೆಳಗಾವಿ : ರಮೇಶ್ ಜಾರಕಿಹೊಳಿ ಆ ವಿಡಿಯೋ ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿದೆ. ಈಗಾಗಲೇ ರಮೇಶ್ ಜಾರಕಿಹೊಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ.
ಇತ್ತ ವಿಡಿಯೋದಲ್ಲಿರುವ ಯುವತಿ ಮಾತ್ರ ಈವರೆಗೂ ಬಹಿರಂಗವಾಗಿ ಕಾಣಿಸಿಕೊಂಡು ತನಗೆ ಅನ್ಯಾಯವಾಗಿದೆ ಅಂತ ಪೊಲೀಸರಿಗೆ ದೂರು ನೀಡಿಲ್ಲ.
ಇನ್ನೊಂದೆಡೆ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ಕೂಡ ಪೊಲೀಸರ ವಿಚಾರಣೆ ಹಾಜರಾಗುತ್ತಿಲ್ಲ. ಈ ಹಿನ್ನೆಲೆ ಪ್ರಕರಣ ಸುತ್ತ ಅನುಮಾನಗಳ ಹುತ್ತಗಳೇ ಬೆಳೆಯುತ್ತಿವೆ.
ಈ ಮಧ್ಯೆ ರಮೇಶ್ ಜಾರಕಿಹೊಳಿ ಅಭಿಮಾನಿಗಳು ಗೋಕಾಕ್ ನಲ್ಲಿ ರೊಚ್ಚಿಗೆದ್ದಿದ್ದು, ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ದಾರೆ. ರಮೇಶ್ ಜಾರಕಿಹೊಳಿ ಅವರನ್ನ ಈ ಪ್ರಕರಣದಲ್ಲಿ ಸಿಲುಕಿಸಲಾಗುತ್ತಿದೆ.
ಇದರ ಹಿಂದೆ ರಾಜಕೀಯ ಷಡ್ಯಂತರವಿದೆ ಅಂತಾ ಬೆಳಗಾವಿ ಜಿಲ್ಲೆ ಗೋಕಾಕನ ಕೊಣ್ಣೂರು ಪುರಸಭೆ ಆವರಣದಿಂದ ರಮೇಶ್ ಬೆಂಬಲಿಗರು ಬೃಹತ್ ಪ್ರತಿಭಟನಾ ಮೆರವಣಿಗೆ ಆರಂಭಿಸಿದ್ದಾರೆ.
ಈ ಪ್ರತಿಭಟನಾ ಮೆರವಣಿಗೆಯಲ್ಲಿ ರಮೇಶ್ ಜಾರಕಿಹೊಳಿ ಪರವಾಗಿ ಅಭಿಮಾನಿಗಳು ಘೋಷಣೆ ಕೂಗುತ್ತಿದ್ದರೇ ಇನ್ನೋಂದಷ್ಟು ಮಂದಿ ದಿನೇಶ ಕಲ್ಲಹಳ್ಳಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕುತ್ತಿದ್ದಾರೆ.