ಚಿತ್ರದುರ್ಗ: ಪಿಎಸ್ ಐ ಪಿಸ್ತೂಲ್ ನಾಪತ್ತೆಯಾಗಿರುವ ಘಟನೆಯೊಂದು ಬೆಳಕಿಗೆ ಬಂದಿದೆ.
ಈ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಪಿಎಸ್ ಐ ರೆಸ್ಟೋರೆಂಟ್ ನಲ್ಲಿ ಊಟ ಮಾಡಿ ಕೈ ತೊಳೆದುಕೊಂಡು ಬರುವಷ್ಟರಲ್ಲಿಯೇ ಪಿಸ್ತೂಲ್ ನಾಪತ್ತೆಯಾಗಿದೆ. ಕರ್ತವ್ಯದ ಮೇಲೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೋಗಿದ್ದ ಕೆಆರ್ ಪುರಂ ಠಾಣೆ ಪಿಎಸ್ಐ ಕಲ್ಲಪ್ಪ ಅವರು ಮರಳಿ ಬರುತ್ತಿದ್ದರು. ಈ ಸಂದರ್ಭದಲ್ಲಿ ತಾಲೂಕಿನ ಜಾನಕೊಂಡ ಗ್ರಾಮದ ಹತ್ತಿರ ಇರುವ ರೆಸ್ಟೋರೆಂಟ್ ನಲ್ಲಿ ಊಟಕ್ಕೆ ತೆರಳಿದ್ದರು. ಆಗ ಊಟ ಮಾಡಿ ಕೈ ತೊಳೆಯುವಷ್ಟರಲ್ಲಿ ಅವರ ಪಿಸ್ತೂಲ್ ನಾಪತ್ತೆಯಾಗಿದೆ. 10 ಜೀವಂತ ಗುಂಡುಗಳು ಸೇರಿದಂತೆ ಪ್ರಮುಖ ವಸ್ತುಗಳು ಕಾಣೆಯಾಗಿವೆ ಎನ್ನಲಾಗಿದೆ.
ಘಟನಾ ಸ್ಥಲಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.