ಬೆಂಗಳೂರು: ಪಿಎಸ್ ಐ ಒಬ್ಬರ ಸಮಯ ಪ್ರಜ್ಞೆಯಿಂದಾಗಿ ಎರಡೂವರೆ ವರ್ಷದ ಮಗು ಪ್ರಾಣಾಪಾಯದಿಂದ ಪಾರಾಗಿದೆ.
ಈ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಸಂಪ್ ಒಳಗೆ ಬಿದ್ದಿದ್ದ ಎರಡುವರೆ ವರ್ಷದ ಮಗುವನ್ನು ಬ್ಯಾಟರಾಯನಪುರ ಸಂಚಾರ ಠಾಣೆ ಪಿಎಸ್ಐ ನಾಗರಾಜ್ ರಕ್ಷಿಸಿದ್ದಾರೆ.
ಪಿಎಸ್ಐ ನಾಗರಾಜ್ ಕಾರ್ಯಕ್ಕೆ ಸಾರ್ವಜನಿಕರಿಂದ ಶ್ಲಾಘನೆ ವ್ಯಕ್ತವಾಗಿದೆ. ಬಿಇಎಲ್ನ ಬಳಿ 10 ಅಡಿ ಆಳದ ಸಂಪ್ಗೆ ಮಗು ಬಿದಿದ್ದೆ. ಸಹಾಯಕ್ಕಾಗಿ ಮಹಿಳೆಯರು ಕೂಗಿದ್ದಾರೆ. ಈ ವೇಳೆ ಕರ್ತವ್ಯಕ್ಕೆ ತೆರಳುತ್ತಿದ್ದ ಪಿಎಸ್ಐ ನಾಗರಾಜ್ಗೆ ವಿಷಯ ಗೊತ್ತಾಗಿದೆ. ಕೂಡಲೇ ಸಂಪ್ಗೆ ಇಳಿದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗುವಿನ ರಕ್ಷಣೆ ಮಾಡಿ ಸ್ಥಳೀಯ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ಮುಂದುವರೆದಿದ್ದು, ಪ್ರಾಣಾಪಾಯದಿಂದ ಪಾರಾಗಿದೆ.