Monday, March 27, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಚನ್ನರಾಯಪಟ್ಟಣ ಪಿಎಸ್‍ಐ ಆತ್ಮಹತ್ಯೆ..! ಅಧಿಕಾರಿಗಳ ಒತ್ತಡ; ರೇವಣ್ಣ ಆರೋಪ

admin by admin
July 31, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಹಾಸನ: ತಮ್ಮ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಎರಡು ಕೊಲೆ ಪ್ರಕರಣಗಳಿಂದ ಒತ್ತಡಕ್ಕೆ ಒಳಗಾದ ಪಿಎಸ್‍ಐ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.
ಚನ್ನರಾಯಪಟ್ಟಣ ಪೊಲೀಸ್ ಠಾಣೆಯ ಪಿಎಸ್‍ಐ ಕಿರಣ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲವಾದರೂ ಹಿರಿಯ ಅಧಿಕಾರಿಗಳು ಕೆಲಸದಿಂದ ತನ್ನನ್ನು ಅಮಾನತುಗೊಳಿಸಬಹುದು ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಚನ್ನರಾಯಪಟ್ಟಣ ಠಾಣಾ ವ್ಯಾಪ್ತಿಯ ಬಾಗೂರು ರಸ್ತೆಯಲ್ಲಿ ಜುಲೈ 30 ರಂದು ಪಾರಿವಾಳ ವಿಚಾರಕ್ಕೆ ವ್ಯಕ್ತಿಯೋರ್ವನ ಕೊಲೆಯಾಗಿತ್ತು. ಕಳೆದ ರಾತ್ರಿ ಇಬ್ಬರು ಯುವಕರ ನಡುವೆ ಜಗಳ ನಡೆದು ಓರ್ವ ಕೊಲೆಯಾಗಿದ್ದ. ಕೇವಲ 24 ಗಂಟೆಯೊಳಗೆ ಇಬ್ಬರ ಕೊಲೆ ನಡೆದಿರುವುದು ಜನತೆಯನ್ನು ಬೆಚ್ಚಿ ಬೀಳಿಸಿತ್ತು. ಬಾಗೂರು ರಸ್ತೆಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸಿದ್ದ ಪೆÇಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಕಳೆದ ರಾತ್ರಿ ಕೊಲೆ ನಡೆದ ಸ್ಥಳಕ್ಕೆ ಸಿಬ್ಬಂದಿಯೊಂದಿಗೆ ಪರಿಶೀಲನೆ ನಡೆಸಲು ಪಿಎಸ್‍ಐ ಕಿರಣ್ ತೆರಳಿದ್ದರು. ಈ ವೇಳೆ ಸ್ಥಳದಲ್ಲಿದ್ದ ಕೆಲವರು ಪೆÇಲೀಸರ ವಿರುದ್ಧ ಅಪಹಾಸ್ಯ ಮಾಡಿದ್ದಾರೆ ಎನ್ನಲಾಗಿದೆ. ಕೆಲ ಸಾಮಾಜಿಕ ಜಾಲತಾಣದ ಗ್ರೂಪ್‍ಗಳಲ್ಲಿ ಪೆÇಲೀಸರ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತವಾಗಿತ್ತು.
ಕೊಲೆಯಾದ ಯುವಕನ ಗ್ರಾಮಕ್ಕೆ ಪರಿಶೀಲನೆಗೆಂದು ಪೆÇಲೀಸರು ತೆರಳಿದ್ದ ವೇಳೆ ಅವರ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ ಜನ, ನ್ಯಾಯ ಕೊಡಿಸದಿದ್ದರೆ ನಾವು ಶಾಸಕ ಬಾಲಕೃಷ್ಣ ಮನೆ ಮುಂದೆ ಧರಣಿ ಕೂರುತ್ತೇವೆಂದು ಎಚ್ಚರಿಸಿದ್ದರು.
ಪರಿಸ್ಥಿತಿಯನ್ನು ತಿಳಿಗೊಳಿಸಿ ಮುಂಜಾನೆ ಠಾಣೆಗೆ ಬಂದು ತನ್ನ ಸಹೋದ್ಯೋಗಿಯೊಂದಿಗೆ ಕೆಲಹೊತ್ತು ಪಿಎಸ್‍ಐ ಕಿರಣ್ ಮಾತನಾಡಿದ್ದರು. ಎರಡು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಿಶೀಲನೆಗಾಗಿ ಮೈಸೂರಿನಿಂದ ಅಧಿಕಾರಿಗಳ ತಂಡ ಬರುತ್ತಿದೆ. ಎಲ್ಲಿ ಕರ್ತವ್ಯಲೋಪ ಆರೋಪದಡಿ ಅಮಾನತುಗೊಳಿಸುತ್ತಾರೋ ಎಂಬ ಭಯದಿಂದ ಮನೆಗೆ ತೆರಳಿದ್ದರು ಎನ್ನಲಾಗಿದೆ. ಹೀಗೆ ಮನೆಗೆ ಹೋದವರು ನೇಣಿಗೆ ಶರಣಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

Related posts

Astrology

Astrology : ರೋಗನಿರೋಧಕ ಶಕ್ತಿ ಮತ್ತು ಆರೋಗ್ಯ ವೃದ್ಧಿಯಾಗ ಬೇಕೆಂದರೆ ಯಾವ ಮಂತ್ರವನ್ನು ಜಪಿಸಬೇಕು ಗೊತ್ತಾ ?

March 27, 2023
Annapoorneshwari

Astrology : 5 ಕಂಟೈನರ್‌ಗಳನ್ನು ಎಂದಿಗೂ ಅಡಿಗೆ ಕೌಂಟರ್‌ನಲ್ಲಿ ಇರಿಸಬಾರದು. ಈ ಎಲ್ಲಾ ವಸ್ತುಗಳನ್ನು ಅಡುಗೆ ವೇದಿಕೆಯ ಮೇಲೆ ಇರಿಸಿದರೆ, ಹಣಕ್ಕೆ ಕಷ್ಟವಾಗುತ್ತದೆ…

March 26, 2023

ಎರಡು ದಿನದ ಅವಧಿಯಲ್ಲಿ ಎರಡು ಕೊಲೆ ನಡೆದು ಬೆಚ್ಚಿಬಿದ್ದಿದ್ದ ಚನ್ನರಾಯಪಟ್ಟಣದ ಜನತೆಗೆ ಪೆÇಲೀಸ್ ಅಧಿಕಾರಿಯೇ ಅತ್ಮಹತ್ಯೆ ಮಾಡಿಕೊಂಡಿರುವುದು ಆತಂಕ ಹೆಚ್ಚಿಸಿದೆ.
2009ರಲ್ಲಿ ಪೆÇಲೀಸ್ ಇಲಾಖೆಗೆ ಸೇರಿದ್ದ ಕಿರಣ್, ಚಾಮರಾಜನಗರದ ಗ್ರಾಮಾಂತರ ಠಾಣೆ ಮತ್ತು ಬೇಗೂರು ಪೆÇಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಕಳೆದ ವರ್ಷ ಸ್ವಂತ ಜಿಲ್ಲೆಯಾದ ಹಾಸನದ ಚನ್ನರಾಯಪಟ್ಟಣ ಪೆÇಲೀಸ್ ಠಾಣೆಗೆ ನಿಯುಕ್ತಿಗೊಂಡು ಉತ್ತಮ ಕೆಲಸದ ಮೂಲಕ ಹೆಸರು ಗಳಿಸಿದ್ದರು.

ಮೇಲಧಿಕಾರಿಗಳ ಒತ್ತಡ: ಹೆಚ್.ಡಿ ರೇವಣ್ಣ ಕಿಡಿ
ಮೇಲಧಿಕಾರಿಗಳ ಒತ್ತಡದಿಂದ ಪಿಎಸ್‍ಐ ಕಿರಣ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವುದು ನನಗೆ ತಿಳಿದ ಮಾಹಿತಿ. ಪಿಎಸ್‍ಐ ಕಿರಣ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ಅವರ ಫೋನ್ ಕಿತ್ತುಕೊಂಡಿದ್ದಾರೆ. ಅವರ ಫೋನ್ ಕಾಲ್, ಮೆಸೇಜ್‍ಗಳನ್ನು ಡಿಲೀಟ್ ಮಾಡಬಹುದು ಎಂಬ ಶಂಕೆ ಇದೆ. ಐಜಿಪಿ ವಿಪುಲ್ ಕುಮಾರ್ ಕಿರಣ್ ಅವರ ಫೋನ್ ವಶಕ್ಕೆ ಪಡೆದಿದ್ದಾರೆ. ಆದರೆ, ಕಿರಣ್ ಅವರ ಮನೆಯವರ ಮುಂದೆ ಫೋನ್ ಮಹಜರು ಮಾಡಬೇಕಿತ್ತು. ಆದರೆ ಹಾಗೆ ಮಾಡದ ಹಿರಿಯ ಅಧಿಕಾರಿಗಳ ನಡೆ ಸಂಶಯಕ್ಕೆ ಕಾರಣವಾಗಿದೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಆರೋಪಿಸಿದ್ದಾರೆ.

Tags: channarayappattanaHasanPSI suicide
ShareTweetSendShare
Join us on:

Related Posts

Astrology

Astrology : ರೋಗನಿರೋಧಕ ಶಕ್ತಿ ಮತ್ತು ಆರೋಗ್ಯ ವೃದ್ಧಿಯಾಗ ಬೇಕೆಂದರೆ ಯಾವ ಮಂತ್ರವನ್ನು ಜಪಿಸಬೇಕು ಗೊತ್ತಾ ?

by Naveen Kumar B C
March 27, 2023
0

ರೋಗನಿರೋಧಕ ಶಕ್ತಿ ಮತ್ತು ಆರೋಗ್ಯ ವೃದ್ಧಿಯಾಗ ಬೇಕೆಂದರೆ ಯಾವ ಮಂತ್ರವನ್ನು ಜಪಿಸಬೇಕು ಗಾಯತ್ರಿ ಮಂತ್ರ ಜಪಿಸುವುದರಿಂದ ಮನುಷ್ಯನಿಗೆ ಯಾವ ರೀತಿಯಲ್ಲಿ ಲಾಭವಾಗುತ್ತದೆ ಎಂಬುದು ತಿಳಿದಿದೆಯೇ ? ಸಂಧ್ಯಾಕಾಲದಲ್ಲಿ...

Annapoorneshwari

Astrology : 5 ಕಂಟೈನರ್‌ಗಳನ್ನು ಎಂದಿಗೂ ಅಡಿಗೆ ಕೌಂಟರ್‌ನಲ್ಲಿ ಇರಿಸಬಾರದು. ಈ ಎಲ್ಲಾ ವಸ್ತುಗಳನ್ನು ಅಡುಗೆ ವೇದಿಕೆಯ ಮೇಲೆ ಇರಿಸಿದರೆ, ಹಣಕ್ಕೆ ಕಷ್ಟವಾಗುತ್ತದೆ…

by Naveen Kumar B C
March 26, 2023
0

5 ಕಂಟೈನರ್‌ಗಳನ್ನು ಎಂದಿಗೂ ಅಡಿಗೆ ಕೌಂಟರ್‌ನಲ್ಲಿ ಇರಿಸಬಾರದು. ಈ ಎಲ್ಲಾ ವಸ್ತುಗಳನ್ನು ಅಡುಗೆ ವೇದಿಕೆಯ ಮೇಲೆ ಇರಿಸಿದರೆ, ಹಣಕ್ಕೆ ಕಷ್ಟವಾಗುತ್ತದೆ... ನಮ್ಮ ಅಡುಗೆಮನೆಯಲ್ಲಿ ನೂರಾರು ವಸ್ತುಗಳು ಇವೆ....

Ramya

Weekend with Ramesh :  “ಸಬ್ ಟೈಟಲ್ ಹಾಕ್ರೋ” ಇಂಗ್ಲೀಷ್ ಬಳಸಿ ಟ್ರೋಲ್ ಗೆ ಒಳಗಾದ  ರಮ್ಯಾ… 

by Naveen Kumar B C
March 26, 2023
0

Weekend with Ramesh :  “ಸಬ್ ಟೈಟಲ್ ಹಾಕ್ರೋ” ಇಂಗ್ಲೀಷ್ ಬಳಸಿ ಟ್ರೋಲ್ ಗೆ ಒಳಗಾದ  ರಮ್ಯಾ… ಕನ್ನಡ ಕಿರುತೆರೆಯ ಪ್ರಸಿದ್ಧ ರಿಯಾಲಿಟಿ ಶೋ  ವೀಕೆಂಡ್ ವಿತ್...

Covid-19 , india , daily report , health , saakshatv

COVID-19 :  ಒಂದೇ ದಿನದಲ್ಲಿ 1,890 ಕೋವಿಡ್ ಪ್ರಕರಣಗಳು ಏರಿಕೆ….

by Naveen Kumar B C
March 26, 2023
0

COVID-19 :  ಒಂದೇ ದಿನದಲ್ಲಿ 1,890 ಕೋವಿಡ್ ಪ್ರಕರಣಗಳು ಏರಿಕೆ…. ಬೇಸಿಗೆ ಕಾಲ ಆರಂಭವಾಗುತ್ತಿದ್ದಂತೆ  ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ 24...

ISRO LVM3

ISRO LVM 3 : 36 ಉಪಗ್ರಹಗಳೊಂದಿಗೆ LVM3 ರಾಕೆಟ್ ಉಡಾವಣೆ ಯಶಸ್ವಿ… 

by Naveen Kumar B C
March 26, 2023
0

ISRO LVM 3 : 36 ಉಪಗ್ರಹಗಳೊಂದಿಗೆ LVM3 ರಾಕೆಟ್ ಉಡಾವಣೆ ಯಶಸ್ವಿ… ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ LVM 3 ರಾಕೆಟ್ ಅನ್ನ ಯಶಸ್ವಿಯಾಗಿ ಉಡಾವಣೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Astrology

Astrology : ರೋಗನಿರೋಧಕ ಶಕ್ತಿ ಮತ್ತು ಆರೋಗ್ಯ ವೃದ್ಧಿಯಾಗ ಬೇಕೆಂದರೆ ಯಾವ ಮಂತ್ರವನ್ನು ಜಪಿಸಬೇಕು ಗೊತ್ತಾ ?

March 27, 2023
Annapoorneshwari

Astrology : 5 ಕಂಟೈನರ್‌ಗಳನ್ನು ಎಂದಿಗೂ ಅಡಿಗೆ ಕೌಂಟರ್‌ನಲ್ಲಿ ಇರಿಸಬಾರದು. ಈ ಎಲ್ಲಾ ವಸ್ತುಗಳನ್ನು ಅಡುಗೆ ವೇದಿಕೆಯ ಮೇಲೆ ಇರಿಸಿದರೆ, ಹಣಕ್ಕೆ ಕಷ್ಟವಾಗುತ್ತದೆ…

March 26, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram