ಬಾಗಲಕೋಟೆ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಸಹೋದರನೊಬ್ಬ ತನ್ನ ತಮ್ಮನನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಮುದೋಳ್ ನಗರದ ಗಾಂಧಿ ಚೌಕ್ ನಲ್ಲಿ ನಡೆದಿದೆ. ಹಲವು ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅಣ್ಣ ಸುಖೇನ್ ಸಿಂಗ್ ರಜಪೂತ್ ತನ್ನ 24 ವರ್ಷದ ಸಹೋದರ ಸುನೀಲ್ ನನ್ನು ಕೊಲೆ ಮಾಡಿದ್ದಾನೆ.
ಕೊಲೆಯಾದ ನಂತರ ಘಟಪ್ರಭಾ ನದಿಯಲ್ಲಿ ಸ್ನಾನ ಮಾಡಿ, ಹಣೆಗೆ ಭಸ್ಮ ಧರಿಸಿಕೊಂಡಿದ್ದಾನೆ. ನಂತರ ಅಲ್ಲಿದ್ದ ಕೆಲಸಗಾರರಿಗೆ ನನ್ನ ತಮ್ಮನ ಶವ ಬರುತ್ತದೆ ಎಂದು ಹೇಳಿದ್ದಾನೆ. ಸದ್ಯ ಈತನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ನಡೆದ ಸಮಯದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ತಿಳಿದು ಬಂದಿದೆ.