ADVERTISEMENT
Thursday, August 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪದವಿ ಪೂರ್ವ ಶಿಕ್ಷಣ ಇಲಾಖೆ ಸೇವೆಗಳು ಸಕಾಲ ವ್ಯಾಪ್ತಿಗೆ..!

Kariyappa N by Kariyappa N
January 22, 2021
in Newsbeat, Politics, Samagra karnataka, ರಾಜ್ಯ
sakala
Share on FacebookShare on TwitterShare on WhatsappShare on Telegram

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಆಡಳಿತ ಚುರುಕುಗೊಳಿಸಲು ಉಪನ್ಯಾಸಕರ ಸೇವಾ ವಿಷಯಗಳನ್ನು ಸಕಾಲ ಯೋಜನೆ ವ್ಯಾಪ್ತಿಗೆ ತರಲು ಆಲೋಚಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಸಂಘದ ಪದಾಧಿಕಾರಿಗಳೊಂದಿಗೆ ನಡೆದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಪಿಯು ಇಲಾಖೆಯಲ್ಲಿ ಸೇವಾ ವಿಷಯದಲ್ಲಿ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎಂದು ಸಂಘಟನೆಗಳು ಗಮನಕ್ಕೆ ತಂದಿವೆ. ಈ ಹಿನ್ನೆಲೆಯಲ್ಲಿ ಇಲಾಖೆಯ ಸೇವೆಗಳು ಕ್ಷಿಪ್ರಗತಿಯಲ್ಲಿ ದೊರೆಯುವಂತಾಗಲು ಇಲಾಖೆಯ ಸೇವೆಗಳನ್ನು ಸಕಾಲ ವ್ಯಾಪ್ತಿಗೆ ತರಲಾಗುತ್ತಿದೆ ಎಂದರು.

suresh kumar
ಪಿಯು ಉಪನ್ಯಾಸಕರ ವಿವಿಧ ಬೇಡಿಕೆಗಳ ಕುರಿತು ಮಾತನಾಡಿದ ಸಚಿವರು, ಪದವಿ ಪೂರ್ವ ಶಿಕ್ಷಣ ಉಪನ್ಯಾಸಕರ ವರ್ಗಾವಣೆಗೆ ಈಗಾಗಲೇ ಇರುವ ಕಾಯ್ದೆಯಡಿ ನಿಯಮ ರೂಪಿಸುವ ಕೆಲಸ ಪ್ರಗತಿಯಲ್ಲಿದ್ದು, ನಿಯಮಗಳನ್ನು ರೂಪಿಸಿದ ನಂತರ ವರ್ಗಾವಣೆ ಕೈಗೆತ್ತಿಕೊಳ್ಳಲಾಗುವುದು ಎಂದರು.
ಸೇವಾ ವಿಷಯಗಳಲ್ಲಿನ ವಿಳಂಬ ನಿರ್ವಹಣೆಗೆ ಕಡತ ವಿಲೇವಾರಿಗೆ ಇ-ಕಚೇರಿ ಬಳಕೆ ಮತ್ತು ಅಧಿಕಾರ ವಿಕೇಂದ್ರೀಕರಣ ಮಾಡಿ ವಿಳಂಬವಿಲ್ಲದೇ ಸೇವೆಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು. ಬಾಕಿ ಇರುವ ಕಡತಗಳನ್ನು ಶೀಘ್ರದಲ್ಲೇ ವಿಲೇವಾರಿ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಪಿಯು ನಿರ್ದೇಶಕರಿಗೆ ಸೂಚಿಸಿದರು.

Related posts

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

August 20, 2026
ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

August 20, 2026

ಮುಕ್ತ ವಿವಿ ಕುಲಪತಿಗಳೊಂದಿಗೆ ಚರ್ಚೆ
2007ರಿಂದೀಚೆಗೆ ಪದವಿ ಪೂರ್ವ ಉಪನ್ಯಾಸಕರ ಹುದ್ದೆಗೆ ಬಿ.ಇಡಿ ಕಡ್ಡಾಯಗೊಳಿಸಿರುವ ಹಿನ್ನೆಲೆಯಲ್ಲಿ ಹಾಲಿ ಸೇವೆಯಲ್ಲಿರುವ ಉಪನ್ಯಾಸಕರು ಬಿ.ಇಡಿ ಪಡೆಯಬೇಕಿದ್ದು, ಅದರಲ್ಲಿ 2357 ಮಂದಿ ಅನುದಾನಿತ ಕಾಲೇಜುಗಳ ಉಪನ್ಯಾಸಕರು ಬಿ.ಇಡಿ ಪಡೆಯುವುದು ಬಾಕಿಯಿರುವ ಹಿನ್ನೆಲೆಯಲ್ಲಿ ಈ ಎಲ್ಲ ಉಪನ್ಯಾಸಕರು ಏಕ ಕಾಲದಲ್ಲಿ ಬಿ.ಇಡಿ ಪಡೆಯಲು ಅನುವಾಗುವಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಒಂದು ಬಾರಿ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿಗಳೊಂದಿಗೆ ಚರ್ಚಿಸಿದ್ದೇನೆ. ಉನ್ನತ ಶಿಕ್ಷಣ ಸಚಿವ ಡಿಸಿಎಂ ಡಾ. ಸಿ.ಎನ್. ಆಶ್ವತ್ಥ್ ನಾರಾಯಣ್ ಅವರೊಂದಿಗೆ ಈ ಸಂಬಂಧದಲ್ಲಿ ಚರ್ಚಿಸಲಾಗುವುದು ಎಂದರು.


ಕುಮಾರನಾಯ್ಕ ಸಮಿತಿ ಶಿಫಾರಸ್ಸಿನಂತೆ ಉನ್ನತ ಪದವಿ ಹೊಂದಿದ ಉಪನ್ಯಾಸಕರಿಗೆ ಬಡ್ತಿ ಸೇರಿದಂತೆ ವೇತನ ಬಡ್ತಿ ನೀಡಿಕೆ ಕುರಿತು ನಿರ್ಧಾರ ಕೈಗೊಳ್ಳಲು ಅಧಿಕಾರಿಗಳಿಗೆ ಕಡತ ಮಂಡಿಸುವಂತೆ ಸೂಚನೆ ನೀಡಿದ ಸಚಿವರು, ಪದವಿ ಕಾಲೇಜುಗಳಿಗೆ ಬಡ್ತಿ ನೀಡುವ ಕುರಿತಂತೆ ಉನ್ನತ ಶಿಕ್ಷಣ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.

ಬಿ.ಎಡ್ ವಿನಾಯ್ತಿ
ವೃತ್ತಿಶಿಕ್ಷಣ ಇಲಾಖೆಯಿಂದ ವಿಲೀನವಾಗಿರುವ ಪಿಯು ಉಪನ್ಯಾಸಕರು ಈಗಾಗಲೇ ನಿವೃತ್ತಿಗೆ ಸಮೀಪದಲ್ಲಿರುವುದು ಮತ್ತು ಅವರ ಅತಿ ಕಡಿಮೆ ಸಂಖ್ಯೆಯಲ್ಲಿರುವುದರಿಂದ ಅವರುಗಳಿಗೆ ಬಿ.ಇಡಿ ಪದವಿ ಪಡೆಯುವುದರಿಂದ ವಿನಾಯ್ತಿ ನೀಡಲು ಮತ್ತು ಖಾಯಂ ಪೂರ್ವ ಸೇವಾ ಅವಧಿ ಘೋಷಣೆ ಮಾಡಲು ಇಲಾಖೆಯಲ್ಲಿ ಅನುಕೂಲಕರವಾದ ಕ್ರಮಗಳನ್ನು ಕೈಗೊಳ್ಳಲಾಗುವುದು. ಕೇವಲ 7 ವರ್ಷಕ್ಕಿಂತ ಕಡಿಮೆ ಸೇವೆ ಇರುವ ಜೆಒಸಿ ವಿಲೀನ ಉಪನ್ಯಾಸಕರಿಗೆ ಬಿ.ಇಡಿ ವಿನಾಯ್ತಿ ನೀಡಲು ಪರಿಶೀಲಿಸಲಾಗುವುದು ಎಂದೂ ಸಚಿವರು ತಿಳಿಸಿದರು.
ಪ್ರಿನ್ಸಿಪಾಲರ ನೇರ ನೇಮಕ, ಉಪನ್ಯಾಸಕರಿಂದ ಪ್ರಾಚಾರ್ಯರ ಸ್ಥಾನಕ್ಕೆ ಮತ್ತು ಪ್ರಾಚಾರ್ಯರಿಂದ ಉಪನಿರ್ದೇಶಕರ ಸ್ಥಾನಕ್ಕೆ ಬಡ್ತಿ ಸೇರಿದಂತೆ ಸುಮಾರು 15ಕ್ಕೂ ಹೆಚ್ಚು ಬೇಡಿಕೆಗಳನ್ನು ಸಂಘಟನೆಯ ಪದಾಧಿಕಾರಿಗಳು ಗಮನಕ್ಕೆ ತಂದಿದ್ದು, ಸಾಧ್ಯವಾಗಬಹುದಾದ ಬೇಡಿಕೆಗಳನ್ನು ಈಡೇರಿಸಲು ಅಗತ್ಯ ಕ್ರಮ ವಹಿಸಬೇಕೆಂದು  ಸುರೇಶ್ ಕುಮಾರ್ ಇಲಾಖೆ ನಿರ್ದೇಶಕರಿಗೆ ನಿರ್ದೇಶನ ನೀಡಿದರು.

ಮೌಲ್ಯಮಾಪನ ಸಹಕಾರಕ್ಕೆ ಮನವಿ
ಕೋವಿಡ್ ಸಾಂಕ್ರಾಮಿಕ ರೋಗದ ಪ್ರಸರಣದ ಹಿನ್ನೆಲೆಯಲ್ಲಿ ಈಗಾಗಲೇ ಪದವಿ ಪೂರ್ವ ಕಾಲೇಜುಗಳು ತಡವಾಗಿ ಆರಂಭವಾಗಿರುವುದರಿಂದ ಮಕ್ಕಳು ಪರೀಕ್ಷೆಯತ್ತ ಮುಖ ಮಾಡಿದ್ದು ಅಧ್ಯಯನದಲ್ಲಿ ತೊಡಗಿದ್ದಾರೆ. ನಿಗದಿತ ಅವಧಿಯಲ್ಲಿ ಪರೀಕ್ಷೆ ಆರಂಭವಾಗಲಿದ್ದು, ಈ ವಿಷಮ ಕಾಲಘಟ್ಟದಲ್ಲಿ ಉಪನ್ಯಾಸಕರು ಉತ್ತರ ಪತ್ರಿಕೆಗಳ ಮೌಲ್ಯಮಾಪನದ ವಿಷಯದಲ್ಲಿ ಹೆಚ್ಚಿನ ಸಹಕಾರ ನೀಡಬೇಕೆಂದು ಕೋರಿದರು. ಇಂತಹ ಕಾಲಘಟ್ಟದಲ್ಲಿ ನಾವು ನಮ್ಮ ಮಕ್ಕಳಲ್ಲಿ ವಿಶ್ವಾಸ ಮೂಡಿಸಬೇಕಾಗಿರುವುದರಿಂದ ಮೌಲ್ಯಮಾಪನ ಬಹಿಷ್ಕಾರ ಸೇರಿದಂತೆ ಯಾವುದೇ ಪ್ರತಿಭಟನೆಗಳಿಗೆ ಮುಂದಾಗಬಾರದೆಂದೂ ಸಚಿವರು ಮನವಿ ಮಾಡಿದರು.

Tags: karnatakaPrimaru anf higher education departmentServices are come under sakalasuresh kumar
ShareTweetSendShare
Join us on:

Related Posts

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

by Shwetha
August 20, 2026
0

ಮುಂಬೈ: ಕನ್ನಡದ 'ಸೂರ್ಯವಂಶ' ಸೇರಿದಂತೆ ಬಹುಭಾಷಾ ಸಿನಿಮಾಗಳಲ್ಲಿ ಅಭಿನಯಿಸಿ ಪ್ರೇಕ್ಷಕರ ಮನಗೆದ್ದಿರುವ ಖ್ಯಾತ ನಟಿ ಇಶಾ ಕೊಪ್ಪಿಕರ್ ಇದೀಗ ತಮ್ಮ ಸಾಮಾಜಿಕ ಜಾಲತಾಣದ ವೀಡಿಯೊ ಮೂಲಕ ಭಾರಿ...

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

by Shwetha
August 20, 2026
0

ಬೆಳೆಗಳಿಗೆ ಕ್ರಿಮಿನಾಶಕ ಸಿಂಪಡಿಸುವಾಗ ಸೂಕ್ತ ಮುನ್ನೆಚ್ಚರಿಕೆ ವಹಿಸದಿದ್ದರೆ ರೈತರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ ಎಂಬುದು ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (KIMS)...

ಇರಾನ್ ವಿರುದ್ಧ UAE ಕಠಿಣ ಕ್ರಮ; ಎಲ್ಲಾ ವ್ಯಾಪಾರ, ಹಣಕಾಸು ವಹಿವಾಟು ಸ್ಥಗಿತ

ಇರಾನ್ ವಿರುದ್ಧ UAE ಕಠಿಣ ಕ್ರಮ; ಎಲ್ಲಾ ವ್ಯಾಪಾರ, ಹಣಕಾಸು ವಹಿವಾಟು ಸ್ಥಗಿತ

by Shwetha
August 20, 2026
0

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚುತ್ತಿರುವ ನಡುವೆಯೇ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ವಾಣಿಜ್ಯ ವಿನಿಮಯ ಹಾಗೂ ಹಣಕಾಸು ವಹಿವಾಟುಗಳನ್ನು ಮುಂದಿನ ಸೂಚನೆ...

ಜ್ಞಾನೇಶ್ ಕುಮಾರ್ ಕರೆದೊಯ್ಯಿರಿ, ಇವಿಎಂ ಉಚಿತವಾಗಿ ಕಳಿಸುತ್ತೇವೆ: ಡೊನಾಲ್ಡ್ ಟ್ರಂಪ್‌ಗೆ ಕಾಂಗ್ರೆಸ್ ನೀಡಿದ ವಿಚಿತ್ರ ಆಫರ್

ಜ್ಞಾನೇಶ್ ಕುಮಾರ್ ಕರೆದೊಯ್ಯಿರಿ, ಇವಿಎಂ ಉಚಿತವಾಗಿ ಕಳಿಸುತ್ತೇವೆ: ಡೊನಾಲ್ಡ್ ಟ್ರಂಪ್‌ಗೆ ಕಾಂಗ್ರೆಸ್ ನೀಡಿದ ವಿಚಿತ್ರ ಆಫರ್

by Shwetha
August 20, 2026
0

ಹೊಸದೆಹಲಿ: ಭಾರತದ ಚುನಾವಣಾ ವ್ಯವಸ್ಥೆ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿರುವುದಕ್ಕೆ ಕಾಂಗ್ರೆಸ್ ಪಕ್ಷ ತೀವ್ರವಾಗಿ...

ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್  ತಿರುಗೇಟು

ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್ ತಿರುಗೇಟು

by Shwetha
August 20, 2026
0

ಹೊಸದೆಹಲಿ: ಬಿಜೆಪಿ ಸಂಸದೆ ಹಾಗೂ ನಟಿ ಕಂಗನಾ ರಣಾವತ್ ಮತ್ತು ಯೋಗ ಗುರು ಬಾಬಾ ರಾಮ್‌ದೇವ್ ನಡುವಿನ ವಾಕ್ಸಮರ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಜಿನ್ ಝಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram