ADVERTISEMENT
Saturday, March 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

Shwetha by Shwetha
March 28, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಬೆಂಗಳೂರು: ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡುವ ಮೂಲಕ ದೇಶದ ಜನತೆಗೆ ತುಸು ನೆಮ್ಮದಿ ನೀಡಿದೆ. ಕೇಂದ್ರದ ಈ ನಡೆ ತೈಲ ಕಂಪನಿಗಳ ಮೇಲಿನ ಆರ್ಥಿಕ ಹೊರೆಯನ್ನು ತಗ್ಗಿಸಿದೆ. ಆದರೆ, ಈಗ ಚೆಂಡು ರಾಜ್ಯ ಸರ್ಕಾರದ ಅಂಗಳದಲ್ಲಿದ್ದು, ತೈಲ ಸಂಪತ್ತಿನಿಂದ ರಾಜ್ಯ ಬೊಕ್ಕಸಕ್ಕೆ ಹರಿದು ಬರುತ್ತಿರುವ ಅಪಾರ ಲಾಭದಲ್ಲಿ ಒಂದಿಷ್ಟು ಪಾಲನ್ನು ತ್ಯಾಗ ಮಾಡಿ, ಸಂಕಷ್ಟದಲ್ಲಿರುವ ಗ್ರಾಹಕರಿಗೆ ನೆರವಾಗಬೇಕು ಎಂಬ ಒತ್ತಾಯ ರಾಜ್ಯದಾದ್ಯಂತ ಪ್ರಬಲವಾಗಿ ಕೇಳಿಬರುತ್ತಿದೆ.

ಕೇಂದ್ರದ ಹಾದಿಯನ್ನೇ ತುಳಿಯಲಿದೆಯೇ ರಾಜ್ಯ?

Related posts

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

March 28, 2026
ದೇಶದಲ್ಲಿ ಲಾಕ್‌ಡೌನ್ ಇಲ್ಲ.. ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಲಾಕ್‌ಡೌನ್ ಇಲ್ಲ.. ಕೇಂದ್ರದ ಸ್ಪಷ್ಟನೆ

March 28, 2026

ಪೆಟ್ರೋಲ್ ಮತ್ತು ಡೀಸೆಲ್ ವಹಿವಾಟನ್ನು ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗಿಡಲಾಗಿದೆ. ಹೀಗಾಗಿ ರಾಜ್ಯ ಸರ್ಕಾರಗಳು ವ್ಯಾಟ್ (ಮೌಲ್ಯವರ್ಧಿತ ತೆರಿಗೆ) ಮೂಲಕ ಮಾರಾಟ ತೆರಿಗೆಯನ್ನು ಸಂಗ್ರಹಿಸುತ್ತಿವೆ. ಗಮನಾರ್ಹ ಸಂಗತಿಯೆಂದರೆ, ಈ ತೆರಿಗೆ ಪದ್ಧತಿಯಿಂದಾಗಿ ಕೇಂದ್ರ ಸರ್ಕಾರಕ್ಕೆ ಸಮಾನವಾದ ಲಾಭಾಂಶವನ್ನು ರಾಜ್ಯ ಸರ್ಕಾರಗಳು ಕೂಡ ಪಡೆಯುತ್ತಿವೆ. ಕೇಂದ್ರ ಸರ್ಕಾರ ಜನಸಾಮಾನ್ಯರ ಹಿತದೃಷ್ಟಿಯಿಂದ ಅಬಕಾರಿ ಸುಂಕ ಕಡಿತ ಮಾಡಿರುವಾಗ, ರಾಜ್ಯ ಸರ್ಕಾರವೂ ತನ್ನ ಮಾರಾಟ ತೆರಿಗೆಯನ್ನು ತಗ್ಗಿಸಿ ಜನರ ಮೇಲಿನ ಹೊರೆಯನ್ನು ಇಳಿಸಬೇಕೆಂಬುದು ನಾಗರಿಕರ ವಾದವಾಗಿದೆ.

ದೇಶದಲ್ಲೇ ಅತಿ ಹೆಚ್ಚು ತೆರಿಗೆ ವಿಧಿಸುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ

ಅಂಕಿಅಂಶಗಳನ್ನು ಗಮನಿಸಿದರೆ ಕರ್ನಾಟಕದಲ್ಲಿ ವಾಹನ ಸವಾರರ ಜೇಬಿಗೆ ಕತ್ತರಿ ಬೀಳುತ್ತಿರುವುದು ಸ್ಪಷ್ಟವಾಗುತ್ತದೆ. ಪ್ರಸ್ತುತ ಕರ್ನಾಟಕ ಸರ್ಕಾರವು ಪೆಟ್ರೋಲ್ ಮೇಲೆ ಶೇಕಡಾ 29.84ರಷ್ಟು ಮತ್ತು ಡೀಸೆಲ್ ಮೇಲೆ ಶೇಕಡಾ 21.17ರಷ್ಟು ಮಾರಾಟ ತೆರಿಗೆಯನ್ನು ವಿಧಿಸುತ್ತಿದೆ. ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ, ತೆಲಂಗಾಣ, ಆಂಧ್ರಪ್ರದೇಶ ಮತ್ತು ಕೇರಳವನ್ನು ಹೊರತುಪಡಿಸಿ ಕರ್ನಾಟಕವೇ ಪೆಟ್ರೋಲ್ ಮೇಲೆ ಅತೀ ಹೆಚ್ಚು ಮಾರಾಟ ತೆರಿಗೆ ವಸೂಲಿ ಮಾಡುವ ರಾಜ್ಯವಾಗಿದೆ. ಇನ್ನು ಡೀಸೆಲ್ ವಿಷಯಕ್ಕೆ ಬಂದರೆ, ಅಸ್ಸಾಂ, ಆಂಧ್ರಪ್ರದೇಶ, ಛತ್ತೀಸ್‌ಗಢ, ಜಾರ್ಖಂಡ್‌, ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯಗಳಿಗಿಂತಲೂ ಕರ್ನಾಟಕದಲ್ಲಿ ಹೆಚ್ಚಿನ ತೆರಿಗೆಯನ್ನು ಸಂಗ್ರಹಿಸಲಾಗುತ್ತಿದೆ.

ತೆರಿಗೆ ರಹಿತ ಬೆಲೆ ಕೇವಲ 60 ರೂಪಾಯಿ!

ಒಂದು ವೇಳೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಧಿಸುತ್ತಿರುವ ಈ ದುಬಾರಿ ಹೆಚ್ಚುವರಿ ತೆರಿಗೆಗಳನ್ನು ಕಡಿತಗೊಳಿಸಿದರೆ ಅಥವಾ ಸಂಪೂರ್ಣವಾಗಿ ತೆಗೆದುಹಾಕಿದರೆ, ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಕೇವಲ 60 ರೂಪಾಯಿಗಳ ಸರಾಸರಿ ದರದಲ್ಲಿ ಗ್ರಾಹಕರಿಗೆ ಲಭ್ಯವಾಗಬಹುದು. ಆದರೆ ಡೀಲರ್ ಕಮಿಷನ್, ಕೇಂದ್ರದ ಅಬಕಾರಿ ಸುಂಕ ಮತ್ತು ರಾಜ್ಯದ ಮಾರಾಟ ತೆರಿಗೆ ಸೇರಿದಾಗ ಬೆಲೆ ನೂರರ ಗಡಿ ದಾಟುತ್ತಿದೆ ಅಥವಾ ಅದರ ಆಸುಪಾಸಿನಲ್ಲಿ ಉಳಿದು ಗ್ರಾಹಕರ ಜೀವ ಹಿಂಡುತ್ತಿದೆ.

ಜಾಗತಿಕ ಯುದ್ಧದ ಕರಿನೆರಳು ಮತ್ತು ಬೆಲೆ ಏರಿಕೆ ಭೀತಿ

ಅಂತರರಾಷ್ಟ್ರೀಯ ಮಟ್ಟದಲ್ಲಿ ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಉಲ್ಬಣಗೊಂಡಿರುವ ಸಂಘರ್ಷ ಮತ್ತು ಯುದ್ಧದ ವಾತಾವರಣದಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಗಣನೀಯವಾಗಿ ಏರಿಕೆಯಾಗಿದೆ. ಪ್ರತಿ ಬ್ಯಾರೆಲ್ ಕಚ್ಚಾ ತೈಲದ ಬೆಲೆ 109 ರೂಪಾಯಿಗೆ ತಲುಪಿದೆ. ಇದರ ನೇರ ಪರಿಣಾಮ ದೇಶೀಯ ಮಾರುಕಟ್ಟೆಯ ಮೇಲಾಗಿ ಇಂಧನ ಬೆಲೆ ಮತ್ತಷ್ಟು ಹೆಚ್ಚಾಗುವ ಆತಂಕವಿತ್ತು. ಈ ಅಪಾಯವನ್ನು ಮನಗಂಡ ಕೇಂದ್ರ ಸರ್ಕಾರ, ಮುಂಜಾಗ್ರತಾ ಕ್ರಮವಾಗಿ 10 ರೂಪಾಯಿ ಅಬಕಾರಿ ಸುಂಕವನ್ನು ಕಡಿಮೆ ಮಾಡಿ ಸಂಭವನೀಯ ಬೆಲೆ ಏರಿಕೆಗೆ ತಡೆ ಒಡ್ಡಿದೆ.

ಗ್ಯಾರಂಟಿ ಯೋಜನೆಗಳ ಹೊರೆ ಮತ್ತು ಜನರ ಸಂಕಷ್ಟ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಉಂಟಾದ ಆರ್ಥಿಕ ಹೊರೆಯನ್ನು ಸರಿದೂಗಿಸಲು ಕಳೆದ ವರ್ಷದ ಏಪ್ರಿಲ್ ತಿಂಗಳಲ್ಲಿ ಪ್ರತಿ ಲೀಟರ್ ಇಂಧನದ ಮೇಲೆ ತಲಾ 2 ರೂಪಾಯಿ ಮಾರಾಟ ತೆರಿಗೆಯನ್ನು ಹೆಚ್ಚಿಸಿತ್ತು. ಆಗಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನರಿಗೆ ಸರ್ಕಾರದ ಈ ನಿರ್ಧಾರ ಗಾಯದ ಮೇಲೆ ಬರೆ ಎಳೆದಂತಾಗಿತ್ತು.

ಕಳೆದ ಒಂದು ವರ್ಷದಿಂದಲೂ ರಾಜ್ಯದ ಜನತೆ ಸರ್ಕಾರದ ಈ ದರ ಏರಿಕೆಯನ್ನು ಮೌನವಾಗಿ ಸಹಿಸಿಕೊಂಡಿದ್ದಾರೆ. ಆದರೆ ಪ್ರಸ್ತುತ ಯುದ್ಧಕಾಲದ ಸನ್ನಿವೇಶದಲ್ಲಿ ಎಲ್ಲಾ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ಜನಸಾಮಾನ್ಯರ ಬದುಕು ದುಸ್ತರವಾಗಿದೆ. ಇಂತಹ ಕಠಿಣ ಸಮಯದಲ್ಲಿ, ರಾಜ್ಯ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ತಕ್ಷಣವೇ ಕಡಿಮೆ ಮಾಡಿ, ಜನಸಾಮಾನ್ಯರಿಗೆ ನೆಮ್ಮದಿಯ ನಿಟ್ಟುಸಿರು ಬಿಡಲು ಅವಕಾಶ ಮಾಡಿಕೊಡಬೇಕೆಂದು ಆರ್ಥಿಕ ತಜ್ಞರು ಹಾಗೂ ಪ್ರಜ್ಞಾವಂತ ನಾಗರಿಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ShareTweetSendShare
Join us on:

Related Posts

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

by Shwetha
March 28, 2026
0

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ಫುಡ್ ಡೆಲಿವರಿ ಆ್ಯಪ್‌ಗಳು ಜನರ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ ಈ ಆ್ಯಪ್‌ಗಳು ವಿಧಿಸುವ ಅತಿಯಾದ ಸೇವಾ ಶುಲ್ಕ ಮತ್ತು ಡೆಲಿವರಿ...

ದೇಶದಲ್ಲಿ ಲಾಕ್‌ಡೌನ್ ಇಲ್ಲ.. ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಲಾಕ್‌ಡೌನ್ ಇಲ್ಲ.. ಕೇಂದ್ರದ ಸ್ಪಷ್ಟನೆ

by Shwetha
March 28, 2026
0

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ದೇಶದಲ್ಲಿ ಬಿಕ್ಕಟ್ಟು ಉಂಟಾಗಿರುವ ಹಿನ್ನೆಲೆ, ಲಾಕ್‌ಡೌನ್ ಅನಿವಾರ್ಯ ಎಂಬ ವದಂತಿಗಳು ಹರಿದಾಡುತ್ತಿವೆ. ಆದರೆ ಈ ಸುದ್ದಿಗಳನ್ನು ಸಚಿವ ಹರ್ದೀಪ್ ಸಿಂಗ್ ಪುರಿ ತಳ್ಳಿ...

1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ; ಎಲ್ಲ ಶಾಲೆಗಳಿಗೆ ಅನ್ವಯ

1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ; ಎಲ್ಲ ಶಾಲೆಗಳಿಗೆ ಅನ್ವಯ

by Shwetha
March 28, 2026
0

ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷಕ್ಕೆ 1ನೇ ತರಗತಿ ಪ್ರವೇಶದ ವಯೋಮಿತಿಯನ್ನು 60 ದಿನಗಳವರೆಗೆ ಸಡಿಲಗೊಳಿಸಿದೆ. ಇದುವರೆಗೆ ಜೂನ್ 1ರೊಳಗೆ ಮಗುವಿಗೆ 6 ವರ್ಷ ವಯಸ್ಸು ಪೂರ್ಣವಾಗಿರಬೇಕು...

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

by Shwetha
March 28, 2026
0

ಬೆಂಗಳೂರು: ದಾವಣಗೆರೆ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಪಾಳಯದಲ್ಲಿ ಎದುರಾಗಿದ್ದ ಬಂಡಾಯದ ಭೀತಿ ಇದೀಗ ಸಂಪೂರ್ಣವಾಗಿ ತಿಳಿಯಾಗಿದೆ. ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯವೆದ್ದು ಸ್ವತಂತ್ರ ಅಭ್ಯರ್ಥಿಯಾಗಿ...

SSLC ಪರೀಕ್ಷೆಯಲ್ಲಿ ಭಾರೀ ಬದಲಾವಣೆ; ತೃತೀಯ ಭಾಷೆಗೆ ಅಂಕ ಇಲ್ಲ

SSLC ಪರೀಕ್ಷೆಯಲ್ಲಿ ಭಾರೀ ಬದಲಾವಣೆ; ತೃತೀಯ ಭಾಷೆಗೆ ಅಂಕ ಇಲ್ಲ

by Shwetha
March 28, 2026
0

SSLC ವಿದ್ಯಾರ್ಥಿಗಳಿಗೆ ಮಹತ್ವದ ಬದಲಾವಣೆ ಘೋಷಣೆಯಾಗಿದ್ದು, ಇನ್ನು ಮುಂದೆ ತೃತೀಯ ಭಾಷೆಗೆ ಅಂಕ ನೀಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. 2026ರಿಂದ ನಡೆಯುವ SSLC...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram