“ಪರೀಕ್ಷೆ ಇಲ್ಲದೇ ಪಿಯು, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳನ್ನ ಪಾಸ್ ಮಾಡಿ”
ಬೆಂಗಳೂರು : ಎಸೆಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳಿಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡಿ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದಾರೆ.
ಸಚಿವರು ಹಠ ಮಾಡಬಾರದು. ಕೇಂದ್ರದ ಹಲವು ಪರೀಕ್ಷೆಗಳು ರದ್ದಾಗಿವೆ. ಕೆಲ ರಾಜ್ಯಗಳಲ್ಲಿ ಮನೆಯಲ್ಲೇ ಪರೀಕ್ಷೆ ಮಾಡಲು ಅವಕಾಶ ಕೊಟ್ಟಿದ್ದಾರೆ. ಆದ್ರೆ ಇಲ್ಲಿ ಮಾತ್ರ ಪರೀಕ್ಷೆ ಮಾಡಬೇಕೆಂಬ ಹಠ ಯಾಕೆ ಎಂದು ವಾಟಾಳ್ ನಾಗರಾಜ್ ಪ್ರಶ್ನಿಸಿದ್ದಾರೆ.
ಇನ್ನು ಈ ಬಗ್ಗೆ ಕ್ಯಾಬಿನೆಟ್ ತೀರ್ಮಾನ ಆಗಲಿ, ರಾಜ್ಯದ ಪೋಷಕರ ಅಭಿಪ್ರಾಯ ಪಡೆಯಲಿ. ವಿದ್ಯಾರ್ಥಿಗಳ ಜೀವ ಬಗ್ಗೆ ಶಿಕ್ಷಣ ಸಚಿವರು ಚಿಂತಿಸ್ಬೇಕು. ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಜೋರಾಗಿದೆ.
ಪೋಷಕರು ಸಹ ಮಕ್ಕಳ ಪರೀಕ್ಷೆಗೆ ಕಳಿಸಬೇಕೆಂದ್ರೆ ಭಯ ಪಡ್ತಿದ್ದಾರೆ. ಯಾವುದೇ ಕಾರಣಕ್ಕೂ ಪರೀಕ್ಷೆ ನಡೆಸಬೇಡಿ ಎಂದು ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ.