Puneet Tableau ಜಂಬು ಸವಾರಿಯಲ್ಲಿ ಪುನೀತ್ ರಾಜ್ ಕುಮಾರ್ ಸ್ತಬ್ದಚಿತ್ರ…
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಈ ಭಾರಿ ಗಡಿ ಜಿಲ್ಲೆ ಚಾಮರಾಜನಗರದಿಂದ ಅಪ್ಪು ಸ್ತಬ್ಧಚಿತ್ರ ಸವಾರಿಯಲ್ಲಿ ಪ್ರದರ್ಶಿಸಲಾಗುತ್ತಿದೆ.
ಚಾಮರಾಜನರ ಜಿಲ್ಲೆಯಿಂದ ತವರಿನ ನಂಟು ಹೊಂದಿದ್ದ ದಿವಂಗತ ನಟ ಪುನೀತ್ ರಾಜ್ಕುಮಾರ್ ಅವರಿಗೆ ಸ್ತಬ್ಧ ಚಿತ್ರದ ಮೂಲಕ ಗೌರವ ಸಲ್ಲಿಸಲು ಚಾಮರಾಜನಗರ ಜಿಲ್ಲಾ ಪಂಚಾಯತ್ ಮುಂದಾಗಿದೆ.
ಹನೂರಿನ ಕಲಾವಿದ ಮಹಾದೇವ್ ಎಂಬುವರೊಟ್ಟಿಗೆ 15 ಜನರ ತಂಡ ಈ ಸ್ತಬ್ಧ ಚಿತ್ರ ತಯಾರಿಸಿದ್ದಾರೆ. “ಪ್ರಕೃತಿ ಮಡಿಲಿನ ಹುಲಿ ಮತ್ತು ಆನೆ ಅರಣ್ಯಧಾಮ” ಎಂದು ಸ್ತಬ್ಧ ಚಿತ್ರಕ್ಕೆ ಹೆಸರಿಡಲಾಗಿದೆ. ಜಿಲ್ಲೆಯ ಪ್ರಕೃತಿ, ವನ್ಯಜೀವಿ ಸಂಪತ್ತು, ಪವಾಡ ಪುರುಷ ಮಲೆ ಮಹದೇಶ್ವರ ಸ್ವಾಮಿಯನ್ನು ಸ್ತಬ್ಧ ಚಿತ್ರದಲ್ಲಿ ಬಿಂಬಿಸಲಾಗಿದೆ.
ಸ್ತಬ್ಧಚಿತ್ರದ ಮುಂಭಾಗ ದೊಡ್ಡ ಹುಲಿಯ ಮುಖ ಇದೆ. ಹಸಿರು ಆವರಿಸಿರುವ ಬೆಟ್ಟ, ಆನೆ ಸೇರಿದಂತೆ ಇತರೆ ಪ್ರಾಣಿಗಳು, ಮಧ್ಯದಲ್ಲಿ ಹುಲಿಯ ಮೇಲೆ ಕುಳಿತಿರುವ ಮಲೆ ಮಹದೇಶ್ವರ ಸ್ವಾಮಿಯ ಪ್ರತಿಕೃತಿ ಹಾಗೂ ಹಿಂಭಾಗದಲ್ಲಿ ಮಂದಸ್ಮಿತ ಪುನೀತ್ರಾಜ್ಕುಮಾರ್ ಅವರ ದೊಡ್ಡ ಪ್ರತಿಕೃತಿ ಅಳವಡಿಸಲಾಗಿದೆ.
Puneet Tableau: puneeth Raj kumar tableau in mysuru dasara jambu savvaari