ಅಪ್ಪು ಪುಣ್ಯಸ್ಮರಣೆ | ಪುನೀತ್ ಅಭಿಮಾನಿಗಳಿಗೆ `ದೊಡ್ಮನೆ’ ಅನ್ನಸಂತರ್ಪಣೆ puneeth-rajkumar
ಬೆಂಗಳೂರು : ಕನ್ನಡದ ರಾಜರತ್ನ ಪುನೀತ್ ರಾಜಕುಮಾರ್ ಅಗಲಿಕೆ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ನಗರದ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಅನ್ನಸಂತರ್ಪಣೆ ಕಾರ್ಯ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ 25 ಸಾವಿರಕ್ಕೂ ಅಧಿಕ ಮಂದಿ ಆಗಮಿಸುವ ನಿರೀಕ್ಷೆ ಇದೆ.
ಈ ಹಿನ್ನೆಲೆಯಲ್ಲಿ ಅರಮನೆ ಮೈದಾನದ ಸುತ್ತ ಮುತ್ತ 1 ಸಾವಿರ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಜೊತೆಗೆ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
ಗೇಟ್ ನಂ.1 ಕೃಷ್ಣ ವಿಹಾರದಲ್ಲಿ ಸಾರ್ವಜನಿಕರಿಗೆ ವಾಹನ ನಿಲುಗಡೆ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಗೇಟ್ ನಂ.4 ಗಾಯತ್ರಿ ವಿಹಾರದಲ್ಲಿ ವಿಐಪಿ ವಾಹನಗಳ ಪಾಕಿರ್ಂಗ್ಗೆ ಅವಕಾಶ ಕಲ್ಪಿಸಲಾಗಿದೆ. ಗೇಟ್ ನಂ.2ರಲ್ಲಿ ಅನ್ನ ಸಂತರ್ಪಣೆ ಕಾರ್ಯ ನಡೆಯಲಿದೆ.