ಪುನೀತ್ ರಾಜ್ ಕುಮಾರ್ ಅವರ 11ನೇ ದಿನದ ಪುಣ್ಯಾರಾಧನೆಗೆ ಸಿದ್ಧತೆ
ಬೆಂಗಳೂರು : ಪುನೀತ್ ರಾಜ್ ಕುಮಾರ್ ಅವರು ಇಂದಿಗೆ ನಮ್ಮನ್ನೆಲ್ಲ ಅಗಲಿ 10 ದಿನ ಆಯ್ತು… ನಾಳೆ ಅಂದ್ರೆ ಸೋಮವಾರ 11ನೇ ದಿನದ ಪುಣ್ಯಾರಾಧನೆಗೆ ಸರ್ಕಾರದ ವತಿಯಿಂದ ಹಾಗೂ ಕುಟುಂಬಸ್ಥರು ಸಿದ್ಧತೆ ನಡೆಸಿಕೊಳ್ತಾಯಿದ್ದಾರೆ. ನಾಳೆ ಸಂಜೆ ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿ ಪುನೀತ್ ಸ್ಮರಣಾರ್ಥ, ಪುಷ್ಪಾಂಜಲಿ, ದೀಪಾಂಜಲಿ, ಗೀತಾಂಜಲಿ ಮತ್ತು ಭಾಷ್ಪಾಂಜಲಿ ಕಾರ್ಯಕ್ರಮವನ್ನು ಚಿತ್ರಪ್ರದರ್ಶಕರ ಸಂಘ ಹಮ್ಮಿಕೊಂಡಿದೆ. ಇನ್ನೂ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಸುಮಾರು 2 ಸಾವಿರ ಮಂದಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಸಂಚಾರದಲ್ಲಿ ಅಡಚಣೆ ಉಂಟಾಗದ ರೀತಿಯಲ್ಲಿ ಸಂಚಾರಿ ಪೊಲೀಸರು ಅಗತ್ಯ ಸಿದ್ಧತೆ ಮಾಡಿಕೊಳ್ತಿದ್ದಾರೆ.
ಈ ಮಧ್ಯೆ ಕಂಠೀರವ ಸ್ಟುಡಿಯೋದಲ್ಲಿ ಅಭಿಮಾನಿಗಳು ಮಳೆ , ಬಿಸಿಲು ಲೆಕ್ಕಿಸದೇ ಸಾವಿರಾರು ಸಂಖ್ಯೆಯಲ್ಲಿ ಬಂದು ಅಪ್ಪು ಸಮಾಧಿ ದರ್ಶನ ಪಡೆದು ಕಣ್ಣೀರು ಹಾಕುತ್ತಿದ್ದಾರೆ. ಇನ್ನೂ ಕೇವಲ 5 ದಿನಗಳ ಅಂತರದಲ್ಲೇ ಸುಮಾರು 2 ಲಕ್ಷಕ್ಕೂ ಅಧಿಕ ಅಭಿಮಾನಿಗಳು ಪುನೀತ್ ಸಮಾಧಿ ದರ್ಶನ ಮಾಡಿದ್ದಾರೆ. ಅಲ್ಲದೇ ಹಲವರುಅಪ್ಪು ಸಮಾಧಿ ಎದುರು ಮದುವೆಗೆ ಅವಕಾಶ ಕೋರಿ ಬರುತ್ತಿರುವುದು ಕೂಡ ಸಾಮಾನ್ಯವಾಗಿದೆ. ಇನ್ನೂ ನವೆಂಬರ್ 14ರಂದು ಫಿಲಂ ಚೇಂಬರ್ ಅರಮನೆ ಆವರಣದಲ್ಲಿ ಆಯೋಜಿಸಿರುವ ಅಪ್ಪು ನುಡಿನಮನ ಕಾರ್ಯಕ್ರಮಕ್ಕೆ ರಾಜಕೀಯ ನಾಯಕರು, ದಕ್ಷಿಣ ಭಾರತದ ನಟರಿಗೆ ಆಹ್ವಾನ ನೀಡಲಾಗಿದೆ.