ಅಪ್ಪು ಅಗಲಿಕೆಗೆ ಸಂತಾಪ ಸೂಚಿಸಿದ ಮೋದಿ , ಗಣ್ಯರು..!
ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಇಂದು ನಮ್ಮನ್ನೆಲ್ಲ ಅಗಲಿರುವ ಸುದ್ದಿಯನ್ನ ಅರಗಿಸಿಕೊಳ್ಳಲಾಗ್ತಿಲ್ಲ. ನಿಜವೆಂದೂ ನಂಬಲಾಗ್ತಿಲ್ಲ. ಇಡೀ ಕರುನಾಡಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ. ಅಭಿಮಾನಿಗಳ ದುಃಖ ಮುಗಿಲು ಮುಟ್ಟಿದೆ.
ಇನ್ನೂ ಪುನೀತ್ ರಾಜ್ ಕುಮಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ , ಮಾಜಿ ಸಿಎಂಗಳಾದ ಯಡಿಯೂರಪ್ಪ, ಸಿದ್ದರಾಮಯ್ಯ, ಮಾಜಿ ಪ್ರಧಾನಿ ದೇವೇಗೌಡರು ಸೇರಿದಂತೆ ರಾಜ್ಯ ಹಾಗೂ ದೇಶದ ಸೆಲೆಬ್ರಿಟಿಗಳು , ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ. ಮೋದಿ ಅವರು ಈ ಬಗ್ಗೆ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಇನ್ನೂ ಅನೇಕ ಗಣ್ಯರು ಅಪ್ಪು ಅಗಲಿಕಿಗೆ ಕಂಬನಿ ಮಿಡಿಯುತ್ತಿದ್ದಾರೆ.