ಚುನಾವಣೆಗಳ ಮೇಲೆ ಯಾಕೆ ನಿರ್ಬಂಧ ಹೇರಿಲ್ಲ… ಥಿಯೇಟರ್ ಗಳನ್ನೇ ಟಾರ್ಗೆಟ್ ಮಾಡ್ತರೋದು ಯಾಕೆ..? – ಅಪ್ಪು ಆಕ್ರೋಶ..!
ಬೆಂಗಳೂರು : ಚಿತ್ರ ಮಂದಿರಗಳಲ್ಲಿ ಶೇ.50 ಸೀಟಿಂಗ್ ವ್ಯವಸ್ಥೆಯ ಸರ್ಕಾರದ ನೀತಿಯನ್ನ ಪುನೀತ್ ರಾಜ್ ಕುಮಾರ್ ತೀವ್ರವಾಗಿ ಖಂಡಿಸಿ ಆಕ್ರೋಶ ಹೊರಹಾಕಿದ್ದಾರೆ. ಚುನಾವಣಾ ರ್ಯಾಲಿ, ಚಟುವಟಿಕೆಗಳಿಗೆ ನಿರ್ಬಂಧ ಹೇರಿಲ್ಲ ಆದರೆ ಸಿನಿಮಾ ಕ್ಷೇತ್ರವನ್ನೇ ಟಾರ್ಗೆಟ್ ಮಾಡಲಾಗುತ್ತಿದೆ. ದಯವಿಟ್ಟು ಶೇ.100ರಷ್ಟು ಭರ್ತಿಗೆ ಅವಕಾಶ ಮಾಡಿಕೊಡಿ ಎಂದು ಸರ್ಕಾರಕ್ಕೆ ಅಪ್ಪು ಮನವಿ ಮಾಡಿಕೊಮಡಿದ್ದಾರೆ.
ಫೇಸ್ಬುಕ್ ಲೈವ್ ಮಾಡಿ ಮಾತನಾಡಿರುವ ಪುನೀತ್ ರಾಜ್ ಕುಮಾರ್ ಮಾತನಾಡಿರುವ ಅವರು, ಹೆಚ್ಚು ಜನ ಕುಟುಂಬ ಸಮೇತರಾಗಿ ಚಿತ್ರ ಮಂದಿಗಳಿಗೆ ಬಂದು ಸಿನಿಮಾ ನೋಡುತ್ತಿದ್ದಾರೆ. ಹೀಗಾಗಿ ಸರ್ಕಾರ ಈ ನಿರ್ಧಾರವನ್ನು ಹಿಂಪಡೆಯಬೇಕು. ಶೇ.100 ಭರ್ತಿಗೆ ಅವಕಾಶ ನೀಡಬೇಕು. ಇದರಿಂದ ನಮಗೆ ತುಂಬಾ ಕಷ್ಟವಾಗುತ್ತದೆ ಎಂದು ಮನವಿ ಮಾಡಿದ್ದಾರೆ.
ಇದೇ ವೇಳೆ ಮಾಸ್ಕ್ ಬಳಸಿ, ಸಾಮಾಜಿಕ ಅಂತರ ಕಾಪಾಡಿ, ಅರ್ಹರೆಲ್ಲರೂ ಕೊರೊನಾ ವ್ಯಾಕ್ಸಿನ್ ಪಡೆಯಿರಿ ಈ ಮೂಲಕ ಸುರಕ್ಷಿತವಾಗಿರಿ. ಎಲ್ಲರೂ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ. ಪೈರಸಿಯನ್ನು ದೂರವಿಡಿ, ನೀವೇ ಪವರ್ ಆಫ್ ಯೂತ್ ಎಂದು ಪುನೀತ್ ರಾಜ್ ಕುಮಾರ್ ಹೇಳಿದ್ದಾರೆ. ತುಂಬಾ ಪ್ರೀತಿಯಿಂದ ಯುವರತ್ನ ಚಿತ್ರವನ್ನು ಒಪ್ಪಿಕೊಂಡಿದ್ದೀರಿ, ಯಶಸ್ವಿಗೊಳಿಸಿದ್ದೀರಿ. ಹಬ್ಬದ ರೀತಿಯಲ್ಲಿ ಸಿನಿಮಾವನ್ನು ಸ್ವೀಕರಿಸಿ, ಸಂಭ್ರಮಿಸಿದ ರೀತಿ, ಪ್ರೀತಿ, ವಿಶ್ವಾಸಕ್ಕೆ ಏನು ಹೇಳಬೇಕೋ ತಿಳಿಯುತ್ತಿಲ್ಲ, ನಿಮ್ಮೆಲ್ಲರ ಪ್ರೀತಿಗೆ ಚಿರಋಣಿ ಎಂದು ಮಾತನಾಡಿದ್ದಾರೆ. ಇತ್ತ ಅಪ್ಪು ಭಾವುಕರಾಗಿರುವುದನ್ನ ಕಂಡ ಅಭಿಮಾನಿಗಳು ನಾವು ನಿಮ್ಮೊಂದಿಗಿದ್ದೇವೆ, ಸರ್ಕಾರದ ನಡೆಯನ್ನ ಖಂಡಿಸುತ್ತೇವೆ ಎಂದು ಅಪ್ಪುಗೆ ಸಾಥ್ ನೀಡಿದ್ದಾರೆ.
ಥಿಯೇಟರ್ ಗಳಲ್ಲಿ ಶೇ.50ರಷ್ಟು ಮಾತ್ರ ಅವಕಾಶ… ಕಿಚ್ಚ ಸುದೀಪ್ ಹೇಳಿದ್ದೇನು..?
ಮಾ. 31ಕ್ಕೆ ಹೇಳಿದ್ರೂ ಸಿನಿಮಾ ರಿಲೀಸ್ ಮಾಡುತ್ತಿರಲಿಲ್ಲ… ಸರ್ಕಾರದ ನಡೆ ವಿರುದ್ಧ ಅಪ್ಪು ಆಕ್ರೋಶ..!