Punjab Election – ಆಪ್ ಅಧಿಕಾರಕ್ಕೆ ಬಂದರೆ ಜನರ ಮೇಲೆ ಹೊಸ ತೆರಿಗೆ ಇರುವುದಿಲ್ಲ – ಕೇಜ್ರಿವಾಲ್
ಪಂಜಾಬ್ ನಲ್ಲಿ ಅಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಜನರಿಗೆ ಯಾವುದೇ ಹೊಸ ತೆರಿಗೆ ಹೊರೆಯನ್ನ ಏರುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ…
ಪಂಜಾಬ್ ಜಲಂಧರ್ ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನ ಉದ್ದೇಶಿಸಿ ಕೇಜ್ರಿವಾಲ್ ಮಾತನಾಡಿದದರು. ಮನೆ ಬಾಗಿಲಿಗೆ ಚಿಕಿತ್ಸೆಯ ಸೌಲಭ್ಯ ಒದಗಿಸುವ ಮೊಹಲ್ಲಾ ಕ್ಲೀನಿಕ್ ಗಳನ್ನ ಪ್ರಾರಂಭಿಸಲಾಗುವುದು ಎಂದು ಅಶ್ವಾಸನೆ ನೀಡಿದರು. ಪಂಜಾಬ್ ನಲ್ಲಿ 16000 ಕ್ಲೀನಿಕ್ ಗಳನ್ನ ನಿರ್ಮಿಸುವ ಭರವಸೆ ನೀಡಿದ್ದಾರೆ.
ಧರ್ಮವು ಖಾಸಗಿ ವಿಷಯವಾಗಿದೆ. ದೇವರನ್ನ ಪೂಜಿಸುವ ಹಕ್ಕು ಎಲ್ಲರಿಗೂ ಇದೆ. ಬಲವಂತದ ಧಾರ್ಮಿಕ ಮತಾಂತರದ ವಿರುದ್ಧ ಕಾನೂನು ರಚಿಸಬೇಕು ಈ ಮೂಲಕ ಯಾವ ವ್ಯಕ್ತಿಗೂ ಕಿರುಕುಳ ನೀಡಬಾರದು ಬೆದರಿಕೆಯೊಡ್ಡಬಾರದು ಎಂದು ಹೇಳಿದ್ದಾರೆ. 177 ವಿಧಾನಸಭಾ ಕ್ಷೇತ್ರಗಳಿರುವ ಪಂಜಾಬ್ ನಲ್ಲಿ ಫೆಬ್ರವರಿ 20 ರಂದು ಚುನಾವಣೆ ನಡೆಯಲಿದೆ. ಮಾರ್ಚ್ 10 ರಂದು ಎಣಿಕೆ ಕಾರ್ಯ ನಡೆಯಲಿದೆ.
Budget 2022 – ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಸ್ಪೀಕರ್…